ಬೆಂಗಳೂರಿನಲ್ಲಿ ನಿಲ್ಲದ ರೋಡ್ ರೇಜ್‌‌​: ಕಾರಿನ ಬಾನೆಟ್, ಮಿರರ್ ಡ್ಯಾಮೇಜ್, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೊಲೀಸ್​ ಭರವಸೆ

ಬೆಂಗಳೂರು ನಗರದಲ್ಲಿ ರೋಡ್​ ರೇಜ್​ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಾಹನ ಸವಾರರು ಪೊಲೀಸರಿಗೆ ಒತ್ತಾಯಿಸುತ್ತಿದ್ದಾರೆ. ಈ ನಡುವೆ ವೈಟ್​ಫಿಲ್ಡ್​ನಲ್ಲಿ ಮತ್ತೊಂದು ರೋಡ್​ ರೇಜ್​ ಪ್ರಕರಣ ವರದಿಯಾಗಿದೆ. ಇಬ್ಬರು ಕಾರು ಚಾಲಕರ ಮಧ್ಯೆ ಗಲಾಟೆ ನಡೆದಿದೆ. ಗಲಾಟೆ ವಿಡಿಯೋ ವೈರಲ್​ ಆಗಿದೆ.

ಬೆಂಗಳೂರಿನಲ್ಲಿ ನಿಲ್ಲದ ರೋಡ್ ರೇಜ್‌‌​: ಕಾರಿನ ಬಾನೆಟ್, ಮಿರರ್ ಡ್ಯಾಮೇಜ್, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೊಲೀಸ್​ ಭರವಸೆ
ಕಾರಿಗೆ ಅಡ್ಡ ಬಂದ ಮತ್ತೊಂದು ಕಾರು ಚಾಲಕ
Follow us
| Updated By: ವಿವೇಕ ಬಿರಾದಾರ

Updated on: Sep 10, 2024 | 11:31 AM

ಬೆಂಗಳೂರು, ಸೆಪ್ಟೆಂಬರ್​ 10: ಬೆಂಗಳೂರು (Bengaluru) ನಗರದಲ್ಲಿ ರೋಡ್ ರೇಜ್‌‌ (Road Rage) ಪ್ರಕರಣ ನಿಲ್ಲುತ್ತಿಲ್ಲ. ಕಾರು (Car) ಟಚ್​​​ ಆಯ್ತು ಅಂತ ಇಬ್ಬರು ಚಾಲಕರ ಮಧ್ಯೆ ಗಲಾಟೆ ನಡೆದಿದೆ. ಸೆಪ್ಟಂಬರ್ 5 ರಂದು ವೈಟ್ ಪಿಲ್ಡ್​​ನ ಐಟಿಪಿಎಲ್ ಮುಖ್ಯರಸ್ತೆಯಲ್ಲಿ ಗಲಾಟೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್​​ನ ಸಿಟಿಜನ್ಸ್​ ಮೂಮೆಂಟ್ಸ್​, ಈಸ್ಟ್​​ ಬೆಂಗಳೂರು ಖಾತೆ ಟ್ವೀಟ್​​ ಮಾಡಿ, ಘಟನೆಯನ್ನು ವಿವರಿಸಿದೆ.

ಧನುಶ್​​ ಎಂಬುವರು ಶಾಂತಿನಿಕೇತನ ಅಥವಾ ಬಿಗ್ ಬಜಾರ್ ಸ್ಟಾಪ್ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಹೆಚ್ಚಿನ ಟ್ರಾಫಿಕ್​ ನಡುವೆಯೇ ಧನುಶ್​ ಅವರು ಎದುರಿಗಿದ್ದ ಕಾರನ್ನು ಓವರ್​ ಟೆಕ್ ಮಾಡಲು ಮುಂದಾಗಿದ್ದಾರೆ. ಆದರೆ, ಕಾರು​​ ಚಾಲಕ ಇವರಿಗೆ ದಾರಿ ಬಿಡಲಿಲ್ಲ. ಕೊನೆಗೆ ಧನುಶ್ ಕಾರನ್ನು​ ಅನ್ನು ಓವರ್​ ಟೆಕ್​ ಮಾಡಿ ಮುಂದೆ ಹೋಗಿದ್ದಾರೆ. ಸ್ವಲ್ಪ ಹೊತ್ತಿನ ಬಳಿಕ ಧನುಶ್​ ಅವರನ್ನೇ ಹಿಂಬಾಲಿಸಿಕೊಂಡು ಬಂದ ಕಾರು ಚಾಲಕ ಓವರ್​ ಟೆಕ್​​ ಮಾಡಿ ಧನುಶ್ ಅವರನ್ನು ಅಡ್ಡ ಹಾಕಿದ್ದಾನೆ.

ಕಾರಿನಿಂದ ಇಳಿದು ಧನುಶ್ ಅವರ ಬಳಿಗೆ ಬಂದು, ನಿನ್ನ ಕಾರು ನನ್ನ ಕಾರಿಗೆ ಟಚ್​ ಆಗಿದೆ ಎಂದು ಜಗಳ ತೆಗೆದಿದ್ದಾನೆ. ಆಗ ಧನುಶ್​ ಪೊಲೀಸ್​ ಠಾಣೆಗೆ ಹೋಗೋಣ ನಡಿ ಎಂದಿದ್ದಾರೆ. ಧನುಶ್​ ಅವರ ಮಾತು ಆಲಿಸದ ಕಾರು ಚಾಲಕ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೇ ಕಾರಿನಿಂದ ಇಳಿಯುವಂತೆ ಒತ್ತಾಯಿಸಿದ್ದಾನೆ. ಬಳಿಕ ಧನುಶ್​ ಅವರ ಕಾರಿನ ಕಿಟಕಿಯ ಮೂಲಕ ಒಳಗೆ ಕೈ ಹಾಕಿ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾನೆ. ಆಗ ಧನುಶ್​ ಪೆಪ್ಪರ್ ಸ್ಪ್ರೇನಿಂದ ಕಾರು ಚಾಲಕನಿಗೆ ಸ್ಪ್ರೇ ಮಾಡಿದ್ದಾರೆ.

ಇದನ್ನೂ ಓದಿ: ಎಸ್​ಎಂವಿಟಿ ರೈಲು ನಿಲ್ದಾಣದಲ್ಲಿ ಹೊಸ ನಿಯಮ ಜಾರಿ, ಪ್ರಯಾಣಿಕರಿಗೆ ಸಂಕಷ್ಟ

ಬಳಿಕ, ಕಾರು ಚಾಲಕ ತನ್ನ ಕಾರಿನಲ್ಲಿದ್ದ ಸ್ಕ್ರೂ ಡೈವ್ ತಂದು ಕಿಟಕಿಯ ಗ್ಲಾಸಗೆ 3-4 ಬಾರಿ ಹೊಡೆದಿದ್ದಾನೆ. ಬಳಿಕ‌, ಸ್ಕ್ರೂ ಡೈವ್ ಮೂಲಕ ಕಾರಿನ ಬಾನೆಟ್, ಮಿರರ್ ಡ್ಯಾಮೇಜ್ ಮಾಡಿದ್ದಾನೆ. ಕೊನೆಗೆ ಧನುಶ್ ಮನೆಗೆ ಹೋಗಿ ತಮ್ಮ ಕಾರನ್ನು ಚೆಕ್​ ಮಾಡಿದಾಗ, ಕಾರಿನ ಮೇಲೆ ಯಾವುದೇ ಸ್ಕ್ರ್ಯಾಚ್ ಇರಲಿಲ್ಲ.​​​ ಕಾರು ​ಚಾಲಕ ಬೇಕಂತಲೇ ಈ ರೀತಿ ಮಾಡಿದ್ದಾನೆ ಎಂದು ಎಕ್ಸ್​​ನ ಸಿಟಿಜನ್ಸ್​ ಮೂಮೆಂಟ್ಸ್​, ಈಸ್ಟ್​​ ಬೆಂಗಳೂರು ಎಕ್ಸ್​​ ಖಾತೆಯಲ್ಲಿ ಬರೆಯಲಾಗಿದೆ. ಘಟನೆಯ ಎಲ್ಲ ದೃಶ್ಯಗಳು ಧನುಶ್​ ಅವರ ಕಾರಿನ ಡ್ಯಾಶ್ ಕ್ಯಾಮೆರದಲ್ಲಿ ಸೆರೆಯಾಗಿದೆ.

ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್​ ಪ್ರತಿಕ್ರಿಯಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಪೊಲೀಸ್​ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ