AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಾಕಿಂಗ್ ಮಾಡ್ತಿದ್ದ ನಿವೃತ್ತ ಎಸಿಪಿ ಮೇಲೆ ಹಲ್ಲೆ, ರಾಬರಿ; ಚಿನ್ನಾಭರಣ ದೋಚಿದ್ದ ಮೂವರು ಲಾಕ್

ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಆಗಂತುಕರಿಂದ ದಾಳಿ ಮಾಡಿ ಸುಲಿಗೆ ಮಾಡಿರುವಂತಹ ಘಟನೆ ಬೆಂಗಳೂರಿನ ಹೆಬ್ಬಾಳದ ವೆಟರ್ನರಿ ಆಸ್ಪತ್ರೆ ಆವರಣದಲ್ಲಿ ನಡೆದಿದೆ. ವಾಕಿಂಗ್ ಮಾಡುತ್ತಿದ್ದ ಸಮಯದಲ್ಲಿ ಆಗಂತುಕರು ದಾಳಿ ಮಾಡಿ ಚಿನ್ನಾಭರಣ ದೋಚಿ ಪರಾರಿ ಆಗಿದ್ದರು. ಸದ್ಯ ಪೊಲೀಸರು ಮೂವರು ಬಂಧಿಸಿದ್ದಾರೆ.

ಬೆಂಗಳೂರು: ವಾಕಿಂಗ್ ಮಾಡ್ತಿದ್ದ ನಿವೃತ್ತ ಎಸಿಪಿ ಮೇಲೆ ಹಲ್ಲೆ, ರಾಬರಿ; ಚಿನ್ನಾಭರಣ ದೋಚಿದ್ದ ಮೂವರು ಲಾಕ್
ಬಂಧಿತರು
ಗಂಗಾಧರ​ ಬ. ಸಾಬೋಜಿ
|

Updated on: Sep 12, 2025 | 8:23 AM

Share

ಬೆಂಗಳೂರು, ಸೆಪ್ಟೆಂಬರ್​ 12: ಅವರು ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿ (Retired officer). ನಿವೃತ್ತ ಜೀವನ ಕಳೆಯುತ್ತಿದ್ದ ಆ ಪೊಲೀಸ್ ಅಧಿಕಾರಿ ಪ್ರತಿನಿತ್ಯ ವಾಕಿಂಗ್​​ಗೆ ಹೋಗುತ್ತಿದ್ದ ಜಾಗದಲ್ಲೇ ಅದೊಂದು ದಿನ ಸಂಕಷ್ಟಕ್ಕೆ ಸಿಲುಕಿದ್ದರು. ವಾಕಿಂಗ್ ಮಾಡುವಾಗಲೇ ಆಗಂತುಕರ ದಾಳಿಗೆ ಒಳಗಾಗಿ ಚಿನ್ನಾಭರಣ ಕಳೆದುಕೊಂಡಿದ್ದರು. ಸದ್ಯ ಆ ಖತರ್ನಾಕ್ ಆಸಾಮಿಗಳನ್ನು ಪೊಲೀಸರು ಹೆಡೆಮುರಿ (arrest) ಕಟ್ಟಿದ್ದಾರೆ.

ಬೆಂಗಳೂರಿನಂತ ದೊಡ್ಡ ನಗರದಲ್ಲಿ ಸುಲಿಗೆ, ರಾಬರಿಗಳು ಹೆಚ್ಚಾಗುತ್ತಿವೆ. ಪ್ರತಿನಿತ್ಯ ನಾಲ್ಕೈದು ಘಟನೆಗಳು ನಡೆಯುತ್ತಲೇ ಇದ್ದು, ಆಟೋ, ಕ್ಯಾಬ್ ಚಾಲಕರು, ಸಾರ್ವಜನಿಕರಿಗೆ ರಾಬರ್ಸ್​​ಗಳು ಕಂಟಕವಾಗ್ತಿದ್ದಾರೆ. ಕಳೆದು ಒಂದು ತಿಂಗಳಲ್ಲಿ 100ಕ್ಕೂ ಹೆಚ್ಚು ಸುಲಿಗೆ, ರಾಬರಿ ಕೇಸ್​ಗಳು ದಾಖಲಾಗಿವೆ. ಸದ್ಯ ಇಂತ ರಾಬರಿ ಪ್ರಕರಣಗಳ ಪಟ್ಟಿಗೆ ನಿವೃತ್ತ ಎಸಿಪಿಯೊಬ್ಬರ ಘಟನೆ ಕೂಡ ಸೇರಿದೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲು ವಾರ್ಡನ್​ನಿಂದಲೇ ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ: ಬಂಧನ

ಕೆಲದಿನಗಳ ಹಿಂದೆ ಹೆಬ್ಬಾಳದ ವೆಟರ್ನರಿ ಆಸ್ಪತ್ರೆ ಆವರಣದಲ್ಲಿ ಸುಬ್ಬಣ್ಣ ಎಂದಿನಂತೆ ಮಾರ್ನಿಂಗ್ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಮಾಸ್ಕ್ ಧರಿಸಿದ್ದ ಇಬ್ಬರು ಆಗಂತುಕರು ಸುಬ್ಬಣ್ಣ ಮೇಲೆ ದಾಳಿ ಮಾಡಿದ್ದರು. ಚಾಕು ತೋರಿಸಿ ಕತ್ತಿನಲ್ಲಿದ್ದ ಸರ ಕಸಿದುಕೊಂಡಿದ್ದರು. ಆಗಂತುಕರ ಈ ದಾಳಿ ತಡೆಯಲು ಮುಂದಾದ ಸುಬ್ಬಣ್ಣ ಕೈಗೆ ಚಾಕುವಿನಿಂದ ಹಲ್ಲೆ ಕೂಡ ಮಾಡಿದ್ದಾರೆ. ಬಳಿಕ ಕೈಯಲ್ಲಿದ್ದ ಚಿನ್ನದ ಬ್ರೇಸ್​ ಲೇಟ್​ ಕಿತ್ಕೊಂಡು ಕ್ಷಣಮಾತ್ರದಲ್ಲಿ ಎಸ್ಕೇಪ್ ಆಗಿದ್ದರು. ಬಳಿಕ ಸುಬ್ಬಣ್ಣ ಸಂಜಯ್ ನಗರ ಪೊಲೀಸ್ ಠಾಣೆಗೆ ರಾಬರಿ ಬಗ್ಗೆ ದೂರು ನೀಡಿದ್ದು, ಪೊಲೀಸರು ಡಿಜೆ ಹಳ್ಳಿಯ ಮೂವರು ರಾಬರ್ಸ್​ಗಳನ್ನ ಹೆಡೆಮುರಿ ಕಟ್ಟಿದ್ದಾರೆ.

ಮೂವರ ಬಂಧನ

ಮೊಹಮ್ಮದ್ ಸಲ್ಮಾನ್, ಮೋಸೀನ್, ಮೊಹಮ್ಮದ್ ಇರ್ಫಾನ್ ಬಂಧಿತರು. ಒಂದೇ ಏರಿಯಾದ ಈ ಮೂವರಲ್ಲಿ ಮೋಸಿನ್ ಮತ್ತು ಇರ್ಫಾನ್ ರಾಬರಿ ಮಾಡಿದರೆ, ಸಲ್ಮಾನ್ ತಾನು ಕದ್ದ ಬೈಕ್​ನಲ್ಲಿ ಇನ್ನಿಬ್ಬರಿಗೆ ಸಹಾಯ ಮಾಡಿದ್ದ. ಹೀಗಾಗಿ ಮೂರು ಜನರನ್ನ ಬಂಧಿಸಿರುವ ಸಂಜಯ್ ನಗರ ಪೊಲೀಸರು ಆರೋಪಿಗಳನ್ನ ಜೈಲಿಟ್ಟಿದ್ದಾರೆ.

ಇದನ್ನೂ ಓದಿ: ಬಾಗಿಲು ಒಡೆದಿಲ್ಲ, ಲಾಕ್ ಮುರಿದಿಲ್ಲ: ಚಿನ್ನಾಭರಣ ದೋಚಿದ ಖತರ್ನಾಕ್ ಕಳ್ಳ

ಒಟ್ಟಿನಲ್ಲಿ ಬೆಂಗಳೂರಲ್ಲಿ ಪ್ರತಿನಿತ್ಯ ರಾಬರಿ, ಸುಲಿಗೆ ಕೇಸ್​ಗಳು ಹೆಚ್ಚಾಗುತ್ತಿವೆ. ಮಾರಕಾಸ್ತ್ರಗಳನ್ನ ತೋರಿಸಿ ಜನರನ್ನ ಸುಲಿಗೆ ಮಾಡಲಾಗುತ್ತಿದೆ. ಖಾಕಿ ಪಡೆ ಎಷ್ಟೇ ಅಲರ್ಟ್ ಆಗಿದ್ದರೂ, ಎಷ್ಟೇ ಅರೆಸ್ಟ್ ಮಾಡಿದರೂ ಕ್ರಿಮಿನಲ್ ಬ್ಯಾಕ್ ಗ್ರೌಂಡ್ ಇರುವ ವ್ಯಕ್ತಿಗಳು ಮತ್ತೆ ಮತ್ತೆ ಇದೇ ಕೆಲಸಕ್ಕೆ ಇಳಿದು ಸುಲಭವಾಗಿ ಹಣ ಮಾಡುತ್ತಿದ್ದಾರೆ.

ವರದಿ: ಪ್ರದೀಪ್ ಚಿಕ್ಕಾಟಿ, Tv9, ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ