AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Road Accidents: ರಸ್ತೆ ಅಪಘಾತಗಳಿಂದ ಹೆಚ್ಚು ಸಾವು ಸಂಭವಿಸುವ ಟಾಪ್ 3 ನಗರಗಳಲ್ಲಿ ಬೆಂಗಳೂರು ಕೂಡ ಒಂದು

ಬೆಂಗಳೂರು ಸೇರಿದಂತೆ ದೇಶದ ಈ ಮೂರು ನಗರಗಳಲ್ಲಿ ಅತಿ ಹೆಚ್ಚು ಜನರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ

Road Accidents: ರಸ್ತೆ ಅಪಘಾತಗಳಿಂದ ಹೆಚ್ಚು ಸಾವು ಸಂಭವಿಸುವ ಟಾಪ್ 3 ನಗರಗಳಲ್ಲಿ ಬೆಂಗಳೂರು ಕೂಡ ಒಂದು
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Dec 30, 2022 | 4:25 PM

Share

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಇತ್ತೀಚಿಗೆ ರಸ್ತೆ ಅಪಘಾತಗಳು (Road Accidents) ಹೆಚ್ಚುತ್ತಿದ್ದು, ಇದರಿಂದ ಸಾಕಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಕುರಿತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (Ministry of Road Transport and Highways) “ಭಾರತದ ರಸ್ತೆ ಅಪಘಾತಗಳು-2021” ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಬೆಂಗಳೂರು (Bengaluru) ಸೇರಿದಂತೆ ದೇಶದ ಈ ಮೂರು ನಗರಗಳಲ್ಲಿ ಅತಿ ಹೆಚ್ಚು ಜನರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ ಟೈಮ್ಸ್ ವರದಿ ಮಾಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೊದಲ ಸ್ಥಾನದಲ್ಲಿದ್ದು 1,239 ಜನರು ಮೃತ್ತಪಟ್ಟಿದ್ದಾರೆ. ಚನೈ ಮತ್ತು ಬೆಂಗಳೂರು ಎರಡು ಮತ್ತು ಮೂರನೇ ಸ್ಥಾನದಲ್ಲಿವೆ. ವರದಿಪ್ರಕಾರ ಚೆನ್ನೈ ಮತ್ತು ಬೆಂಗಳೂರಲ್ಲಿ 998 ಮತ್ತು 654 ಮರಣ ಪ್ರಕರಣಗಳು ವರದಿಯಾಗಿವೆ.

ಟಾಪ್​ 10 ಪಟ್ಟಿಯಲ್ಲಿ ಬೆಂಗಳೂರು ನಂತರ ಜೈಪುರ, ಕಾನ್ಪುರ, ಆಗ್ರಾ, ಪ್ರಯಾಗರಾಜ್​ (ಅಲಹಾಬಾದ್) ಇಂದೋರ್, ಜೈಪುರ, ಮತ್ತು ಜಲಬಾಲಪುರ್​ಗಳಿವೆ. ಈ ಟಾಪ್​ 10 ನಗರಗಳಲ್ಲಿ ಶೇ 43.13 ಪ್ರತಿಶತದಷ್ಟು ಜನರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಒಟ್ಟಾರೆಯಾಗಿ 50 ನಗರಗಳಲ್ಲಿ ಸರ್ವೆ ನಡೆಸಿದ್ದು ಈ 10 ನಗರಗಳು ಟಾಪ್​ನಲ್ಲಿವೆ.

ಶ್ರೀನಗರ, ಅಮೃತಸರ್​ ಮತ್ತು ಜಮ್ಶೆಡ್‌ಪುರ ನಗರಗಳಲ್ಲಿ 2021ರ ಸಾಲಿನಲ್ಲಿ ಅತಿ ಕಡಿಮೆ ರಸ್ತೆ ಅಪಘತಗಳಾಗಿವೆ. ಹೀಗಾಗಿ ಈ ಮೂರು ನಗರಗಳು ಕೊನೆ ಸ್ಥಾನಗಳಲ್ಲಿವೆ. ಕಳೆದ ವರ್ಷ ಬೆಂಗಳೂರಲ್ಲಿ ರಸ್ತೆ ಗುಂಡಿ (Pothole)ಮತ್ತು ಹದಗೆಟ್ಟ ರಸ್ತೆಗಳಿಂದಾಗಿ ಹಲವಾರು ಸಾವುಗಳು ಸಂಭವಿಸಿವೆ. ಕರ್ನಾಟಕ ಹೈಕೋರ್ಟ್ ಡಿಸೆಂಬರ್ ಮಧ್ಯದಲ್ಲಿ ರಸ್ತೆ ಗುಂಡಿಗಳಿಂದ ಉಂಟಾದ ಅಪಘಾತಗಳಿಗೆ ಸಂಬಂಧಿಸಿದ ಎಫ್‌ಐಆರ್ ದಾಖಲಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Fri, 30 December 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ