AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ರೋಡ್ ರೇಜ್; ಎಕ್ಸ್ ಪೋಸ್ಟ್ ನೋಡಿ ಆರೋಪಿಯನ್ನು ಹಿಡಿದ ಪೊಲೀಸರು

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರೋಡ್ ರೇಜ್ ಘಟನೆಯಲ್ಲಿ, ಸ್ಕೂಟರ್ ಸವಾರನೊಬ್ಬ ಕಾರಿನ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಚಾಕುವಿನಿಂದ ಬೆದರಿಕೆ ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತರು ಡ್ಯಾಶ್‌ಕ್ಯಾಮ್ ದೃಶ್ಯಾವಳಿಯನ್ನು X ನಲ್ಲಿ ಹಂಚಿಕೊಂಡ ನಂತರ, ಬೆಂಗಳೂರು ಪೊಲೀಸರು ತ್ವರಿತವಾಗಿ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿದ್ದಾರೆ. ಆಯುಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ರೋಡ್ ರೇಜ್; ಎಕ್ಸ್ ಪೋಸ್ಟ್ ನೋಡಿ ಆರೋಪಿಯನ್ನು ಹಿಡಿದ ಪೊಲೀಸರು
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ರೋಡ್ ರೇಜ್
ಭಾವನಾ ಹೆಗಡೆ
|

Updated on: Jan 18, 2026 | 12:55 PM

Share

ಬೆಂಗಳೂರು, ಜನವರಿ 18: ನಗರದಲ್ಲಿ ರೋಡ್ ರೇಜ್ ಪ್ರಕರಣಗಳಿಗೆ ಕೊನೆಯಿಲ್ಲದಂತಾಗಿದ್ದು,   ಶುಕ್ರವಾರ (ಜನವರಿ 16) ಸಂಜೆ ಮಾಲ್ ಎದುರು ಕಾರ್ ಒಂದನ್ನು ನಿಲ್ಲಿಸಿದ ಆರೋಪಿ, ಅವಾಚ್ಯ ಶಬ್ಧಗಳಿಂದ ಬೈದು ಪರಾರಿಯಾಗಿದ ಘಟನೆ ನಡೆದಿದೆ. ಈ ಕುರಿತು ಸಂತ್ರಸ್ತರು ಎಕ್ಸ್ ಪೋಸ್ಟ್ ಹಂಚಿಕೊಂಡ ನಂತರ ಘಟನೆ ಪೊಲೀಸರ ಗಮನಕ್ಕೆ ಬಂದಿದ್ದು, ದ್ವಿಚಕ್ರವಾಹನ ಸವಾರನ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಧ್ಯರಸ್ತೆಯಲ್ಲಿ ಕಾರನ್ನು ನಿಲ್ಲಿಸಿ, ಅವಾಚ್ಯ ಶಬ್ಧಗಳಿಂದ ನಿಂದನೆ

ಶುಕ್ರವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಪ್ರೆಸ್ಟೀಜ್ ಶಾಂತಿನಿಕೇತನ ಮಾಲ್ ಎದುರು ಈ ಘಟನೆ ನಡೆದಿದ್ದು, ಈ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸ್ಕೂಟರ್ ಸವಾರನಾದ ಅರ್ಬಾಜ್ ಖಾನ್‌, ಎ. ರೆಡ್ಡಿ ಎಂಬವರ ಕಾರನ್ನು ಮಧ್ಯರಸ್ತೆಯಲ್ಲಿ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ಅಲ್ಲದೆ, ಏಕಾಏಕಿ ಚಾಕುವನ್ನು ಹೊರತೆಗೆದು ಕಾರಿನೊಳಗಿದ್ದವರಿಗೆ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್: ಸಿನಿಮೀಯ ರೀತಿಯಲ್ಲಿ ಕಾರು ಚೇಸ್ ಮಾಡಿ ಬೈಕ್ ಸವಾರನ ಕಿರಿಕ್

ಎಕ್ಸ್ ಪೋಸ್ಟ್ ನೋಡಿ ಆರೊಪಿಯನ್ನು ಸೆರೆಹಿಡಿದ ಪೊಲೀಸರು

ಘಟನೆಯ ನಂತರ ಸಂತ್ರಸ್ತರು ತಮ್ಮ ಕಾರಿನ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯವನ್ನು Xನಲ್ಲಿ ಹಂಚಿಕೊಂಡಿದ್ದು, ಬೆಂಗಳೂರು ಪೊಲೀಸ್‌ ಇಲಾಖೆಯನ್ನು ಟ್ಯಾಗ್ ಮಾಡಿದ್ದರು. ಪೋಸ್ಟ್ ನೋಡಿದ ಬಳಿಕ ವಿಡಿಯೋದಲ್ಲಿ ಕಾಣಿಸಿಕೊಂಡ ಸ್ಕೂಟರ್‌ನ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ವಾಹನವನ್ನು ಅಕ್ರಮವಾಗಿ ತಡೆದು, ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.