AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಯುವಕನ ಜೀವ ತೆಗೆದ ರೋಡ್‌ ರೇಜ್‌ ರೋಷ, ಬೈಕ್‌ ಟಚ್‌ ಆಗಿದ್ದಕ್ಕೆ ಕಾರಲ್ಲಿ ಗುದ್ದಿ ಕೊಲೆ

Bengaluru road rage: ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ರೊಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಕಳೆದ ಎರಡು ದಿನಗಳಲ್ಲೇ ನಾಲ್ಕಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಆದರೆ, ಬುಧವಾರ ರಾತ್ರಿ ನಡೆದ ರೋಡ್‌ ರೇಜ್‌ ಕೇಸ್‌ ಮಾತ್ರ ಎಲ್ಲವುಗಳನ್ನೂ ಮೀರಿಸಿದೆ. ಸಣ್ಣ ರೋಡ್‌ ರೇಜ್‌ ಗಲಾಟೆಗೆ ಒಬ್ಬ ಯುವಕನ ಕೊಲೆಯೇ ಆಗಿದೆ.

ಬೆಂಗಳೂರು: ಯುವಕನ ಜೀವ ತೆಗೆದ ರೋಡ್‌ ರೇಜ್‌ ರೋಷ, ಬೈಕ್‌ ಟಚ್‌ ಆಗಿದ್ದಕ್ಕೆ ಕಾರಲ್ಲಿ ಗುದ್ದಿ ಕೊಲೆ
ಅಪಘಾತದ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 22, 2024 | 7:00 AM

Share

ಬೆಂಗಳೂರು, ಆಗಸ್ಟ್ 22: ಬೆಂಗಳೂರಿನಲ್ಲಿ ದಿನನಿತ್ಯ ರೋಡ್‌ ರೇಜ್‌ ಘಟನೆಗಳು ಸರ್ವೇಸಾಮಾನ್ಯ ಎಂಬಂತೆ ನಡೆಯುತ್ತಿದೆ. ಆದರೆ, ಬುಧವಾರ ರಾತ್ರಿ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಮಾತ್ರ ಆಘಾತಕಾರಿಯಾಗಿದೆ. ಕಾರಿಗೆ ಬೈಕ್‌ ಟಚ್‌ ಆಯಿತು ಎಂದು ಶುರುವಾದ ಜಗಳದಲ್ಲಿ ಒಬ್ಬನ ಜೀವವನ್ನೇ ತೆಗೆದುಬಿಟ್ಟಿದ್ದಾರೆ. ಡೆಲಿವರಿ ಬಾಯ್ ಮಹೇಶ್ ಎಂಬಾತನೇ ಮೃತಪಟ್ಟ ಯುವಕ.

ಮಹೇಶ್, ಬುಧವಾರ ಸಂಜೆ ಗೆಳೆಯರಾದ ಬಾಲಾಜಿ ಮತ್ತು ನಿಖಿಲ್ ಜೊತೆ ಟೀ ಕುಡಿಯಲು ಹೋಗಿದ್ದ. ಟೀ ಕುಡಿದು ಬೈಕ್‌ನಲ್ಲಿ ಬರುವಾಗ ಸ್ಪೀಡಾಗಿ ಬಂದ ಕಾರು ಹಾರ್ನ್‌ ಮಾಡಿದರೂ ಸೈಡ್‌ ಕೊಟ್ಟಿಲ್ಲ. ಈ ವೇಳೆ ಕಾರಿಗೆ ಬೈಕ್‌ ಸ್ವಲ್ಪ ಟಚ್‌ ಆಗಿತ್ತಂತೆ. ಇದೇ ಸಿಟ್ಟಲ್ಲಿ ಕಾರು ಚಾಲಕ ಅರವಿಂದ್, ಬೈಕ್‌ ಚಾಲಕನನ್ನ ಚೇಸ್ ಮಾಡಿಕೊಂಡು ಹೋಗಿದ್ದಾನೆ. ಮುಖ್ಯ ರಸ್ತೆಯಿಂದ ತಿರುಗಿಸುವಾಗ ಬೈಕ್‌ನಲ್ಲಿ ಹಿಂಬದಿ ಕೂತಿದ್ದ ಇಬ್ಬರು ಕೆಳಗೆ ಬಿದ್ದಿದ್ದಾರೆ. ಆದರೆ, ಜಿಕೆವಿಕೆ ಲೇಔಟ್‌ಗೆ ನುಗ್ಗಿದ ಮಹೇಶ್ ಬೈಕ್‌ಗೆ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ತಿರುವಿನಲ್ಲಿದ್ದ ಮನೆಯ ಕಾಂಪೌಂಡ್‌ಗೆ ಮಹೇಶ್ ತಲೆ ಬಡಿದಿದೆ.

ಇನ್ನು, ಅಪಘಾತದ ನಂತರ ಗಾಯಗೊಂಡಿದ್ದ ಮಹೇಶ್‌ನನ್ನ ಹೊತ್ತೊಯ್ಯಲು ಕಾರು ಚಾಲಕ ಮುಂದಾಗಿದ್ದಾನೆ. ಆದರೆ, ರಕ್ತದ ಮಡುವಿನಲ್ಲಿದ್ದ ಮಹೇಶ್ ಸಾವನ್ನಪ್ಪಿದ್ದಾನೆ.

Bengaluru road rage: Delivery boy was punched and killed in a car for touching a bike, Kannada news

ಮೃತ ಯುವಕ ಮಹೇಶ್

ನಂತರ ಆರೋಪಿ ಅರವಿಂದ್‌ ಮತ್ತು ಕೇಶವ್‌ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಪ್ಪಿಕೊಂಡ ಬಾಲಾಜಿ ಎಂಬ ಯುವಕ ನೀಡಿದ ದೂರಿನ ಅನ್ವಯ ವಿದ್ಯಾರಾಣ್ಯಪುರ ಪೊಲೀಸರು ಕೊಲೆ ಕೇಸ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್​ರನ್ನು ಹೊಗಳಿದ್ದಕ್ಕೆ ಪತ್ನಿಯ ಮೈ ಸುಟ್ಟು, ತ್ರಿವಳಿ ತಲಾಖ್ ನೀಡಿದ ಗಂಡ

ಒಟ್ಟಿನಲ್ಲಿ ಕೋಟ್ಯಂತರ ವಾಹನಗಳಿರುವ ಬೆಂಗಳೂರಿನಲ್ಲಿ ನಿತ್ಯವೂ ಸಣ್ಣ ಪುಟ್ಟ ಅಪಘಾತಗಳು ಸಾಮಾನ್ಯವಾಗಿಬಿಟ್ಟಿದೆ. ಆದರೆ ಇದನ್ನೇ ದೊಡ್ಡದು ಮಾಡಿ, ತಾಳ್ಮೆ ಕಳೆದುಕೊಂಡರೆ ಏನೆಲ್ಲಾ ಅನಾಹುತ ಆಗಬಹುದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ