AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಕೊಲೆ ಕೇಸ್, 11 ಆರೋಪಿಗಳು ಪೊಲೀಸ್ ವಶಕ್ಕೆ

ಬೆಂಗಳೂರಿನಲ್ಲಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಕೊಲೆ ಕೇಸ್, 11 ಆರೋಪಿಗಳು ಪೊಲೀಸ್ ವಶಕ್ಕೆ
ಬಂಧಿತ ಆರೋಪಿಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 07, 2023 | 7:00 AM

Share

ಬೆಂಗಳೂರು, (ಆಗಸ್ಟ್ 07): ಮೊನ್ನೇ ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್(Rowdy Sheeter)​ ಸಿದ್ದಾಪುರ ಮಹೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಮಿಳುನಾಡಿನ ಹೊಸೂರು ಬಳಿ 11 ಆರೋಪಿಗಳನ್ನು ಬೆಂಗಳೂರಿನ (Bengaluru) ಪರಪ್ಪನ ಅಗ್ರಹಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿದ್ದಾಪುರ ಸುನೀಲ್,‌ ಕಣ್ಣನ್ ವೇಲ, ಪ್ರದೀಪ್, ಮನು, ಗ್ರೇಸ್ ವಾಲ್ಟರ್, ಶ್ರೀನಿವಾಸ ಅಲಿಯಾಸ್​​​ ಪಾಪ, ಗೋಕುಲ್, ಸುರೇಶ್​​​​​, ಕಾರ್ತಿಕ್, ವಾಲೆ ಪ್ರವೀಣ ಸೇರಿ 11 ಆರೋಪಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಆದ್ರೆ, ರೌಡಿಶೀಟರ್​ ವಿಲ್ಸನ್​ಗಾರ್ಡನ್​ ನಾಗ ತಲೆಮರೆಸಿಕೊಂಡಿದ್ದಾನೆ.

ಇದನ್ನೂ ಓದಿ: ಮಚ್ಚು ಹಿಡಿದು ಮೆರೆದವನು ಮಚ್ಚಿನಿಂದಲೇ ಅಂತ್ಯ, ತನ್ನ ಭವಿಷ್ಯವನ್ನು ತಾನೇ ನುಡಿದಿದ್ದ ಹತ್ಯೆಯಾದ ರೌಡಿಶೀಟರ್

ಮೊನ್ನೆ (ಆಗಸ್ಟ್ 06) ಜೈಲಿನಿಂದ ಹೊರ ಬಂದ ಕಲವೇ ಗಂಟೆಗಳಲ್ಲಿ ಮಹೇಶ್​ನನ್ನು ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನ ಗ್ಯಾಂಗ್ ಹತ್ಯೆ ಮಾಡಿತ್ತು. ಈ ಸಂಬಂಧ ರೌಡಿಶೀಟರ್​​​ ವಿಲ್ಸನ್​​ಗಾರ್ಡನ್​​​ ನಾಗ, ಡಬಲ್ ಮೀಟರ್​ ಮೋಹನ್​​, ಸುನೀಲ್​ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಇದೀಗ ವಿಲ್ಸನ್ ಗಾರ್ಡನ್ ನಾಗನ ಗ್ಯಾಂಗ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಇನ್ನು ತಲೆಮರೆಸಿಕೊಂಡಿರುವ ಡಬಲ್ ಮೀಟರ್ ಮೋಹನ್ ಹಾಗೂ ವಿಲ್ಸನ್​ ಗಾರ್ಡನ್​ ನಾಗನಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

ಗ್ಯಾಂಗ್​ ವಾರ್​​, ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಹೇಶ್​ನನ್ನು ಕೊಲೆ ಮಾಡಲಾಗಿತ್ತು. ಮುಖ್ಯವಾಗಿ ವಿಲ್ಸನ್​ಗಾರ್ಡನ್​​​ ನಾಗನ ಕೊಲೆಗೆ ಮಹೇಶ್ ಸಂಚು ರೂಪಿಸಿದ್ದ. ಹೀಗಾಗಿ ರೌಡಿಶೀಟರ್​ ಸಿದ್ದಾಪುರ ಮಹೇಶ್ ನಾಗನ ವಿರೋಧಿಗಳನ್ನು ಒಗ್ಗೂಡಿಸಿದ್ದ​ ಎನ್ನಲಾಗಿದೆ. ಸುಮಾರು 30 ರೌಡಿಗಳ ಗ್ಯಾಂಗ್​ ಕಟ್ಟಿಕೊಂಡು ನಾಗನ ಹತ್ಯೆಗೆ ಸಂಚು ರೂಪಿಸಿದ್ದ. ಈ ಸಂಚಿನ ಬಗ್ಗೆ ತಿಳಿದ ನಾಗನ ಗ್ಯಾಂಗ್, ಮಹೇಶ್ ನನ್ನೇ ಹತ್ಯೆ ಮಾಡಿದೆ.

ಈ ಹಿಂದೆ ಶಾಂತಿನಗರ ಲಿಂಗನನ್ನು ನಾಗನ ಗ್ಯಾಂಗ್ ಕೊಲೆ ಮಾಡಿತ್ತು. ಅದಕ್ಕೆ ಪ್ರತೀಕಾರವಾಗಿ ಮಹೇಶ, ನಾಗನ ಗೆಳೆಯ ಮದನ್​ನನ್ನು ಕೊಲೆ ಮಾಡಿದ್ದ. ಮದನ ಕೊಲೆಗೆ ಸೇಡು ತೀರಿಸಿಕೊಳ್ಳಲು ಮಹೇಶನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ