AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಕೊಲೆ ಕೇಸ್, 11 ಆರೋಪಿಗಳು ಪೊಲೀಸ್ ವಶಕ್ಕೆ

ಬೆಂಗಳೂರಿನಲ್ಲಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಕೊಲೆ ಕೇಸ್, 11 ಆರೋಪಿಗಳು ಪೊಲೀಸ್ ವಶಕ್ಕೆ
ಬಂಧಿತ ಆರೋಪಿಗಳು
Follow us
Prajwal Kumar NY
| Updated By: ರಮೇಶ್ ಬಿ. ಜವಳಗೇರಾ

Updated on: Aug 07, 2023 | 7:00 AM

ಬೆಂಗಳೂರು, (ಆಗಸ್ಟ್ 07): ಮೊನ್ನೇ ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್(Rowdy Sheeter)​ ಸಿದ್ದಾಪುರ ಮಹೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಮಿಳುನಾಡಿನ ಹೊಸೂರು ಬಳಿ 11 ಆರೋಪಿಗಳನ್ನು ಬೆಂಗಳೂರಿನ (Bengaluru) ಪರಪ್ಪನ ಅಗ್ರಹಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿದ್ದಾಪುರ ಸುನೀಲ್,‌ ಕಣ್ಣನ್ ವೇಲ, ಪ್ರದೀಪ್, ಮನು, ಗ್ರೇಸ್ ವಾಲ್ಟರ್, ಶ್ರೀನಿವಾಸ ಅಲಿಯಾಸ್​​​ ಪಾಪ, ಗೋಕುಲ್, ಸುರೇಶ್​​​​​, ಕಾರ್ತಿಕ್, ವಾಲೆ ಪ್ರವೀಣ ಸೇರಿ 11 ಆರೋಪಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಆದ್ರೆ, ರೌಡಿಶೀಟರ್​ ವಿಲ್ಸನ್​ಗಾರ್ಡನ್​ ನಾಗ ತಲೆಮರೆಸಿಕೊಂಡಿದ್ದಾನೆ.

ಇದನ್ನೂ ಓದಿ: ಮಚ್ಚು ಹಿಡಿದು ಮೆರೆದವನು ಮಚ್ಚಿನಿಂದಲೇ ಅಂತ್ಯ, ತನ್ನ ಭವಿಷ್ಯವನ್ನು ತಾನೇ ನುಡಿದಿದ್ದ ಹತ್ಯೆಯಾದ ರೌಡಿಶೀಟರ್

ಮೊನ್ನೆ (ಆಗಸ್ಟ್ 06) ಜೈಲಿನಿಂದ ಹೊರ ಬಂದ ಕಲವೇ ಗಂಟೆಗಳಲ್ಲಿ ಮಹೇಶ್​ನನ್ನು ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನ ಗ್ಯಾಂಗ್ ಹತ್ಯೆ ಮಾಡಿತ್ತು. ಈ ಸಂಬಂಧ ರೌಡಿಶೀಟರ್​​​ ವಿಲ್ಸನ್​​ಗಾರ್ಡನ್​​​ ನಾಗ, ಡಬಲ್ ಮೀಟರ್​ ಮೋಹನ್​​, ಸುನೀಲ್​ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಇದೀಗ ವಿಲ್ಸನ್ ಗಾರ್ಡನ್ ನಾಗನ ಗ್ಯಾಂಗ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಇನ್ನು ತಲೆಮರೆಸಿಕೊಂಡಿರುವ ಡಬಲ್ ಮೀಟರ್ ಮೋಹನ್ ಹಾಗೂ ವಿಲ್ಸನ್​ ಗಾರ್ಡನ್​ ನಾಗನಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

ಗ್ಯಾಂಗ್​ ವಾರ್​​, ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಹೇಶ್​ನನ್ನು ಕೊಲೆ ಮಾಡಲಾಗಿತ್ತು. ಮುಖ್ಯವಾಗಿ ವಿಲ್ಸನ್​ಗಾರ್ಡನ್​​​ ನಾಗನ ಕೊಲೆಗೆ ಮಹೇಶ್ ಸಂಚು ರೂಪಿಸಿದ್ದ. ಹೀಗಾಗಿ ರೌಡಿಶೀಟರ್​ ಸಿದ್ದಾಪುರ ಮಹೇಶ್ ನಾಗನ ವಿರೋಧಿಗಳನ್ನು ಒಗ್ಗೂಡಿಸಿದ್ದ​ ಎನ್ನಲಾಗಿದೆ. ಸುಮಾರು 30 ರೌಡಿಗಳ ಗ್ಯಾಂಗ್​ ಕಟ್ಟಿಕೊಂಡು ನಾಗನ ಹತ್ಯೆಗೆ ಸಂಚು ರೂಪಿಸಿದ್ದ. ಈ ಸಂಚಿನ ಬಗ್ಗೆ ತಿಳಿದ ನಾಗನ ಗ್ಯಾಂಗ್, ಮಹೇಶ್ ನನ್ನೇ ಹತ್ಯೆ ಮಾಡಿದೆ.

ಈ ಹಿಂದೆ ಶಾಂತಿನಗರ ಲಿಂಗನನ್ನು ನಾಗನ ಗ್ಯಾಂಗ್ ಕೊಲೆ ಮಾಡಿತ್ತು. ಅದಕ್ಕೆ ಪ್ರತೀಕಾರವಾಗಿ ಮಹೇಶ, ನಾಗನ ಗೆಳೆಯ ಮದನ್​ನನ್ನು ಕೊಲೆ ಮಾಡಿದ್ದ. ಮದನ ಕೊಲೆಗೆ ಸೇಡು ತೀರಿಸಿಕೊಳ್ಳಲು ಮಹೇಶನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ