AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂಡಮಾರುತದ ಎಫೆಕ್ಟ್​​: ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ! 21.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ

ದಿತ್ವಾ ಚಂಡಮಾರುತದ ಪರಿಣಾಮದಿಂದ ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದೆ. ಶನಿವಾರ 21.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಈ ವರ್ಷದ ಅತಿ ಚಳಿ ದಿನವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯಕ್ಕಿಂತ 5.8 ಡಿಗ್ರಿ ಸೆಲ್ಸಿಯಸ್ ಕಡಿಮೆ ತಾಪಮಾನವಿದ್ದು, ಮುಂದಿನ 2 ದಿನ ಇದೇ ರೀತಿಯ ಶೀತ ವಾತಾವರಣ ಮುಂದುವರಿಯಲಿದೆ.

ಚಂಡಮಾರುತದ ಎಫೆಕ್ಟ್​​: ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ! 21.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Nov 29, 2025 | 11:22 PM

Share

ಬೆಂಗಳೂರು, ನವೆಂಬರ್​ 29: ಸಿಲಿಕಾನ್ ಸಿಟಿಯಲ್ಲಿ (bangaluru) ಚಳಿಗಾಲ (Cold) ಆರಂಭವಾಗಿದೆ. ಈ ಸಲ ವ್ಯಾಪಕ ಮಳೆಯಾಗಿದ್ದು, ಹೆಚ್ಚು ಚಳಿ ಜನರನ್ನ ಕಾಡುವ ಆತಂಕ ಇದೆ.‌ ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ 16 ಡಿಗ್ರಿ ಸೆಲ್ಸಿಯಸ್​ಗೆ ವಾತಾವರಣ ಕುಸಿದೆ. ದಿತ್ವಾ ಚಂಡಮಾರುತದ ಪರಿಣಾಮದಿಂದಾಗಿ ಚಳಿ ಹೆಚ್ಚಾಗಿದೆ. ಶನಿವಾರದಂದು ನಗರದಲ್ಲಿ 21.6 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದ್ದು, ಈ ವರ್ಷದ ಅತ್ಯಂತ ಚಳಿ ದಿನವಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ರಾಜ್ಯ ಹವಾಮಾನ ಇಲಾಖೆ, ಶನಿವಾರದಂದು ಬೆಂಗಳೂರಿನಲ್ಲಿ 21.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಅದು ಈ ವರ್ಷದ ಅತ್ಯಂತ ಚಳಿ ದಿನವಾಗಿದೆ. ಒಂದೇ ಒಂದು ಹನಿ ಮಳೆ ಇಲ್ಲದೆ ಸಾಮಾನ್ಯಕ್ಕಿಂತ -5.8 ಡಿಗ್ರಿ ಸೆಲ್ಸಿಯಸ್​ರಷ್ಟು ಕಡಿಮೆ ತಾಪಮಾನ ಹೊಂದಿರುವುದು ಅದು ತುಂಬಾ ಅಪರೂಪ ಎಂದು ಹೇಳಿದೆ.

ರಾಜ್ಯ ಹವಾಮಾನ ಇಲಾಖೆ ಟ್ವೀಟ್​

ತಮಿಳುನಾಡಿನ ಉಂಟಾಗಿರುವ ದಿತ್ವಾ ಚಂಡಮಾರುತದ ಪರಿಣಾಮದಿಂದಾಗಿ ಚಳಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಹಗಲಿನ ತಾಪಮಾನವು 25 ಡಿಗ್ರಿ ಸೆಲ್ಸಿಯಸ್​ಗಿಂತ ಕಡಿಮೆಯಾಗಲು ಕಾರಣವಾಗುತ್ತದೆ. ಸಾಮಾನ್ಯವಾಗಿ ನಿರಂತರ ಮಳೆ ಸುರಿದರೆ ಮಾತ್ರ ಈ ವ್ಯತ್ಯಸವಾಗುವುದನ್ನು ಕಾಣಬಹುದು, ಆದರೆ ಇಂದು ಹಾಗಾಗಲಿಲ್ಲ. ಮೋಡ ಕವಿದ ವಾತಾವರಣದ್ದರೂ ಮಳೆ ಆಗಿಲ್ಲ.

ಕಳೆದ ಮೂರು ದಾಖಲಾಗಿರುವ ಗರಿಷ್ಠ ತಾಪಮಾನ

  • ಗುರುವಾರ: 25.2 ಡಿಗ್ರಿ ಸೆಲ್ಸಿಯಸ್
  • ಶುಕ್ರವಾರ: 25.3 ಡಿಗ್ರಿ ಸೆಲ್ಸಿಯಸ್
  • ಶನಿವಾರ: 21.6 ಡಿಗ್ರಿ ಸೆಲ್ಸಿಯಸ್

ಇದನ್ನೂ ಓದಿ: Bengaluru Weather: ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ಭಾರೀ ಚಳಿ

ಇನ್ನು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 2 ದಿನ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಇತ್ತ ಬೆಂಗಳೂರಿನಲ್ಲಿ ಮುಂದಿನ 2 ದಿನ ಇದೇ ವಾತಾವರಣ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!