AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಯುವಕನ ಜೀವ ತೆಗೆದ ರೋಡ್‌ ರೇಜ್‌ ರೋಷ, ಬೈಕ್‌ ಟಚ್‌ ಆಗಿದ್ದಕ್ಕೆ ಕಾರಲ್ಲಿ ಗುದ್ದಿ ಕೊಲೆ

Bengaluru road rage: ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ರೊಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಕಳೆದ ಎರಡು ದಿನಗಳಲ್ಲೇ ನಾಲ್ಕಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಆದರೆ, ಬುಧವಾರ ರಾತ್ರಿ ನಡೆದ ರೋಡ್‌ ರೇಜ್‌ ಕೇಸ್‌ ಮಾತ್ರ ಎಲ್ಲವುಗಳನ್ನೂ ಮೀರಿಸಿದೆ. ಸಣ್ಣ ರೋಡ್‌ ರೇಜ್‌ ಗಲಾಟೆಗೆ ಒಬ್ಬ ಯುವಕನ ಕೊಲೆಯೇ ಆಗಿದೆ.

ಬೆಂಗಳೂರು: ಯುವಕನ ಜೀವ ತೆಗೆದ ರೋಡ್‌ ರೇಜ್‌ ರೋಷ, ಬೈಕ್‌ ಟಚ್‌ ಆಗಿದ್ದಕ್ಕೆ ಕಾರಲ್ಲಿ ಗುದ್ದಿ ಕೊಲೆ
ಅಪಘಾತದ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 22, 2024 | 7:00 AM

Share

ಬೆಂಗಳೂರು, ಆಗಸ್ಟ್ 22: ಬೆಂಗಳೂರಿನಲ್ಲಿ ದಿನನಿತ್ಯ ರೋಡ್‌ ರೇಜ್‌ ಘಟನೆಗಳು ಸರ್ವೇಸಾಮಾನ್ಯ ಎಂಬಂತೆ ನಡೆಯುತ್ತಿದೆ. ಆದರೆ, ಬುಧವಾರ ರಾತ್ರಿ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಮಾತ್ರ ಆಘಾತಕಾರಿಯಾಗಿದೆ. ಕಾರಿಗೆ ಬೈಕ್‌ ಟಚ್‌ ಆಯಿತು ಎಂದು ಶುರುವಾದ ಜಗಳದಲ್ಲಿ ಒಬ್ಬನ ಜೀವವನ್ನೇ ತೆಗೆದುಬಿಟ್ಟಿದ್ದಾರೆ. ಡೆಲಿವರಿ ಬಾಯ್ ಮಹೇಶ್ ಎಂಬಾತನೇ ಮೃತಪಟ್ಟ ಯುವಕ.

ಮಹೇಶ್, ಬುಧವಾರ ಸಂಜೆ ಗೆಳೆಯರಾದ ಬಾಲಾಜಿ ಮತ್ತು ನಿಖಿಲ್ ಜೊತೆ ಟೀ ಕುಡಿಯಲು ಹೋಗಿದ್ದ. ಟೀ ಕುಡಿದು ಬೈಕ್‌ನಲ್ಲಿ ಬರುವಾಗ ಸ್ಪೀಡಾಗಿ ಬಂದ ಕಾರು ಹಾರ್ನ್‌ ಮಾಡಿದರೂ ಸೈಡ್‌ ಕೊಟ್ಟಿಲ್ಲ. ಈ ವೇಳೆ ಕಾರಿಗೆ ಬೈಕ್‌ ಸ್ವಲ್ಪ ಟಚ್‌ ಆಗಿತ್ತಂತೆ. ಇದೇ ಸಿಟ್ಟಲ್ಲಿ ಕಾರು ಚಾಲಕ ಅರವಿಂದ್, ಬೈಕ್‌ ಚಾಲಕನನ್ನ ಚೇಸ್ ಮಾಡಿಕೊಂಡು ಹೋಗಿದ್ದಾನೆ. ಮುಖ್ಯ ರಸ್ತೆಯಿಂದ ತಿರುಗಿಸುವಾಗ ಬೈಕ್‌ನಲ್ಲಿ ಹಿಂಬದಿ ಕೂತಿದ್ದ ಇಬ್ಬರು ಕೆಳಗೆ ಬಿದ್ದಿದ್ದಾರೆ. ಆದರೆ, ಜಿಕೆವಿಕೆ ಲೇಔಟ್‌ಗೆ ನುಗ್ಗಿದ ಮಹೇಶ್ ಬೈಕ್‌ಗೆ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ತಿರುವಿನಲ್ಲಿದ್ದ ಮನೆಯ ಕಾಂಪೌಂಡ್‌ಗೆ ಮಹೇಶ್ ತಲೆ ಬಡಿದಿದೆ.

ಇನ್ನು, ಅಪಘಾತದ ನಂತರ ಗಾಯಗೊಂಡಿದ್ದ ಮಹೇಶ್‌ನನ್ನ ಹೊತ್ತೊಯ್ಯಲು ಕಾರು ಚಾಲಕ ಮುಂದಾಗಿದ್ದಾನೆ. ಆದರೆ, ರಕ್ತದ ಮಡುವಿನಲ್ಲಿದ್ದ ಮಹೇಶ್ ಸಾವನ್ನಪ್ಪಿದ್ದಾನೆ.

Bengaluru road rage: Delivery boy was punched and killed in a car for touching a bike, Kannada news

ಮೃತ ಯುವಕ ಮಹೇಶ್

ನಂತರ ಆರೋಪಿ ಅರವಿಂದ್‌ ಮತ್ತು ಕೇಶವ್‌ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಪ್ಪಿಕೊಂಡ ಬಾಲಾಜಿ ಎಂಬ ಯುವಕ ನೀಡಿದ ದೂರಿನ ಅನ್ವಯ ವಿದ್ಯಾರಾಣ್ಯಪುರ ಪೊಲೀಸರು ಕೊಲೆ ಕೇಸ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್​ರನ್ನು ಹೊಗಳಿದ್ದಕ್ಕೆ ಪತ್ನಿಯ ಮೈ ಸುಟ್ಟು, ತ್ರಿವಳಿ ತಲಾಖ್ ನೀಡಿದ ಗಂಡ

ಒಟ್ಟಿನಲ್ಲಿ ಕೋಟ್ಯಂತರ ವಾಹನಗಳಿರುವ ಬೆಂಗಳೂರಿನಲ್ಲಿ ನಿತ್ಯವೂ ಸಣ್ಣ ಪುಟ್ಟ ಅಪಘಾತಗಳು ಸಾಮಾನ್ಯವಾಗಿಬಿಟ್ಟಿದೆ. ಆದರೆ ಇದನ್ನೇ ದೊಡ್ಡದು ಮಾಡಿ, ತಾಳ್ಮೆ ಕಳೆದುಕೊಂಡರೆ ಏನೆಲ್ಲಾ ಅನಾಹುತ ಆಗಬಹುದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?