AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Criminal Laws: ಬೆಂಗಳೂರಿನಲ್ಲಿ ಮೊದಲ ದಿನವೇ 39 ಹೊಸ ಪ್ರಕರಣಗಳು ದಾಖಲು

ಜುಲೈ 1 ರಂದು ದೇಶಾದ್ಯಂತ ಜಾರಿಗೆ ಬಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅಡಿ ಮೊದಲ ದಿನವೇ ಒಟ್ಟು 39 ಪ್ರಕರಣಗಳು ದಾಖಲಾಗಿವೆ. ಈ ಹೊಸ ಕಾನೂನುಗಳ ಅಡಿಯಲ್ಲಿ ವೈಟ್‌ಫೀಲ್ಡ್ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ದಾಖಲಾಗಿವೆ.

New Criminal Laws: ಬೆಂಗಳೂರಿನಲ್ಲಿ ಮೊದಲ ದಿನವೇ 39 ಹೊಸ ಪ್ರಕರಣಗಳು ದಾಖಲು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Jul 04, 2024 | 11:37 AM

Share

ಬೆಂಗಳೂರು, ಜುಲೈ.04: ದೇಶಾದ್ಯಂತ ಜುಲೈ 1 ರಿಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು (New Criminal Laws) ಜಾರಿಗೆ ಬಂದಿದ್ದು ಬೆಂಗಳೂರಿನಲ್ಲಿ ಮೊದಲ ದಿನವೇ ಒಟ್ಟು 39 ಪ್ರಕರಣಗಳು ದಾಖಲಾಗಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಮೂರು ಹೊಸ ಕ್ರಿಮಿನಲ್ ಕಾನೂನುಗಳು-ಭಾರತೀಯ ನ್ಯಾಯ ಸಂಹಿತಾ (BNS), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS), ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್ (BSA) – ಸೋಮವಾರ, ಜುಲೈ 1 ರಂದು ದೇಶಾದ್ಯಂತ ಜಾರಿಗೆ ಬಂದವು. ವ್ಯಾಪಕ ಬದಲಾವಣೆಗಳಿಗಾಗಿ ಹೊಸ ಕಾನೂನುಗಳನ್ನು ಪರಿಚಯಿಸಲಾಗಿದೆ.

ವರದಿಯ ಪ್ರಕಾರ, ಈ ಹೊಸ ಕಾನೂನುಗಳ ಅಡಿಯಲ್ಲಿ ವೈಟ್‌ಫೀಲ್ಡ್ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ದಾಖಲಾಗಿವೆ. ಮೊದಲ ದಿನವೇ ಬೆಂಗಳೂರು ಆಗ್ನೇಯ ಭಾಗದಲ್ಲಿ ಆರು, ಪಶ್ಚಿಮದಲ್ಲಿ ಐದು, ದಕ್ಷಿಣ ಮತ್ತು ಪೂರ್ವದಲ್ಲಿ ನಾಲ್ಕು, ಈಶಾನ್ಯದಲ್ಲಿ ಮೂರು ಮತ್ತು ಉತ್ತರ ಮತ್ತು ಕೇಂದ್ರ ವಿಭಾಗದಲ್ಲಿ ತಲಾ ಎರಡು ಪ್ರಕರಣಗಳು ದಾಖಲಾಗಿವೆ. ಇತರೆ ನಾಲ್ಕು ಪ್ರಕರಣಗಳನ್ನು ಸಂಚಾರ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಮೂರು ಹೊಸ ಕಾನೂನುಗಳ ಅಡಿಯಲ್ಲಿ ಒಟ್ಟು 80 ಎಫ್‌ಐಆರ್‌ಗಳನ್ನು ಸಹ ದಾಖಲಿಸಲಾಗಿದೆ.

ಇದನ್ನೂ ಓದಿ: ನಿಮ್ಮ ಆದಾಯದಲ್ಲಿ ಗರಿಷ್ಠ ಎಷ್ಟು ಮೊತ್ತದಷ್ಟು ಟ್ಯಾಕ್ಸ್ ಡಿಡಕ್ಷನ್ಸ್ ಪಡೆಯಬಹುದು? ಇಲ್ಲಿದೆ ಪಟ್ಟಿ

ಹೊಸ ಕಾನೂನುಗಳ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದ್ದು, ಕಾನೂನು ಬದಲಾವಣೆಗೆ ಒಗ್ಗಿಕೊಳ್ಳಲು ಕನಿಷ್ಠ ಎರಡು ತಿಂಗಳು ಬೇಕು ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ನಾವು ಹೊಸ ಕ್ರಿಮಿನಲ್ ಕಾನೂನುಗಳ ಎಲ್ಲಾ ನಿಬಂಧನೆಗಳನ್ನು ತಿರಸ್ಕರಿಸಲು ಸಾಧ್ಯವಿಲ್ಲ. ನಾವು ನಮ್ಮ ಪೊಲೀಸ್ ಪಡೆಗೆ ತರಬೇತಿಯನ್ನು ನೀಡಿದ್ದೇವೆ ಆದರೆ ಅವರು ಹೊಸ ಕಾನೂನುಗಳಿಗೆ ಒಗ್ಗಿಕೊಳ್ಳಲು ಕನಿಷ್ಠ ಎರಡು ತಿಂಗಳ ಅಗತ್ಯವಿದೆ ಎಂದರು.

“ಕೆಲವು ನಿಬಂಧನೆಗಳು ತುಂಬಾ ಒಳ್ಳೆಯದು. ನಾವು ಪ್ರತಿ ನಿಬಂಧನೆಗಳನ್ನು ತಿರಸ್ಕರಿಸಲಾಗುವುದಿಲ್ಲ. ಅವರು ಬ್ರಿಟಿಷ್ ಆಡಳಿತಗಾರರು ಪರಿಚಯಿಸಿದ ಕ್ರಿಮಿನಲ್ ಕಾನೂನುಗಳನ್ನು ಬದಲಾಯಿಸಲು ಪ್ರಯತ್ನಿಸಲಾಗಿದೆ ಮತ್ತು ಆಧುನಿಕ ಜಗತ್ತಿಗೆ ಸರಿಹೊಂದುವ ನಿಬಂಧನೆಗಳನ್ನು ಪರಿಚಯಿಸಲಾಗಿದೆ” ಎಂದು ಡಾ. ಪರಮೇಶ್ವರ್ ತಿಳಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ