AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್​: ಮತ್ತೆ 42 ಲಕ್ಷ ರೂ. ಜಪ್ತಿ; ಈವರೆಗೆರಿ ಕವರಿಯಾದ ಹಣವೆಷ್ಟು?

ಬೆಂಗಳೂರಿನಲ್ಲಿ 7.11 ಕೋಟಿ ರೂ. ದರೋಡೆ ಪ್ರಕರಣ ಸಂಬಂಧ, ಪೊಲೀಸರು ಮತ್ತೆ 47 ಲಕ್ಷ ರೂಪಾಯಿ ಹಣ ಜಪ್ತಿ ಮಾಡಿದ್ದಾರೆ. ಹೈದರಾಬಾದ್​​ನ ಲಾಡ್ಜ್​​ ಒಂದರಲ್ಲಿ ಸಿಕ್ಕಿಬಿದ್ದಿದ್ದ ಆರೋಪಿ ನವೀನ್ ನೀಡಿದ್ದ ಮಾಹಿತಿ ಆಧಾರದಲ್ಲಿ ಈ ಹಣ ವಶಕ್ಕೆ ಪಡೆಯಲಾಗಿದೆ. ಕೇಸ್​ ಸಂಬಂಧ ಒಟ್ಟು 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಉಳಿದ ಹಣಕ್ಕಾಗಿ ತನಿಖೆ ಮುಂದುವರಿದಿದೆ.

ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್​: ಮತ್ತೆ 42 ಲಕ್ಷ ರೂ. ಜಪ್ತಿ; ಈವರೆಗೆರಿ ಕವರಿಯಾದ ಹಣವೆಷ್ಟು?
ದರೋಡೆಯಾಗಿದ್ದ ಹಣದ ಪೈಕಿ 11.01 ಕೋಟಿ ರೂ. ಈವರೆಗೆ ವಶಕ್ಕೆ.
ರಾಚಪ್ಪಾಜಿ ನಾಯ್ಕ್
| Edited By: |

Updated on: Nov 25, 2025 | 11:40 AM

Share

ಬೆಂಗಳೂರು, ನವೆಂಬರ್​​ 25: ಎಟಿಂಗಳಿಗೆ ಹಣ ಒಯ್ಯುತ್ತಿದ್ದ ವಾಹನವನ್ನು ಅಧಿಕಾರಿಗಳ ಸೋಗಿನಲ್ಲಿ ತಡೆದು 7.11 ಕೋಟಿ ರೂಪಾಯಿ ದರೋಡೆ ಪ್ರಕರಣ ಸಂಬಂಧ 47 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆ ಮೂಲಕ ಕೇಸ್​ ಸಂಬಂಧ ಈವರೆಗೆ 7.01 ಕೋಟಿ ರೂಪಾಯಿ ರಿಕವರಿ ಆದಂತಾಗಿದೆ. ಉಳಿದ 10 ಲಕ್ಷ ರೂಪಾಯಿ ಬಗ್ಗೆ ತನಿಖೆ ಮುಂದುವರಿದಿದ್ದು, ಬಂಧಿತ 9 ಆರೋಪಿಗಳ ವಿಚಾರಣೆ ತೀವ್ರಗೊಂಡಿದೆ.

ಕುಪ್ಪಂನ ಮನೆಯಲ್ಲಿ ಹಣ ಜಪ್ತಿ

ಪ್ರಕರಣ ಸಂಬಂಧ ನವೀನ್​ ಎಂಬಾತನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ಹೈದರಾಬಾದ್​​ನ ಲಾಡ್ಜ್​​ ಒಂದರಲ್ಲಿ 53 ಲಕ್ಷ ರೂ. ಹಣದ ಜೊತೆಗೆ ಆರೋಪಿ ಸಿಕ್ಕಿಬಿದ್ದಿದ್ದ. ಎರಡು ದಿನಗಳ ಕಾಲ ಆತನ ಸತತ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ನವೀನ್​ ನೀಡಿರುವ ಮಾಹಿತಿ ಆಧರಿಸಿ ನಿನ್ನೆ ರಾತ್ರಿ ಕುಪ್ಪಂನ ಮನೆಯೊಂದರಲ್ಲಿದ್ದ 47 ಲಕ್ಷ ಹಣವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಬೆನ್ನತ್ತಿದ್ದ ಪೊಲೀಸರು ಹೊಸಕೋಟೆಯ ಪಾಳುಬಿದ್ದ ಮನೆಯಲ್ಲಿ ಆರೋಪಿಗಳು ಬಚ್ಚಿಟ್ಟಿದ್ದ 5.56 ಕೋಟಿ ರೂ.ಗಳನ್ನು ಈಗಾಗಲೇ ಪತ್ತೆ ಮಾಡಿದ್ದರು. ಆ ಬಳಿಕ ಹಂತ ಹಂತವಾಗಿ ಒಟ್ಟು 7.01 ಕೋಟಿ ರೂಪಾಯಿಗಳನ್ನು ರಿಕವರಿ ಮಾಡಲಾಗಿದೆ.

ಇದನ್ನೂ ಓದಿ: ಖಾಕಿ ತನಿಖೆ ವೇಳೆ ಬಯಲಾಯ್ತು 7.11 ಕೋಟಿ ಹಣ ದರೋಡೆಯ ಗುಟ್ಟು!

ಹಣಕಾಸಿನ ಸಮಸ್ಯೆಯಿಂದ ಬಳಲುತ್ತಿದ್ದ ಆರೋಪಿಗಳು, ಸಾಲ ತೀರಿಸುವ ಉದ್ದೇಶದಿಂದ ಹಣ ದರೋಡೆ ಮಾಡಿದ್ದರು. ಉಳಿದ ಹಣದಲ್ಲಿ ಐಷಾರಾಮಿ ಜೀವನ ನಡೆಸುವ ಕನಸು ಅವರದ್ದಾಗಿತ್ತು ಎಂಬುದು ಪೊಲೀಸ್​​ ತನಿಖೆ ವೇಳೆ  ಬಯಲಾಗಿದೆ . ಮುಖ್ಯ ಆರೋಪಿಗಳಾದ ಗೋಪಿ ಮತ್ತು ಕ್ಸೇವಿಯರ್ 17 ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದರು. ಆ ಪೈಕಿ ಕ್ಸೇವಿಯರ್ ಒಂದು ವರ್ಷದ ಹಿಂದೆಯೇ ಕೆಲಸ ಬಿಟ್ಟಿದ್ದ. ಕುಡಿತ, ಜೂಜಿನ ಚಟದಿಂದಾಗಿ ಆರೋಪಿಗಳು ಹಣಕಾಸು ಸಮಸ್ಯೆಗೆ ಸಿಲುಕಿದ್ದರು. ಈ ಹಿನ್ನಲೆ ಪೊಲೀಸ್ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಪ್ಲ್ಯಾನ್ ಪ್ರಕಾರ ATM ವಾಹನ ದರೋಡೆ ಮಾಡಲಾಗಿದ್ದು, ಹಾಲಿ ಸಿಬ್ಬಂದಿ ಗೋಪಿಯೇ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್​ ಎಂಬುದು ಬಹಿರಂಗವಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್