AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ದಾಖಲೆ ಬರೆದ ವರುಣ: ನಿನ್ನೆ ಸುರಿದ ಮಳೆಯ ಪ್ರಮಾಣ ಎಷ್ಟು ಗೊತ್ತಾ?; ಇಲ್ಲಿದೆ ಮಾಹಿತಿ

ಬೆಂಗಳೂರಿನಲ್ಲಿ ನಿನ್ನೆ 111 ಮಿ.ಮೀ. ದಾಖಲೆ ಮಳೆಯಾಗಿದ್ದು, ಏಪ್ರಿಲ್ ಇತಿಹಾಸದಲ್ಲಿಯೇ ಹೊಸ ದಾಖಲೆ ಬರೆದಿದೆ. ಈ ನಡುವೆ ಮುಂದಿನ ಮೂರು ದಿನಗಳ ಕಾಲ ನಗರದಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಖ್ಯಮಂತ್ರಿಗಳು ಮಳೆ ಅವಾಂತರ ತಡೆಯಲು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೌರಿಂಗ್ ಆಸ್ಪತ್ರೆ ರೀತಿ ದುರ್ಘಟನೆ ನಡೆಯದಂತೆ ಗಮನಹರಿಸಿ ಎಂದು ಎಚ್ಚರಿಸಿದ್ದಾರೆ. ಕರ್ನಾಟಕದ ಹಲವು ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ವಿಸ್ತರಿಸಲಾಗಿದೆ.

ಬೆಂಗಳೂರಲ್ಲಿ ದಾಖಲೆ ಬರೆದ ವರುಣ: ನಿನ್ನೆ ಸುರಿದ ಮಳೆಯ ಪ್ರಮಾಣ ಎಷ್ಟು ಗೊತ್ತಾ?; ಇಲ್ಲಿದೆ ಮಾಹಿತಿ
ಬೆಂಗಳೂರು ಮಳೆ
ಪ್ರಸನ್ನ ಹೆಗಡೆ
|

Updated on:Apr 30, 2026 | 11:32 AM

Share

ಬೆಂಗಳೂರು, ಏಪ್ರಿಲ್​​ 30: ನಗರದಲ್ಲಿ ಆಲಿಕಲ್ಲು, ಗುಡುಗು ಮತ್ತು ಮಿಂಚಿನ ಸಹಿತ ನಿನ್ನೆ (ಏಪ್ರಿಲ್​​ 29) ಧಾರಾಕಾರವಾಗಿ ಸುರಿದ ಮಳೆ ರಾಜಧಾನಿಯ ಏಪ್ರಿಲ್ ತಿಂಗಳ ಇತಿಹಾಸದಲ್ಲಿಯೇ ಹೊಸ ದಾಖಲೆ ಬರೆದಿದೆ. ನಿನ್ನೆ ಸಂಜೆ 111 ಮೀಲಿ‌ ಮೀಟರ್ ಮಳೆಯಾಗಿದ್ದು, 2001ರಲ್ಲಿಯೂ ಇದೇ ರೀತಿಯ ಮಳೆ ಆಗಿತ್ತು. ಇನ್ನು ಈ ನಡುವೆ ಬೆಂಗಳೂರಿನಲ್ಲಿ‌ ಇನ್ನೂ ಮೂರು ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30 ರಿಂದ 40 ಕಿ.ಮೀ ವೇಗ ದಲ್ಲಿ ಗಾಳಿ ಬಿಸಲಿದೆ ಎಂದು ಹವಾಮಾನ ಇಲಾಖೆಯ ಮಾಹಿತಿ ನೀಡಿದೆ.

ಬೆಂಗಳೂರಿನ ವಿವಿಧೆಡೆ ಮಳೆಯ ಪ್ರಮಾಣ

  • ಸಂಪಂಗಿರಾಮನಗರ- 39 ಮಿಲಿ ಮೀಟರ್
  • ಪುಲಕೇಶಿನಗರ- 36.50 ಮಿಲಿ ಮೀಟರ್
  • ಬೊಮ್ಮನಹಳ್ಳಿ- 31 ಮಿಲಿ ಮೀಟರ್
  • ಕಾಟನ್​ಪೇಟೆ- 29 ಮಿಲಿ ಮೀಟರ್
  • HAL ವಿಮಾನ ನಿಲ್ದಾಣ- 25 ಮಿಲಿ ಮೀಟರ್
  • ಬಿಟಿಎಂ ಲೇಔಟ್​- 22.50 ಮಿಲಿ ಮೀಟರ್
  • ಮಾರತ್ತಹಳ್ಳಿ- 18.50 ಮಿಲಿ ಮೀಟರ್

ಇದನ್ನೂ ಓದಿ: ದಾಖಲೆ ಮಟ್ಟದಲ್ಲಿ ಬತ್ತಿದ ಕೆಆರ್​​ಎಸ್​​ ಡ್ಯಾಂ; ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಸಂಕಷ್ಟ!

ಮುಕ್ಕಾಲು ಭಾಗ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್

ಹವಾಮಾನ ಇಲಾಖೆ ಮೂರು ದಿನ ಬೆಂಗಳೂರಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಸಿದೆ. ಅದರಂತೆ ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಜಿಬಿಎಗೆ ಸಿಎಂ ಸೂಚನೆ

ನಿನ್ನೆ ಸುರಿದ ಮಳೆಗೆ ಅವಾಂತರಗಳಾದ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ನಗರದ ಮ್ಯಾನ್​ಹೋಲ್​ಗಳು ಬ್ಲಾಕ್ ಆಗಿದ್ರೆ ಕೂಡಲೇ ಸರಿಪಡಿಸಿ, ಬೀಳುವ ಹಂತದಲ್ಲಿರುವ ಮರದ ಕೊಂಬೆಗಳ ತೆರವು ಮಾಡಿ ಎಂದು ಜಿಬಿಎ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಜೊತೆಗೆ ನಗರದಲ್ಲಿ ಈಗ ಬಿದ್ದಿರುವ ಮರದ ಕೊಂಬೆಗಳನ್ನು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಿ. ಅಂಡರ್​ಪಾಸ್​ಗಳಲ್ಲಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳಿ. ನಗರದ ಪ್ರಮುಖ ರಸ್ತೆಗಳಲ್ಲಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸುವ ಜೊತೆಗೆ ಬೌರಿಂಗ್ ಆಸ್ಪತ್ರೆ ರೀತಿ ದುರ್ಘಟನೆ ನಡೆಯದಂತೆ ಗಮನಹರಿಸಿ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 10:59 am, Thu, 30 April 26

Follow Us
ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನ, ಪೂಜೆಗೆ ನಿರ್ಬಂಧ
ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನ, ಪೂಜೆಗೆ ನಿರ್ಬಂಧ
ಎರಡನೇ ಆಷಾಢ ಶುಕ್ರವಾರ ಚಾಮುಂಡೇಶ್ವರಿ ತಾಯಿಯ ಅಲಂಕಾರ ಹೇಗಿದೆ ನೋಡಿ
ಎರಡನೇ ಆಷಾಢ ಶುಕ್ರವಾರ ಚಾಮುಂಡೇಶ್ವರಿ ತಾಯಿಯ ಅಲಂಕಾರ ಹೇಗಿದೆ ನೋಡಿ
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ