AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವಿಡಿಯೊ ನಂಬಿ 6.88 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ! ನಕಲಿ ಹೂಡಿಕೆ ಜಾಹೀರಾತುಗಳ ಬಗ್ಗೆ ಎಚ್ಚರ

Bangalore News: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಡೀಪ್‌ಫೇಕ್ ವಿಡಿಯೊವನ್ನು ನಂಬಿದ ಬೆಂಗಳೂರಿನ 66 ವರ್ಷದ ನಿವೃತ್ತ ವ್ಯಕ್ತಿಯೊಬ್ಬರು ನಕಲಿ ಸರ್ಕಾರಿ ಹೂಡಿಕೆ ಯೋಜನೆಯಲ್ಲಿ 6.88 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸೈಬರ್ ವಂಚಕರು ಸರ್ಕಾರಿ ಯೋಜನೆ ಹೆಸರಿನಲ್ಲಿ ಜನರನ್ನು ಮೋಸಗೊಳಿಸುವ ಹೊಸ ಹಾದಿಕಂಡುಕೊಂಡಿದ್ದು, ಜನರು ಎಚ್ಚರ ವಹಿಸಬೇಕಿದೆ.

ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವಿಡಿಯೊ ನಂಬಿ 6.88 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ! ನಕಲಿ ಹೂಡಿಕೆ ಜಾಹೀರಾತುಗಳ ಬಗ್ಗೆ ಎಚ್ಚರ
ಸಾಂದರ್ಭಿಕ ಚಿತ್ರImage Credit source: TV9 Network
ಗಣಪತಿ ಶರ್ಮಾ
|

Updated on: Jul 20, 2026 | 7:32 AM

Share

ಮುಖ್ಯಾಂಶಗಳು

  • ಡೀಪ್‌ಫೇಕ್ ವಿಡಿಯೊ ನಂಬಿ ₹6.88 ಲಕ್ಷ ಕಳೆದುಕೊಂಡ ವ್ಯಕ್ತಿ
  • ಕೇಂದ್ರ ಸರ್ಕಾರದ ನಕಲಿ ಹೂಡಿಕೆ ಯೋಜನೆ ಹೆಸರಿನಲ್ಲಿ ವಂಚನೆ
  • ಫೇಸ್‌ಬುಕ್ ಲಿಂಕ್‌, ವಾಟ್ಸ್‌ಆ್ಯಪ್ ಕರೆ ಮೂಲಕ ವಂಚಿಸುವ ಜಾಲ

ಬೆಂಗಳೂರು, ಜುಲೈ 20: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರ ಡೀಪ್‌ಫೇಕ್ (Deepfake) ವಿಡಿಯೊ ಬಳಸಿಕೊಂಡು ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 6.88 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ನಾರಾಯಣಪುರ ನಿವಾಸಿಯಾದ 66 ವರ್ಷದ ವ್ಯಕ್ತಿಗೆ, ಕೇಂದ್ರ ಸರ್ಕಾರ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜಂಟಿಯಾಗಿ ಹೂಡಿಕೆ ಯೋಜನೆ ಆರಂಭಿಸಿರುವಂತೆ ತೋರಿಸುವ ವಿಡಿಯೊ ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡಿತ್ತು. ಅದರಲ್ಲಿ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲಿ ಉತ್ತಮ ಲಾಭ ಸಿಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಮಾತನಾಡಿರುವಂತೆ ಡೀಪ್ ಪೇಕ್ ತಂತ್ರಜ್ಞಾನದ ಮೂಲಕ ತೋರಿಸಲಾಗಿತ್ತು.

ವಿಡಿಯೊದಲ್ಲಿದ್ದ ಲಿಂಕ್‌ ಅನ್ನು ಕ್ಲಿಕ್ ಮಾಡಿದ ವ್ಯಕ್ತಿ ತನ್ನ ಕೆವೈಸಿ ಸೇರಿದಂತೆ ಅಗತ್ಯ ಮಾಹಿತಿಯನ್ನು ದಾಖಲಿಸಿದ್ದರು. ಬಳಿಕ ಯುಕೆ (+44) ಕೋಡ್‌ನ ವಾಟ್ಸ್‌ಆ್ಯಪ್ ಸಂಖ್ಯೆಯಿಂದ ಕರೆ ಬಂದಿದ್ದು, 22 ಸಾವಿರ ರೂ. ಹೂಡಿಕೆಯ ಬದಲು 6 ಲಕ್ಷ ರೂ.ಗಿಂತ ಹೆಚ್ಚು ಹೂಡಿಕೆ ಮಾಡಿದರೆ ಕೇವಲ 10 ದಿನಗಳಲ್ಲಿ 15 ಲಕ್ಷ ರೂ. ವಾಪಸ್ ಸಿಗುತ್ತದೆ ಎಂದು ನಂಬಿಸಲಾಗಿದೆ.

ಸರ್ಕಾರಿ ಯೋಜನೆ ಎಂದು ನಂಬಿ ಮೋಸಹೋದ ವ್ಯಕ್ತಿ

ಸರ್ಕಾರಿ ಯೋಜನೆ ಎಂಬ ನಂಬಿಕೆಯಿಂದ ನಾರಾಯಣಪುರ ನಿವಾಸಿಯು ಮಾರ್ಚ್‌ನಿಂದ ಜೂನ್‌ವರೆಗೆ ಒಟ್ಟು 6.88 ಲಕ್ಷ ರೂ. ಹಣವನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಆದರೆ ಯಾವುದೇ ಹಣ ಮರಳಿ ಬರದ ಹಿನ್ನೆಲೆಯಲ್ಲಿ ತಾವು ವಂಚನೆಗೆ ಒಳಗಾಗಿರುವುದು ಗೊತ್ತಾಗಿ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಡೀಪ್‌ಫೇಕ್ ವಿಡಿಯೊಗಳಿಂದ ಎಚ್ಚರ!

ರಾಜಕಾರಣಿಗಳು, ನಟರು ಅಥವಾ ಗಣ್ಯರ ಮುಖ ಮತ್ತು ಧ್ವನಿಯನ್ನು ಕೃತಕ ಬುದ್ಧಿಮತ್ತೆ ಬಳಸಿ ನೈಜ ಎಂಬಂತೆ ಬಿಂಬಿಸಿ ಜನರನ್ನು ವಂಚಿಸುವ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿವೆ ಎಂದು ಸೈಬರ್ ತಜ್ಞರು ಹೇಳಿದ್ದಾರೆ. ಸರ್ಕಾರ ಅಥವಾ ಬ್ಯಾಂಕ್ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕಾಣುವ ಹೂಡಿಕೆ ಯೋಜನೆಗಳನ್ನು ಪರಿಶೀಲಿಸದೆ ಹಣ ಹೂಡಿಕೆ ಮಾಡಬಾರದು. ಅನುಮಾನಾಸ್ಪದ ಲಿಂಕ್‌ಗಳನ್ನು ಕ್ಲಿಕ್ ಮಾಡದಿರುವುದು ಹಾಗೂ ಅಧಿಕೃತ ವೆಬ್‌ಸೈಟ್‌ಗಳಲ್ಲಿಯೇ ಮಾಹಿತಿ ಪರಿಶೀಲಿಸುವುದು ಸುರಕ್ಷಿತ ಎಂದು ಅವರು ಸಲಹೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ