AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮಂಕಾದ ಮುಂಗಾರು: 108 ವರ್ಷಗಳಲ್ಲಿ ಎರಡನೇ ಬಾರಿಗೆ ಅತಿ ಕಡಿಮೆ ಮಳೆ ದಾಖಲು!

ಬೆಂಗಳೂರಿನಲ್ಲಿ ಈ ಬಾರಿ ಮುಂಗಾರು ಮಳೆ ಹಿನ್ನೆಡೆ ಅನುಭವಿಸಿದ್ದು, ಕಳೆದ 108 ವರ್ಷಗಳಲ್ಲೇ ನಗರದಲ್ಲಿ ಎರಡನೇ ಅತ್ಯಂತ ಒಣ ಜುಲೈ (2nd Driest July) ದಾಖಲಾಗಿದೆ. ಜುಲೈನಲ್ಲಿ ಕೇವಲ 23 ಮಿಮೀ ಮಳೆಯಾಗಿದ್ದು, ಶೇಕಡಾ 70 ಕ್ಕೂ ಹೆಚ್ಚು ಮಳೆ ಕೊರತೆಯಾಗಿದೆ. ನಗರದಲ್ಲಿ ಉಷ್ಣಾಂಶವೂ ಏರಿಕೆಯಾಗಿದ್ದು, ಆಗಸ್ಟ್ ತಿಂಗಳ ಹವಾಮಾನ ಮುನ್ಸೂಚನೆ ಇಲ್ಲಿದೆ.

ಬೆಂಗಳೂರಿನಲ್ಲಿ ಮಂಕಾದ ಮುಂಗಾರು: 108 ವರ್ಷಗಳಲ್ಲಿ ಎರಡನೇ ಬಾರಿಗೆ ಅತಿ ಕಡಿಮೆ ಮಳೆ ದಾಖಲು!
ಬೆಂಗಳೂರಿನಲ್ಲಿ 108 ವರ್ಷಗಳಲ್ಲೇ ಎರಡನೇ ಶುಷ್ಕ ಜುಲೈ ದಾಖಲಾಗಿದೆ.
ಭಾವನಾ ಹೆಗಡೆ
|

Updated on: Aug 03, 2026 | 7:42 AM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ 108 ವರ್ಷಗಳಲ್ಲೇ ಎರಡನೇ ಶುಷ್ಕ ಜುಲೈ ದಾಖಲಾಗಿದೆ.
  • ಜುಲೈ ತಿಂಗಳಲ್ಲಿ ನಗರದಲ್ಲಿ ಬಿದ್ದಿದ್ದು ಕೇವಲ 23 ಮಿಲಿಮೀಟರ್‌ ಮಳೆ.
  • ಆಗಸ್ಟ್ ತಿಂಗಳಿನಲ್ಲೂ ಮುಂಗಾರು ಮಳೆ ಕ್ಷೀಣವಾಗಿಯೇ ಇರುವ ಸಾಧ್ಯತೆಯಿದೆ.

ಬೆಂಗಳೂರು, ಆಗಸ್ಟ್ 03: ನಗರದಲ್ಲಿ ಈ ಬಾರಿ ನೈಋತ್ಯ ಮುಂಗಾರು ಮಳೆ ತೀವ್ರ ಹಿನ್ನೆಡೆ ಅನುಭವಿಸಿದೆ. ಮೇ ತಿಂಗಳ ಪೂರ್ವ ಮುಂಗಾರು ಮಳೆಯಲ್ಲಿ ಉತ್ತಮ ಪ್ರಮಾಣದ ಮಳೆ ದಾಖಲಾಗಿದ್ದರೂ, ಜುಲೈ ತಿಂಗಳಲ್ಲಿ ಮಳೆರಾಯ ಸಂಪೂರ್ಣ ಕೈಕೊಟ್ಟಿದ್ದಾನೆ. ಪರಿಣಾಮವಾಗಿ, ಕಳೆದ 108 ವರ್ಷಗಳ ಇತಿಹಾಸದಲ್ಲೇ ಬೆಂಗಳೂರು ಅತ್ಯಂತ ಕಡಿಮೆ ಮಳೆ ಕಂಡ ಎರಡನೇ ಒಣ ಜುಲೈ (2nd Driest July) ತಿಂಗಳಿಗೆ ಸಾಕ್ಷಿಯಾಗಿದೆ.

ಕೇವಲ 23 ಮಿಲಿಮೀಟರ್ ಮಳೆ ದಾಖಲು!

ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ ಪ್ರಕಾರ, ಜುಲೈ ತಿಂಗಳಲ್ಲಿ ಬೆಂಗಳೂರು ನಗರದಲ್ಲಿ ಕೇವಲ 23 ಮಿಮೀ ಮಳೆ ಮಾತ್ರ ದಾಖಲಾಗಿದೆ. 1918ರ ಜುಲೈನಲ್ಲಿ ನಗರದಲ್ಲಿ 18.5 ಮಿಮೀ ಅತ್ಯಂತ ಕಡಿಮೆ ಮಳೆ ದಾಖಲಾಗಿತ್ತು. ಅದಾದ ಬಳಿಕ ಅತಿ ಕಡಿಮೆ ಮಳೆ ಬಿದ್ದ ಜುಲೈ ತಿಂಗಳು ಎಂದರೆ ಇದೇ ಆಗಿದೆ.

ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಜುಲೈ ತಿಂಗಳಲ್ಲಿ ಸರಾಸರಿ 80 ಮಿಮೀ ನಿಂದ 100 ಮಿಮೀ ವರೆಗೆ ಮಳೆಯಾಗಬೇಕಿತ್ತು. ಆದರೆ ಈ ಬಾರಿ ಕೇವಲ 23 ಮಿಮೀ ಮಳೆಯಾಗುವ ಮೂಲಕ ಶೇಕಡಾ 70 ಕ್ಕಿಂತಲೂ ಹೆಚ್ಚು ಮಳೆ ಕೊರತೆ ಉಂಟಾಗಿದೆ. ಜುಲೈ ಆರಂಭದ ವೇಳೆಗೆ ಮುಂಗಾರು ಮಳೆಯ ಒಟ್ಟು ಪ್ರಮಾಣ 70 ಮಿಮೀ ಇತ್ತು, ತಿಂಗಳ ಅಂತ್ಯಕ್ಕೆ ಇದು ಕೇವಲ 94 ಮಿಮೀ ಗೆ ತಲುಪಿದೆ.

ಬಿಸಿಲಿನ ಬೇಗೆ ಮತ್ತು ಹವಾಮಾನ ಇಲಾಖೆಯ ಮುನ್ಸೂಚನೆ

ಮಳೆಯ ಅಭಾವದಿಂದಾಗಿ ನಗರದಲ್ಲಿ ತಾಪಮಾನವೂ ಗಣನೀಯವಾಗಿ ಹೆಚ್ಚಾಗಿತ್ತು. ಜುಲೈ 14 ರಂದು ಬೆಂಗಳೂರಿನಲ್ಲಿ ತಾಪಮಾನ 33.6°Cರಷ್ಟಿದ್ದು, ಇದು ಕಳೆದ 112 ವರ್ಷಗಳಲ್ಲೇ ಜುಲೈ ತಿಂಗಳ ಅತ್ಯಂತ ಬಿಸಿಲಿನ ದಿನವಾಗಿ ದಾಖಲಾಯಿತು.

ಇತ್ತೀಚೆಗೆ ಪಶ್ಚಿಮ ಕರಾವಳಿಯಲ್ಲಿ ಸೃಷ್ಟಿಯಾದ ಕರಾವಳಿ ಸುಳಿ ಗಾಳಿಯ (Offshore Trough) ಪ್ರಭಾವದಿಂದಾಗಿ ಶನಿವಾರ ನಗರದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ಆದರೆ, ಈ ಮಳೆಯು ತಾತ್ಕಾಲಿಕವಾಗಿದ್ದು, ಮುಂಬರುವ ದಿನಗಳಲ್ಲಿ ಮತ್ತೆ ಮಳೆಯ ಅಭಾವ ಎದುರಾಗಬಹುದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಆಗಸ್ಟ್ 6 ರಿಂದ 12 ರ ನಡುವೆ ಮಳೆ ಸ್ವಲ್ಪ ಚೇತರಿಸಿಕೊಳ್ಳುವ ಸಾಧ್ಯತೆಯಿದೆ. ಆದರೆ ಒಟ್ಟಾರೆಯಾಗಿ ಆಗಸ್ಟ್ ತಿಂಗಳಿನ ಬಹುತೇಕ ದಿನಗಳಲ್ಲಿ ಮುಂಗಾರು ಕ್ಷೀಣವಾಗಿಯೇ ಇರಲಿದೆ. ಆದಾಗ್ಯೂ, ವರ್ಷದ ಆರಂಭದಲ್ಲಿದ್ದ ಉತ್ತಮ ಮಳೆಯಿಂದಾಗಿ ಪ್ರಸಕ್ತ ವರ್ಷದ ಒಟ್ಟು ಮಳೆ ಪ್ರಮಾಣ ಇನ್ನೂ ಸಾಮಾನ್ಯ ಮಟ್ಟದಲ್ಲೇ ಇದೆ ಎಂದು IMD ಹಿರಿಯ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳುಗಳು ಬೆಂಗಳೂರಿಗೆ ಸಾಮಾನ್ಯವಾಗಿ ಹೆಚ್ಚು ಮಳೆ ತರುವ ತಿಂಗಳುಗಳಾಗಿದ್ದು, ಮುಂಬರುವ ದಿನಗಳಲ್ಲಾದರೂ ವರುಣದೇವ ಕೃಪೆ ತೋರುತ್ತಾನೆಯೇ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ