AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂಡಮಾರುತದ ಎಫೆಕ್ಟ್​​: ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ! 21.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ

ದಿತ್ವಾ ಚಂಡಮಾರುತದ ಪರಿಣಾಮದಿಂದ ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದೆ. ಶನಿವಾರ 21.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಈ ವರ್ಷದ ಅತಿ ಚಳಿ ದಿನವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯಕ್ಕಿಂತ 5.8 ಡಿಗ್ರಿ ಸೆಲ್ಸಿಯಸ್ ಕಡಿಮೆ ತಾಪಮಾನವಿದ್ದು, ಮುಂದಿನ 2 ದಿನ ಇದೇ ರೀತಿಯ ಶೀತ ವಾತಾವರಣ ಮುಂದುವರಿಯಲಿದೆ.

ಚಂಡಮಾರುತದ ಎಫೆಕ್ಟ್​​: ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ! 21.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Nov 29, 2025 | 11:22 PM

Share

ಬೆಂಗಳೂರು, ನವೆಂಬರ್​ 29: ಸಿಲಿಕಾನ್ ಸಿಟಿಯಲ್ಲಿ (bangaluru) ಚಳಿಗಾಲ (Cold) ಆರಂಭವಾಗಿದೆ. ಈ ಸಲ ವ್ಯಾಪಕ ಮಳೆಯಾಗಿದ್ದು, ಹೆಚ್ಚು ಚಳಿ ಜನರನ್ನ ಕಾಡುವ ಆತಂಕ ಇದೆ.‌ ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ 16 ಡಿಗ್ರಿ ಸೆಲ್ಸಿಯಸ್​ಗೆ ವಾತಾವರಣ ಕುಸಿದೆ. ದಿತ್ವಾ ಚಂಡಮಾರುತದ ಪರಿಣಾಮದಿಂದಾಗಿ ಚಳಿ ಹೆಚ್ಚಾಗಿದೆ. ಶನಿವಾರದಂದು ನಗರದಲ್ಲಿ 21.6 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದ್ದು, ಈ ವರ್ಷದ ಅತ್ಯಂತ ಚಳಿ ದಿನವಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ರಾಜ್ಯ ಹವಾಮಾನ ಇಲಾಖೆ, ಶನಿವಾರದಂದು ಬೆಂಗಳೂರಿನಲ್ಲಿ 21.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಅದು ಈ ವರ್ಷದ ಅತ್ಯಂತ ಚಳಿ ದಿನವಾಗಿದೆ. ಒಂದೇ ಒಂದು ಹನಿ ಮಳೆ ಇಲ್ಲದೆ ಸಾಮಾನ್ಯಕ್ಕಿಂತ -5.8 ಡಿಗ್ರಿ ಸೆಲ್ಸಿಯಸ್​ರಷ್ಟು ಕಡಿಮೆ ತಾಪಮಾನ ಹೊಂದಿರುವುದು ಅದು ತುಂಬಾ ಅಪರೂಪ ಎಂದು ಹೇಳಿದೆ.

ರಾಜ್ಯ ಹವಾಮಾನ ಇಲಾಖೆ ಟ್ವೀಟ್​

ತಮಿಳುನಾಡಿನ ಉಂಟಾಗಿರುವ ದಿತ್ವಾ ಚಂಡಮಾರುತದ ಪರಿಣಾಮದಿಂದಾಗಿ ಚಳಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಹಗಲಿನ ತಾಪಮಾನವು 25 ಡಿಗ್ರಿ ಸೆಲ್ಸಿಯಸ್​ಗಿಂತ ಕಡಿಮೆಯಾಗಲು ಕಾರಣವಾಗುತ್ತದೆ. ಸಾಮಾನ್ಯವಾಗಿ ನಿರಂತರ ಮಳೆ ಸುರಿದರೆ ಮಾತ್ರ ಈ ವ್ಯತ್ಯಸವಾಗುವುದನ್ನು ಕಾಣಬಹುದು, ಆದರೆ ಇಂದು ಹಾಗಾಗಲಿಲ್ಲ. ಮೋಡ ಕವಿದ ವಾತಾವರಣದ್ದರೂ ಮಳೆ ಆಗಿಲ್ಲ.

ಕಳೆದ ಮೂರು ದಾಖಲಾಗಿರುವ ಗರಿಷ್ಠ ತಾಪಮಾನ

  • ಗುರುವಾರ: 25.2 ಡಿಗ್ರಿ ಸೆಲ್ಸಿಯಸ್
  • ಶುಕ್ರವಾರ: 25.3 ಡಿಗ್ರಿ ಸೆಲ್ಸಿಯಸ್
  • ಶನಿವಾರ: 21.6 ಡಿಗ್ರಿ ಸೆಲ್ಸಿಯಸ್

ಇದನ್ನೂ ಓದಿ: Bengaluru Weather: ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ಭಾರೀ ಚಳಿ

ಇನ್ನು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 2 ದಿನ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಇತ್ತ ಬೆಂಗಳೂರಿನಲ್ಲಿ ಮುಂದಿನ 2 ದಿನ ಇದೇ ವಾತಾವರಣ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ