AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Road Accidents: ರಸ್ತೆ ಅಪಘಾತಗಳಿಂದ ಹೆಚ್ಚು ಸಾವು ಸಂಭವಿಸುವ ಟಾಪ್ 3 ನಗರಗಳಲ್ಲಿ ಬೆಂಗಳೂರು ಕೂಡ ಒಂದು

ಬೆಂಗಳೂರು ಸೇರಿದಂತೆ ದೇಶದ ಈ ಮೂರು ನಗರಗಳಲ್ಲಿ ಅತಿ ಹೆಚ್ಚು ಜನರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ

Road Accidents: ರಸ್ತೆ ಅಪಘಾತಗಳಿಂದ ಹೆಚ್ಚು ಸಾವು ಸಂಭವಿಸುವ ಟಾಪ್ 3 ನಗರಗಳಲ್ಲಿ ಬೆಂಗಳೂರು ಕೂಡ ಒಂದು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 30, 2022 | 4:25 PM

Share

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಇತ್ತೀಚಿಗೆ ರಸ್ತೆ ಅಪಘಾತಗಳು (Road Accidents) ಹೆಚ್ಚುತ್ತಿದ್ದು, ಇದರಿಂದ ಸಾಕಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಕುರಿತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (Ministry of Road Transport and Highways) “ಭಾರತದ ರಸ್ತೆ ಅಪಘಾತಗಳು-2021” ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಬೆಂಗಳೂರು (Bengaluru) ಸೇರಿದಂತೆ ದೇಶದ ಈ ಮೂರು ನಗರಗಳಲ್ಲಿ ಅತಿ ಹೆಚ್ಚು ಜನರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ ಟೈಮ್ಸ್ ವರದಿ ಮಾಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೊದಲ ಸ್ಥಾನದಲ್ಲಿದ್ದು 1,239 ಜನರು ಮೃತ್ತಪಟ್ಟಿದ್ದಾರೆ. ಚನೈ ಮತ್ತು ಬೆಂಗಳೂರು ಎರಡು ಮತ್ತು ಮೂರನೇ ಸ್ಥಾನದಲ್ಲಿವೆ. ವರದಿಪ್ರಕಾರ ಚೆನ್ನೈ ಮತ್ತು ಬೆಂಗಳೂರಲ್ಲಿ 998 ಮತ್ತು 654 ಮರಣ ಪ್ರಕರಣಗಳು ವರದಿಯಾಗಿವೆ.

ಟಾಪ್​ 10 ಪಟ್ಟಿಯಲ್ಲಿ ಬೆಂಗಳೂರು ನಂತರ ಜೈಪುರ, ಕಾನ್ಪುರ, ಆಗ್ರಾ, ಪ್ರಯಾಗರಾಜ್​ (ಅಲಹಾಬಾದ್) ಇಂದೋರ್, ಜೈಪುರ, ಮತ್ತು ಜಲಬಾಲಪುರ್​ಗಳಿವೆ. ಈ ಟಾಪ್​ 10 ನಗರಗಳಲ್ಲಿ ಶೇ 43.13 ಪ್ರತಿಶತದಷ್ಟು ಜನರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಒಟ್ಟಾರೆಯಾಗಿ 50 ನಗರಗಳಲ್ಲಿ ಸರ್ವೆ ನಡೆಸಿದ್ದು ಈ 10 ನಗರಗಳು ಟಾಪ್​ನಲ್ಲಿವೆ.

ಶ್ರೀನಗರ, ಅಮೃತಸರ್​ ಮತ್ತು ಜಮ್ಶೆಡ್‌ಪುರ ನಗರಗಳಲ್ಲಿ 2021ರ ಸಾಲಿನಲ್ಲಿ ಅತಿ ಕಡಿಮೆ ರಸ್ತೆ ಅಪಘತಗಳಾಗಿವೆ. ಹೀಗಾಗಿ ಈ ಮೂರು ನಗರಗಳು ಕೊನೆ ಸ್ಥಾನಗಳಲ್ಲಿವೆ. ಕಳೆದ ವರ್ಷ ಬೆಂಗಳೂರಲ್ಲಿ ರಸ್ತೆ ಗುಂಡಿ (Pothole)ಮತ್ತು ಹದಗೆಟ್ಟ ರಸ್ತೆಗಳಿಂದಾಗಿ ಹಲವಾರು ಸಾವುಗಳು ಸಂಭವಿಸಿವೆ. ಕರ್ನಾಟಕ ಹೈಕೋರ್ಟ್ ಡಿಸೆಂಬರ್ ಮಧ್ಯದಲ್ಲಿ ರಸ್ತೆ ಗುಂಡಿಗಳಿಂದ ಉಂಟಾದ ಅಪಘಾತಗಳಿಗೆ ಸಂಬಂಧಿಸಿದ ಎಫ್‌ಐಆರ್ ದಾಖಲಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Fri, 30 December 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್