AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rians: ಬೆಂಗಳೂರಿನಲ್ಲಿ ಮಟ ಮಟ ಮಧ್ಯಾಹ್ನವೇ ಮಳೆ ಶುರು

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಮಧ್ಯಾಹ್ನವೇ ಮಳೆ ಆರಂಭವಾಗಿದ್ದು, ನಗರದ ಕೆ.ಆರ್ ಮಾರ್ಕೆಟ್, ಚಾಮರಾಜಪೇಟೆ, ಜಯನಗರ, ಶಾಂತಿನಗರ ಹಾಗೂ ಕಾರ್ಪೋರೇಶನ್ ಸುತ್ತಾಮುತ್ತ ಮಳೆ ಶುರುವಾಗಿದೆ. ಇತ್ತ ಕೆಲವೇ ಕ್ಷಣದ ಮಳೆಗೆ ಕೆ.ಆರ್.ಸರ್ಕಲ್ ಬಳಿ ನೀರು ನಿಂತು ರಸ್ತೆ ಹೊಳೆಯಂತಾಗಿದೆ.

Bengaluru Rians: ಬೆಂಗಳೂರಿನಲ್ಲಿ ಮಟ ಮಟ ಮಧ್ಯಾಹ್ನವೇ ಮಳೆ ಶುರು
ಬೆಂಗಳೂರಿನಲ್ಲಿ ಮಟ ಮಟ ಮಧ್ಯಾಹ್ನವೇ ಮಳೆ ಶುರು
Vinay Kashappanavar
| Updated By: ಕಿರಣ್ ಹನುಮಂತ್​ ಮಾದಾರ್|

Updated on:Oct 03, 2024 | 3:27 PM

Share

ಬೆಂಗಳೂರು, ಅ.03: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಧ್ಯಾಹ್ನವೇ ಮಳೆ(Rain)ಯ ಆಗಮನವಾಗಿದೆ. ದಿಢೀರ್​ ತುಂತುರು ಮಳೆಯಿಂದ ವಾಹನ ಸವಾರರು ಪರದಾಟ ನಡೆಸುವಂತಾಗಿದ್ದು, ನಗರದ ಕೆ.ಆರ್ ಮಾರ್ಕೆಟ್, ಚಾಮರಾಜಪೇಟೆ, ಜಯನಗರ, ಶಾಂತಿನಗರ ಹಾಗೂ ಕಾರ್ಪೋರೇಶನ್ ಸುತ್ತಾಮುತ್ತ ಮಳೆ ಆರಂಭವಾಗಿದೆ. ಇನ್ನು ಕೆಲವೇ ಕ್ಷಣದ ಮಳೆಗೆ ಕೆ.ಆರ್.ಸರ್ಕಲ್ ಬಳಿ ನೀರು ನಿಂತು ರಸ್ತೆ ಹೊಳೆಯಂತಾಗಿದೆ. ರಸ್ತೆಯಲ್ಲಿ ನಿಂತ ನೀರಲ್ಲೇ ವಾಹನಗಳ ಸಂಚಾರ ಮಾಡುತ್ತಿದ್ದು, ಸಂಚಾರ ವ್ಯತ್ಯಯವಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆ

ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ:Karnataka Rains: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆ

ವಿವಿಧ ಜಿಲ್ಲೆಗಳಲ್ಲಿ ಮಳೆಯ ಅವಾಂತರ

ಇನ್ನು ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಗೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತ್ಯಾವಣಗಿ ಗ್ರಾಮದಲ್ಲಿ ಕೆರೆ ತುಂಬಿದ್ದು, ಪರಿಣಾಮ ನೀರು ಮನೆಗಳಿಗೆ ನುಗ್ಗಿ ಕೆರೆ ಸುತ್ತಲಿನ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ಕಳೆದ ಮೂರು ದಶಕಗಳಿಂದ ಜನರು ಇಲ್ಲಿಯೇ ವಾಸವಿದ್ದು, ಕೆರೆ ಸ್ವಲ್ಪ ನೀರು ಹೆಚ್ಚಾದರೂ ಮನೆಗಳಿಗೆ ನೀರು ನುಗ್ಗುತ್ತದೆ. ಈ ಹಿನ್ನಲೆ ಕೆರೆಗೆ ತಡೆ ಗೋಡೆ ನಿರ್ಮಿಸಿ,  ಮೂಲ ಭೂತ ಸೌಲಭ್ಯ ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇತ್ತ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ತಡತಾತ್ರಿ ಸುರಿದ ಧಾರಾಕಾರ ಮಳೆಗೆ ಗಾಣಗಾಪುರದ ದೇವಸ್ಥಾನದವೊಂದರ ಮುಂದೆಯೇ ನೀರು ನಿಂತಿದ್ದು, ಮಳೆಯಿಂದ ಚರಂಡಿ ನೀರೆಲ್ಲಾ ದೇವಸ್ಥಾನದ‌ ಮುಂದೆ‌ ನಿಂತ ಹಿನ್ನಲೆ‌ ಜನರ‌ ಪರದಾಡುವಂತಾಗಿದೆ. ಕೇವಲ ಒಂದು ಗಂಟೆ ಸುರಿದ ಧಾರಾಕಾರ ಮಳೆಗೆ ಹಲವು ಅವಾಂತರ ಸೃಷ್ಟಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:14 pm, Thu, 3 October 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ