AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಜೀವಿತ ಪ್ರಮಾಣಪತ್ರ ನವೀಕರಿಸಲು ಹೋಗಿ 1.27 ಲಕ್ಷ ರೂ. ಕಳೆದುಕೊಂಡ ನಿವೃತ್ತ ಪೊಲೀಸ್ ಅಧಿಕಾರಿ

ಜೀವಿತ ಪ್ರಮಾಣಪತ್ರವನ್ನು ನವೀಕರಿಸಲು ಹೋಗಿ ಸೈಬರ್ ಕ್ರೈಂ ಆರೋಪಿಗಳನ್ನೇ ಬ್ಯಾಂಕ್ ಸಿಬ್ಬಂದಿ ಎಂದು ನಂಬಿ ಸರ್ಕಾರಿ ದಾಖಲೆಗಳನ್ನು ಹಂಚಿಕೊಂಡ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಬರೊಬ್ಬರಿ 1.27 ಲಕ್ಷ ರೂ. ಗಳನ್ನು ಕಳೆದುಕೊಂಡಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಜೀವಿತ ಪ್ರಮಾಣಪತ್ರ ನವೀಕರಿಸಲು ಹೋಗಿ 1.27 ಲಕ್ಷ ರೂ. ಕಳೆದುಕೊಂಡ ನಿವೃತ್ತ ಪೊಲೀಸ್ ಅಧಿಕಾರಿ
ಸೈಬರ್​ ಕ್ರೈಂ
ಆಯೇಷಾ ಬಾನು
ಆಯೇಷಾ ಬಾನು|

Updated on: Nov 21, 2023 | 7:16 AM

Share

ಬೆಂಗಳೂರು, ನ.21: ತಮ್ಮ ಜೀವಿತ ಪ್ರಮಾಣಪತ್ರವನ್ನು ನವೀಕರಿಸಲು (Life Certificate) ಸರ್ಕಾರಿ ದಾಖಲೆಗಳನ್ನು ಹಂಚಿಕೊಂಡ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು (Retired Police Officer) ಬರೊಬ್ಬರಿ 1.27 ಲಕ್ಷ ರೂ. ಗಳನ್ನು ಕಳೆದುಕೊಂಡಿದ್ದಾರೆ (Fraud). ಜೀವಿತ ಪ್ರಮಾಣಪತ್ರ ಎನ್ನುವುದು ಸರ್ಕಾರಿ ನೌಕರರಿಗೆ ಪಿಂಚಣಿ ಪ್ರಯೋಜನಗಳನ್ನು ಪಡೆಯುವುದನ್ನು ಮುಂದುವರಿಸಲು ಒದಗಿಸಲಾದ ಬಯೋಮೆಟ್ರಿಕ್-ಸಕ್ರಿಯ ಸೇವೆಯಾಗಿದೆ.

ಲೈಫ್ ಸರ್ಟಿಫಿಕೇಟ್ ಅನ್ನು ಡಿಜಿಟಲ್ ಆಗಿ ನವೀಕರಿಸಲು, ಸಂತ್ರಸ್ತರು ತನ್ನ ಬ್ಯಾಂಕ್ ಅನ್ನು ಸಂಪರ್ಕಿಸಿದರು. ಈ ವೇಳೆ ಆರೋಪಿಯು ಬ್ಯಾಂಕ್ ಉದ್ಯೋಗಿಯಂತೆ ನಟಿಸಿ ವಂಚನೆ ಮಾಡಿದ್ದಾನೆ. ಸಹಾಯ ಮಾಡುವ ನೆಪದಲ್ಲಿ ಆರೋಪಿಯು ಸಂತ್ರಸ್ತರ ಸರ್ಕಾರಿ ಗುರುತಿನ ಚೀಟಿ ನೀಡುವಂತೆ ಮನವಿ ಮಾಡಿದ್ದು ಖಾತೆಯಲ್ಲಿದ್ದ 1.27 ಲಕ್ಷ ರೂ. ಹಣವನ್ನು ದೂಚಿದ್ದಾನೆ.

ಘಟನೆ ಸಂಬಂಧ ಯೋಗ ತರಬೇತುದಾರರಾದ 37 ವರ್ಷದ ರೋಹಿತ್ ಕೆಎಸ್ ಎಂಬುವವರು ಮಾತನಾಡಿದ್ದು, ನನ್ನ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಶಿವಸ್ವಾಮಿ ಎಸ್, ಇವರಿಗೆ ಹೃದಯ ಸಂಬಂಧಿ ಕಾಯಿಲೆ ಇದೆ. ಜೀವಿತ ಪ್ರಮಾಣಪತ್ರವನ್ನು ನವೀಕರಿಸಲು ನಾನು ನನ್ನ ತಂದೆಯ ಖಾತೆ ಇರುವ ಬ್ಯಾಂಕನ್ನು ಸಂಪರ್ಕಿಸಿದೆ ಮತ್ತು ಬ್ಯಾಟರಾಯನಪುರದ ಬ್ಯಾಂಕ್‌ಗೆ ಭೇಟಿ ನೀಡಿದ್ದೆ. ನಂತರ ಅವರು ನನಗೆ ನಂಬರ್ ಮತ್ತು ಲಿಂಕ್ ಅನ್ನು ನೀಡಿದರು. ನಾನು ಬ್ಯಾಂಕ್ ಒದಗಿಸಿದ ನಂಬರ್​ಗೆ ಕಾಲ್ ಮಾಡಿದೆ ಮತ್ತು ಐಡಿ ವಿವರಗಳನ್ನು ಒದಗಿಸಲು ಟೈಮ್ ಸ್ಲಾಟ್ ಅನ್ನು ಆಯ್ಕೆ ಮಾಡಿದೆ. ನಾನು ನನ್ನ ಸ್ಲಾಟ್‌ಗಳನ್ನು ಸುಮಾರು 8-9 ಬಾರಿ ಕಾಯ್ದಿರಿಸಿದ್ದೇನೆ ಮತ್ತು ಬ್ಯಾಂಕಿನಿಂದ ಮರಳಿ ಕರೆ ಮಾಡುವುದಾಗಿ ಭರವಸೆ ನೀಡುವ ಸಂದೇಶವನ್ನು ಸತತವಾಗಿ ಸ್ವೀಕರಿಸಿದ್ದೇನೆ ಆದರೆ ಇದುವರೆಗೂ ಬ್ಯಾಂಕ್‌ನಿಂದ ಯಾವುದೇ ಕರೆ ಬರಲಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಉದ್ಯೋಗ ನೀಡುವುದಾಗಿ ಭೂಮಿ ಪಡೆದು ವಂಚನೆ: ಕಂಪನಿ ವಿರುದ್ಧ ಡೆತ್​​ ನೋಟ್ ಬರೆದಿಟ್ಟು ಯುವ ರೈತ ಆತ್ಮಹತ್ಯೆ

ಕೊನೆಗೆ ಶುಕ್ರವಾರ, ರೋಹಿತ್ ತನ್ನ ತಂದೆಯ ಫೋನ್‌ಗೆ ಬಂದ ಕರೆ ಸ್ವೀಕರಿಸಿದರು. ಕರೆ ಮಾಡಿದ ಮಹಿಳೆ ತಾನು ಬ್ಯಾಂಕ್ ಸಿಬ್ಬಂದಿ ಎಂದು ಹೇಳಿಕೊಂಡಿದ್ದು ನಿಮ್ಮ ತಂದೆಯ ಜೀವನ ಪ್ರಮಾಣಪತ್ರವನ್ನು ನವೀಕರಿಸಲು ಸಹಾಯ ಮಾಡುವುದಾಗಿ ತಿಳಿಸಿದ್ದಾಳೆ. ನಾನು ಸ್ಲಾಟ್‌ಗಳನ್ನು ಕಾಯ್ದಿರಿಸಲು ಪ್ರಯತ್ನಿಸುತ್ತಿರುವಾಗ, ಕರೆ ಬಂದ ಹಿನ್ನೆಲೆ ಇದು ಬ್ಯಾಂಕಿಂದನೇ ಬಂದಿರುವ ಕಾನೂನುಬದ್ಧ ಕರೆ ಎಂದು ನಾನು ನಂಬಿದೆ ಮತ್ತು ಸರ್ಕಾರಿ ID ವಿವರಗಳನ್ನು ಹಂಚಿಕೊಂಡೆ. ನಂತರ ನನಗೆ ನನ್ನ ಬ್ಯಾಂಕ್‌ನಿಂದ OTP ಬಂತು.

ನನಗೆ ಬಂದ ಮೆಸೇಜ್​ನಲ್ಲಿ ನನ್ನ ಬ್ಯಾಂಕ್ ಹೆಸರನ್ನು ಉಲ್ಲೇಖಿಸಿದ್ದರಿಂದ, ಕಾರ್ಯವಿಧಾನಗಳೊಂದಿಗೆ ಮುಂದುವರಿಯಲು ನಾನು OTP ಅನ್ನು ಹಂಚಿಕೊಂಡೆ. ಇದಾದ ಸ್ವಲ್ಪ ಸಮಯದ ನಂತರ, ಸಂಪೂರ್ಣ ಬ್ಯಾಂಕ್ ಬ್ಯಾಲೆನ್ಸ್ ಡೆಬಿಟ್ ಮಾಡಲಾಗಿದೆ ಎಂದು ರೋಹಿತ್ ತಿಳಿಸಿದರು. “ನನ್ನ ಪೋಷಕರು ಅನಾರೋಗ್ಯಕ್ಕೀಡಾಗಿದ್ದಾರೆ ಮತ್ತು ಆ ಹಣವೇ ನಮ್ಮ ಏಕೈಕ ಉಳಿತಾಯವಾಗಿದೆ” ಎಂದು ರೋಹಿತ್ ಅಳಲು ತೋಡಿಕೊಂಡಿದ್ದಾರೆ. ಘಟನೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ