AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂಡಮಾರುತದ ಎಫೆಕ್ಟ್​​: ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ! 21.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ

ದಿತ್ವಾ ಚಂಡಮಾರುತದ ಪರಿಣಾಮದಿಂದ ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದೆ. ಶನಿವಾರ 21.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಈ ವರ್ಷದ ಅತಿ ಚಳಿ ದಿನವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯಕ್ಕಿಂತ 5.8 ಡಿಗ್ರಿ ಸೆಲ್ಸಿಯಸ್ ಕಡಿಮೆ ತಾಪಮಾನವಿದ್ದು, ಮುಂದಿನ 2 ದಿನ ಇದೇ ರೀತಿಯ ಶೀತ ವಾತಾವರಣ ಮುಂದುವರಿಯಲಿದೆ.

ಚಂಡಮಾರುತದ ಎಫೆಕ್ಟ್​​: ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ! 21.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Nov 29, 2025 | 11:22 PM

Share

ಬೆಂಗಳೂರು, ನವೆಂಬರ್​ 29: ಸಿಲಿಕಾನ್ ಸಿಟಿಯಲ್ಲಿ (bangaluru) ಚಳಿಗಾಲ (Cold) ಆರಂಭವಾಗಿದೆ. ಈ ಸಲ ವ್ಯಾಪಕ ಮಳೆಯಾಗಿದ್ದು, ಹೆಚ್ಚು ಚಳಿ ಜನರನ್ನ ಕಾಡುವ ಆತಂಕ ಇದೆ.‌ ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ 16 ಡಿಗ್ರಿ ಸೆಲ್ಸಿಯಸ್​ಗೆ ವಾತಾವರಣ ಕುಸಿದೆ. ದಿತ್ವಾ ಚಂಡಮಾರುತದ ಪರಿಣಾಮದಿಂದಾಗಿ ಚಳಿ ಹೆಚ್ಚಾಗಿದೆ. ಶನಿವಾರದಂದು ನಗರದಲ್ಲಿ 21.6 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದ್ದು, ಈ ವರ್ಷದ ಅತ್ಯಂತ ಚಳಿ ದಿನವಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ರಾಜ್ಯ ಹವಾಮಾನ ಇಲಾಖೆ, ಶನಿವಾರದಂದು ಬೆಂಗಳೂರಿನಲ್ಲಿ 21.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಅದು ಈ ವರ್ಷದ ಅತ್ಯಂತ ಚಳಿ ದಿನವಾಗಿದೆ. ಒಂದೇ ಒಂದು ಹನಿ ಮಳೆ ಇಲ್ಲದೆ ಸಾಮಾನ್ಯಕ್ಕಿಂತ -5.8 ಡಿಗ್ರಿ ಸೆಲ್ಸಿಯಸ್​ರಷ್ಟು ಕಡಿಮೆ ತಾಪಮಾನ ಹೊಂದಿರುವುದು ಅದು ತುಂಬಾ ಅಪರೂಪ ಎಂದು ಹೇಳಿದೆ.

ರಾಜ್ಯ ಹವಾಮಾನ ಇಲಾಖೆ ಟ್ವೀಟ್​

ತಮಿಳುನಾಡಿನ ಉಂಟಾಗಿರುವ ದಿತ್ವಾ ಚಂಡಮಾರುತದ ಪರಿಣಾಮದಿಂದಾಗಿ ಚಳಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಹಗಲಿನ ತಾಪಮಾನವು 25 ಡಿಗ್ರಿ ಸೆಲ್ಸಿಯಸ್​ಗಿಂತ ಕಡಿಮೆಯಾಗಲು ಕಾರಣವಾಗುತ್ತದೆ. ಸಾಮಾನ್ಯವಾಗಿ ನಿರಂತರ ಮಳೆ ಸುರಿದರೆ ಮಾತ್ರ ಈ ವ್ಯತ್ಯಸವಾಗುವುದನ್ನು ಕಾಣಬಹುದು, ಆದರೆ ಇಂದು ಹಾಗಾಗಲಿಲ್ಲ. ಮೋಡ ಕವಿದ ವಾತಾವರಣದ್ದರೂ ಮಳೆ ಆಗಿಲ್ಲ.

ಕಳೆದ ಮೂರು ದಾಖಲಾಗಿರುವ ಗರಿಷ್ಠ ತಾಪಮಾನ

  • ಗುರುವಾರ: 25.2 ಡಿಗ್ರಿ ಸೆಲ್ಸಿಯಸ್
  • ಶುಕ್ರವಾರ: 25.3 ಡಿಗ್ರಿ ಸೆಲ್ಸಿಯಸ್
  • ಶನಿವಾರ: 21.6 ಡಿಗ್ರಿ ಸೆಲ್ಸಿಯಸ್

ಇದನ್ನೂ ಓದಿ: Bengaluru Weather: ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ಭಾರೀ ಚಳಿ

ಇನ್ನು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 2 ದಿನ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಇತ್ತ ಬೆಂಗಳೂರಿನಲ್ಲಿ ಮುಂದಿನ 2 ದಿನ ಇದೇ ವಾತಾವರಣ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ