AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಕೊಲೆ ಕೇಸ್, 11 ಆರೋಪಿಗಳು ಪೊಲೀಸ್ ವಶಕ್ಕೆ

ಬೆಂಗಳೂರಿನಲ್ಲಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಕೊಲೆ ಕೇಸ್, 11 ಆರೋಪಿಗಳು ಪೊಲೀಸ್ ವಶಕ್ಕೆ
ಬಂಧಿತ ಆರೋಪಿಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 07, 2023 | 7:00 AM

Share

ಬೆಂಗಳೂರು, (ಆಗಸ್ಟ್ 07): ಮೊನ್ನೇ ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್(Rowdy Sheeter)​ ಸಿದ್ದಾಪುರ ಮಹೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಮಿಳುನಾಡಿನ ಹೊಸೂರು ಬಳಿ 11 ಆರೋಪಿಗಳನ್ನು ಬೆಂಗಳೂರಿನ (Bengaluru) ಪರಪ್ಪನ ಅಗ್ರಹಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿದ್ದಾಪುರ ಸುನೀಲ್,‌ ಕಣ್ಣನ್ ವೇಲ, ಪ್ರದೀಪ್, ಮನು, ಗ್ರೇಸ್ ವಾಲ್ಟರ್, ಶ್ರೀನಿವಾಸ ಅಲಿಯಾಸ್​​​ ಪಾಪ, ಗೋಕುಲ್, ಸುರೇಶ್​​​​​, ಕಾರ್ತಿಕ್, ವಾಲೆ ಪ್ರವೀಣ ಸೇರಿ 11 ಆರೋಪಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಆದ್ರೆ, ರೌಡಿಶೀಟರ್​ ವಿಲ್ಸನ್​ಗಾರ್ಡನ್​ ನಾಗ ತಲೆಮರೆಸಿಕೊಂಡಿದ್ದಾನೆ.

ಇದನ್ನೂ ಓದಿ: ಮಚ್ಚು ಹಿಡಿದು ಮೆರೆದವನು ಮಚ್ಚಿನಿಂದಲೇ ಅಂತ್ಯ, ತನ್ನ ಭವಿಷ್ಯವನ್ನು ತಾನೇ ನುಡಿದಿದ್ದ ಹತ್ಯೆಯಾದ ರೌಡಿಶೀಟರ್

ಮೊನ್ನೆ (ಆಗಸ್ಟ್ 06) ಜೈಲಿನಿಂದ ಹೊರ ಬಂದ ಕಲವೇ ಗಂಟೆಗಳಲ್ಲಿ ಮಹೇಶ್​ನನ್ನು ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನ ಗ್ಯಾಂಗ್ ಹತ್ಯೆ ಮಾಡಿತ್ತು. ಈ ಸಂಬಂಧ ರೌಡಿಶೀಟರ್​​​ ವಿಲ್ಸನ್​​ಗಾರ್ಡನ್​​​ ನಾಗ, ಡಬಲ್ ಮೀಟರ್​ ಮೋಹನ್​​, ಸುನೀಲ್​ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಇದೀಗ ವಿಲ್ಸನ್ ಗಾರ್ಡನ್ ನಾಗನ ಗ್ಯಾಂಗ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಇನ್ನು ತಲೆಮರೆಸಿಕೊಂಡಿರುವ ಡಬಲ್ ಮೀಟರ್ ಮೋಹನ್ ಹಾಗೂ ವಿಲ್ಸನ್​ ಗಾರ್ಡನ್​ ನಾಗನಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

ಗ್ಯಾಂಗ್​ ವಾರ್​​, ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಹೇಶ್​ನನ್ನು ಕೊಲೆ ಮಾಡಲಾಗಿತ್ತು. ಮುಖ್ಯವಾಗಿ ವಿಲ್ಸನ್​ಗಾರ್ಡನ್​​​ ನಾಗನ ಕೊಲೆಗೆ ಮಹೇಶ್ ಸಂಚು ರೂಪಿಸಿದ್ದ. ಹೀಗಾಗಿ ರೌಡಿಶೀಟರ್​ ಸಿದ್ದಾಪುರ ಮಹೇಶ್ ನಾಗನ ವಿರೋಧಿಗಳನ್ನು ಒಗ್ಗೂಡಿಸಿದ್ದ​ ಎನ್ನಲಾಗಿದೆ. ಸುಮಾರು 30 ರೌಡಿಗಳ ಗ್ಯಾಂಗ್​ ಕಟ್ಟಿಕೊಂಡು ನಾಗನ ಹತ್ಯೆಗೆ ಸಂಚು ರೂಪಿಸಿದ್ದ. ಈ ಸಂಚಿನ ಬಗ್ಗೆ ತಿಳಿದ ನಾಗನ ಗ್ಯಾಂಗ್, ಮಹೇಶ್ ನನ್ನೇ ಹತ್ಯೆ ಮಾಡಿದೆ.

ಈ ಹಿಂದೆ ಶಾಂತಿನಗರ ಲಿಂಗನನ್ನು ನಾಗನ ಗ್ಯಾಂಗ್ ಕೊಲೆ ಮಾಡಿತ್ತು. ಅದಕ್ಕೆ ಪ್ರತೀಕಾರವಾಗಿ ಮಹೇಶ, ನಾಗನ ಗೆಳೆಯ ಮದನ್​ನನ್ನು ಕೊಲೆ ಮಾಡಿದ್ದ. ಮದನ ಕೊಲೆಗೆ ಸೇಡು ತೀರಿಸಿಕೊಳ್ಳಲು ಮಹೇಶನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!