AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಸ್ತೆ ಅಗಲೀಕರಣ ಅಸಾಧ್ಯ, ಟ್ರಾಫಿಕ್ ಸಮಸ್ಯೆಗೆ ಸುರಂಗ ಮಾರ್ಗವೊಂದೇ ಪರಿಹಾರ: ಡಿಕೆ ಶಿವಕುಮಾರ್

ಬೆಂಗಳೂರಿನ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಸುರಂಗ ಮಾರ್ಗ ಏಕೈಕ ಪರಿಹಾರ ಎಂದಿರುವ ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ಸರ್ಕಾರದ ಯೋಜನೆಯನ್ನು ವಿಧಾನ ಪರಿಷತ್‌ನಲ್ಲಿ ಸಮರ್ಥಿಸಿಕೊಂಡಿದ್ದಾರೆ. ರಸ್ತೆ ಅಗಲೀಕರಣ ಯಾಕೆ ಅಸಾಧ್ಯ ಎಂಬುದನ್ನು ವಿವರಿಸಿದ ಅವರು, ಸುರಂಗ ಮಾರ್ಗ ಯೋಜನೆಯ ಖರ್ಚುವೆಚ್ಚಗಳ ವಿವರ, ಯೋಜನೆ ಅನುಷ್ಠಾನ ಹೇಗೆ ಎಂಬುದನ್ನು ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ರಸ್ತೆ ಅಗಲೀಕರಣ ಅಸಾಧ್ಯ, ಟ್ರಾಫಿಕ್ ಸಮಸ್ಯೆಗೆ ಸುರಂಗ ಮಾರ್ಗವೊಂದೇ ಪರಿಹಾರ: ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಗಣಪತಿ ಶರ್ಮಾ
|

Updated on: Aug 15, 2025 | 7:19 AM

Share

ಬೆಂಗಳೂರು, ಆಗಸ್ಟ್ 15: ಬೆಂಗಳೂರಿನ (Bengaluru) ಸಂಚಾರ ದಟ್ಟಣೆ ಸಮಸ್ಯೆಗೆ ಸುರಂಗ ಮಾರ್ಗವೊಂದೇ (Tunnel Road) ಪರಿಹಾರ ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪ್ರತಿಪಾದಿಸಿದ್ದಾರೆ. ವಿಧಾನ ಪರಿಷತ್​​ ಕಲಾಪದಲ್ಲಿ ಗುರುವಾರ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರಿನಲ್ಲಿ ರಸ್ತೆ ಅಗಲೀಕರಣ ಅಸಾಧ್ಯ. ಅದಕ್ಕೆ ಯಾರೂ ಸಿದ್ಧರಿಲ್ಲ. ಫ್ಲೈಓವರ್‌ಗಳು ಮತ್ತು ಮೆಟ್ರೋ ಮಾಡಲಾಗಿದೆ. ನಾವು ಸಂಚಾರ ಸಮೀಕ್ಷೆ ಮಾಡಿದ್ದೇವೆ. ಸುರಂಗ ಮಾರ್ಗವನ್ನು ಹೊರತುಪಡಿಸಿ ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಸರ್ಕಾರವು ಭೂಸ್ವಾಧೀನದ ಅತಿಯಾದ ವೆಚ್ಚವನ್ನು ಭರಿಸಲು ಸಾಧ್ಯವಿಲ್ಲ. ಆಸ್ತಿ ಮಾಲೀಕರಿಗೆ ಎರಡು ಪಟ್ಟು ದರವನ್ನು ಪಾವತಿಸಬೇಕಾಗುತ್ತದೆ ಎಂದೂ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿರುವ ಹೆಚ್ಚಿನ ಆಸ್ತಿಗಳು ಪ್ರತಿ ಚದರ ಅಡಿಗೆ 10,000 ರೂ.ಗಿಂತ ಹೆಚ್ಚಿನ ಮೌಲ್ಯವನ್ನು ಹೊಂದಿವೆ ಎಂದು ಅವರು ಹೇಳಿದ್ದಾರೆ.

ಸುರಂಗ ಮಾರ್ಗ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಹಲವರು ಆಸಕ್ತಿ ವ್ಯಕ್ತಪಡಿಸಿರುವುದರಿಂದ, ಟೆಂಡರ್‌ನಲ್ಲಿ ಭಾಗವಹಿಸುವ ಗಡುವನ್ನು ಸಹ ಮುಂದೂಡುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರ ಸುಮಾರು ಒಂದೂವರೆ ವರ್ಷಗಳಿಂದ ಈ ಯೋಜನೆಗಾಗಿ ಕೆಲಸ ಮಾಡುತ್ತಿದೆ. ಯೋಜನೆಯು 60:40 ಆಧಾರದ ಮೇಲೆ ನಡೆಯಲಿದೆ. ಸರ್ಕಾರವು ವೆಚ್ಚದ ಶೇ 40 ಅನ್ನು ಒದಗಿಸುತ್ತದೆ ಮತ್ತು (ಟೆಂಡರ್​​ನಲ್ಲಿ ಭಾಗವಹಿಸುವ) ಕಂಪನಿಯು ವೆಚ್ಚದ ಶೇ 60 ಅನ್ನು ಭರಿಸಲಿದೆ. ಕಂಪನಿಗೆ ಟೋಲ್ ಶುಲ್ಕವನ್ನು ಸಂಗ್ರಹಿಸಲು ಅನುಮತಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಕಡಿಮೆ ವೆಚ್ಚದಲ್ಲೇ ದೊಡ್ಡ ಸುರಂಗ ಮಾರ್ಗ: ಡಿಕೆ ಶಿವಕುಮಾರ್

ಬೆಂಗಳೂರು ಸುರಂಗ ರಸ್ತೆಯೇ ದೇಶದಲ್ಲಿ ಅತಿ ದೊಡ್ಡದಾಗಿರುತ್ತದೆ ಎಂದು ಹೇಳಿಕೊಂಡ ಶಿವಕುಮಾರ್, ಇದನ್ನು ಇತರ ನಗರಗಳಲ್ಲಿನ ಸುರಂಗ ರಸ್ತೆಗಳೊಂದಿಗೆ ಹೋಲಿಸುವ ಅಗತ್ಯವಿಲ್ಲ. ಗೈಮುಖ್ ಸುರಂಗ, ಮುಂಬೈನ ಆರೆಂಜ್ ಗೇಟ್ ಸುರಂಗದಂತಹ ಇತರ ಪ್ರಮುಖ ಸುರಂಗ ಯೋಜನೆಗಳೊಂದಿಗೆ ಹೋಲಿಸಿದರೆ, ನಮ್ಮ ಸುರಂಗ ಮಾರ್ಗದ ವೆಚ್ಚವು ತುಂಬಾ ಅಗ್ಗವಾಗಿದೆ. ಈ ಎರಡೂ ಸುರಂಗಗಳಲ್ಲಿ, ಪ್ರತಿ ಕಿಲೋಮೀಟರಿಗೆ 1,316 ಕೋಟಿ ರೂ. ವೆಚ್ಚವಾಗಿದ್ದರೆ, ನಮ್ಮ ಸುರಂಗ ರಸ್ತೆಯ ವೆಚ್ಚವು ಪ್ರತಿ ಕಿಲೋಮೀಟರಿಗೆ 770 ಕೋಟಿ ರೂ. ಮಾತ್ರ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮುಜರಾಯಿ ದೇವಾಲಯಗಳಲ್ಲಿ ಸಂಸ್ಕೃತ ಬದಲು ಕನ್ನಡದಲ್ಲೇ ಶ್ಲೋಕ

ಈ ಮೂಲಕ, ಸುರಂಗ ಮಾರ್ಗಕ್ಕೆ ಸರ್ಕಾರ ಅತಿಯಾದ ವೆಚ್ಚ ಮಾಡುತ್ತಿದೆ ಎಂಬ ಆರೋಪಗಳನ್ನು ಡಿಕೆ ಶಿವಕುಮಾರ್ ಅಲ್ಲಗಳೆದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ