AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ; ಬದಲಿ ರಸ್ತೆಗಳ ಮಾಹಿತಿ ಇಲ್ಲಿದೆ

ಬೆಂಗಳೂರಿನ ಕೆಲ ರಸ್ತೆಗಳಲ್ಲಿ ನಾಳೆಯಿಂದ ಸಂಚಾರ ವ್ಯತ್ಯಯ ಉಂಟಾಗಲಿದೆ. ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿ ಆರಂಭವಾಗಲಿದ್ದು, ಸುಮಾರು 15 ದಿನಗಳೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ರೈಲ್ವೆ ಸೇತುವೆಯ ಸ್ಟೀಲ್ ಗರ್ಡರ್ ಬದಲಾವಣೆ ಕಾಮಗಾರಿಯ ಹಿನ್ನೆಲೆ ಬುಧವಾರದಿಂದ ಮೈಸೂರು ರಸ್ತೆಯಿಂದ ಜ್ಞಾನಭಾರತಿ ಕ್ಯಾಂಪಸ್ ಕಡೆಗೆ ಸಾಗುವ ಬೆಂಗಳೂರು ವಿಶ್ವವಿದ್ಯಾಲಯ ರಸ್ತೆ ಕ್ಲೋಸ್​​ ಆಗಲಿದೆ.

ಬೆಂಗಳೂರಿಗರೇ ಗಮನಿಸಿ:  ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ; ಬದಲಿ ರಸ್ತೆಗಳ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರImage Credit source: Google
ಪ್ರಸನ್ನ ಹೆಗಡೆ
|

Updated on:Mar 04, 2026 | 4:57 PM

Share

ಬೆಂಗಳೂರು, ಮಾರ್ಚ್​​ 04: ಬಹುಕಾಲದ ನಿರೀಕ್ಷೆಯಾಗಿರುವ ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿಯನ್ನು ಗುರುವಾರದಿಂದ ಆರಂಭಿಸಲು ಬೆಂಗಳೂರು ಸೆಂಟ್ರಲ್​​ ಸಿಟಿ ಕಾರ್ಪೊರೇಷನ್​​ ಸಜ್ಜಾಗಿದೆ. ಮೊದಲ ಹಂತದಲ್ಲಿ ಟ್ರಿನಿಟಿ ಸರ್ಕಲ್‌ನಿಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವೃತ್ತದವರೆಗೆ 2.2 ಕಿಮೀ ಉದ್ದದ ರಸ್ತೆಯ ಮರು ಡಾಂಬರೀಕರಣ ನಡೆಯಲಿದೆ.  ಮಾಹಿತಿಯ ಪ್ರಕಾರ, ಮಾರ್ಚ್ 4ರ ಸಂಜೆ (ಇಂದು) ಪೂರ್ವಸಿದ್ಧತಾ ಕಾಮಗಾರಿಗಳು ಆರಂಭವಾಗಲಿವೆ. ಟ್ರಾಫಿಕ್ ಪೊಲೀಸ್ ಅನುಮತಿ ಬಾಕಿ ಇರುವುದರಿಂದ ಸ್ವಲ್ಪ ವಿಳಂಬ ಸಾಧ್ಯತೆ ಇದೆ. ಹೀಗಿದ್ದರೂ 15 ದಿನಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಇದೆ ಎನ್ನಲಾಗಿದೆ.

ಎಂ.ಜಿ. ರಸ್ತೆಗೆ ಮೊದಲು ವೈಟ್ ಟಾಪಿಂಗ್ ಮಾಡುವ ಬಗ್ಗೆ ಜಿಬಿಎ ಚಿಂತನೆ ನಡೆಸಿತ್ತು. ಆದರೆ ಈ ಕೆಲಸಗಳಿಗಾಗಿ ದೀರ್ಘಕಾಲ ರಸ್ತೆ ಬಂದ್ ಮಾಡಬೇಕಾದ ಅನಿವಾರ್ಯತೆ ಎದುರಾಗಲಿರುವ ಕಾರಣ ಟ್ರಾಫಿಕ್ ಪೊಲೀಸರು ಇದಕ್ಕೆ ಅನುಮತಿ ನಿರಾಕರಿಸಿದ್ದರು.  ಮರು ಡಾಂಬರೀಕರಣ ಕಾಮಗಾರಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಶಾಂತಿನಗರ ವಿಧಾನಸಭಾ ಕ್ಷೇತ್ರಕ್ಕೆ ಮೀಸಲಾದ 25 ಕೋಟಿ ಮೊತ್ತದಲ್ಲಿ ನಡೆದಿದೆ. ಈ ಮೊತ್ತದಲ್ಲಿ ಎಂ.ಜಿ. ರೋಡ್​​ ಸೇರಿದಂತೆ ಏಳು ಪ್ರಮುಖ ರಸ್ತೆಗಳ ಮರು ಡಾಂಬರೀಕರಣಕ್ಕೆ ಯೋಜಿಸಲಾಗಿದೆ.

ಇದನ್ನೂ ಓದಿ: ಕೆಪಿಎಸ್​ಸಿ ವಿರುದ್ಧ ಮತ್ತೆ ಅಕ್ರಮ ಆರೋಪ; ಧ್ವನಿ ಎತ್ತಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್

ಬೆಂಗಳೂರು ವಿವಿ ರಸ್ತೆಯೂ ತಾತ್ಕಾಲಿಕವಾಗಿ ಕ್ಲೋಸ್​​

ರೈಲ್ವೆ ಸೇತುವೆಯ ಸ್ಟೀಲ್ ಗರ್ಡರ್ ಬದಲಾವಣೆ ಕಾಮಗಾರಿಯ ಹಿನ್ನೆಲೆ ಮೈಸೂರು ರಸ್ತೆಯಿಂದ ಜ್ಞಾನಭಾರತಿ ಕ್ಯಾಂಪಸ್ ಕಡೆಗೆ ಸಾಗುವ ಬೆಂಗಳೂರು ವಿಶ್ವವಿದ್ಯಾಲಯ ರಸ್ತೆ ಕ್ಲೋಸ್​​ ಆಗಲಿದೆ. ಬುಧವಾರ ಸಂಜೆ 6ರಿಂದ ಶುಕ್ರವಾರ ಮಧ್ಯಾಹ್ನ 12 ಗಂಟೆವರೆಗೆ ರಸ್ತೆ ಬಂದ್ ಇರಲಿದೆ ಎಂದು ಟ್ರಾಫಿಕ್​​ ಪೊಲೀಸರು ತಿಳಿಸಿದ್ದಾರೆ.

ಮಾರ್ಗ ಬದಲಾವಣೆ

  • ಮೈಸೂರು ರಸ್ತೆಯಿಂದ ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಉಳ್ಳಾಲ ರಿಂಗ್ ರೋಡ್ ಕಡೆಗೆ ಸಾಗುವ ವಾಹನಗಳು ಜ್ಞಾನಭಾರತಿ ಜಂಕ್ಷನ್‌ನಿಂದ ಬಲಕ್ಕೆ ತಿರುಗಿ ಜೈರಾಮದಾಸ್ ಜಂಕ್ಷನ್, ಮುತ್ತುರಾಯನಗರ–ಗವರ್‍ನ್ಮೆಂಟ್ ಪ್ರೆಸ್ ರಸ್ತೆ ಮೂಲಕ, ಬಿಪಿಇಡ್ ಮೈದಾನದ ಬಳಿ ಬಲಕ್ಕೆ ತಿರುಗಿ ಬೆಂಗಳೂರು ವಿಶ್ವವಿದ್ಯಾಲಯ ರಸ್ತೆಗೆ ಸಾಗಬೇಕು.
  • ಉಳ್ಳಾಲ ಜಂಕ್ಷನ್‌ನಿಂದ ಬೆಂಗಳೂರು ವಿಶ್ವವಿದ್ಯಾಲಯ ಮೂಲಕ ಜ್ಞಾನಭಾರತಿ ಜಂಕ್ಷನ್ ಮತ್ತು ಮೈಸೂರು ರಸ್ತೆ ಕಡೆಗೆ ಸಾಗುವ ವಾಹನಗಳು ಬೆಂಗಳೂರು ವಿಶ್ವವಿದ್ಯಾಲಯ ಮುಖ್ಯ ಕಚೇರಿ ವೃತ್ತದ ಬಳಿ ಎಡಕ್ಕೆ ತಿರುಗಿ ನಾಗರಭಾವಿ ಮುಖ್ಯ ರಸ್ತೆ ಮೂಲಕ ನಾಗರಭಾವಿ ರಿಂಗ್ ರೋಡ್ ಮಾರ್ಗವಾಗಿ ಮೈಸೂರು ರಸ್ತೆಗೆ ಸಾಗಬೇಕು.
  • ಮರಿಯಪ್ಪನಪಾಳ್ಯ ಜಂಕ್ಷನ್‌ನಿಂದ ಬೆಂಗಳೂರು ವಿಶ್ವವಿದ್ಯಾಲಯ ಮೂಲಕ ಜ್ಞಾನಭಾರತಿ ಜಂಕ್ಷನ್ ಮತ್ತು ಮೈಸೂರು ರಸ್ತೆ ಕಡೆಗೆ ಸಾಗುವ ವಾಹನಗಳು ಬೆಂಗಳೂರು ವಿಶ್ವವಿದ್ಯಾಲಯ ಮುಖ್ಯ ರಸ್ತೆಯಲ್ಲಿ ಎಡಕ್ಕೆ ತಿರುಗಿ, ಮುಖ್ಯ ಕಚೇರಿ ವೃತ್ತದ ಬಳಿ ಬಲಕ್ಕೆ ತಿರುಗಿ ನಾಗರಭಾವಿ ಮುಖ್ಯ ರಸ್ತೆ–ರಿಂಗ್ ರೋಡ್ ಮೂಲಕ ಮೈಸೂರು ರಸ್ತೆಗೆ ತೆರಳಬೇಕು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:56 pm, Wed, 4 March 26

Follow Us
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು!
ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು!
ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು
ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು
ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದ ಕಿಡಿಗೇಡಿಗಳು
ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದ ಕಿಡಿಗೇಡಿಗಳು
‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ
‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ
Video: ಮಗುವಿಗೆ ಜನ್ಮಕೊಟ್ಟು ಕಸದ ಬುಟ್ಟಿಗೆ ಎಸೆದು ಹೋದ ಬಾಲಕಿ
Video: ಮಗುವಿಗೆ ಜನ್ಮಕೊಟ್ಟು ಕಸದ ಬುಟ್ಟಿಗೆ ಎಸೆದು ಹೋದ ಬಾಲಕಿ