AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರದಲ್ಲಿ ರೌಡಿಶೀಟರ್ ಬರ್ತ್​ಡೇ ಸೆಲೆಬ್ರೇಷನ್: ಸುಪ್ರೀಂ ಚಾಟಿ ಬಳಿಕವೂ ಬುದ್ದಿ ಕಲಿಯದ ಸಿಬ್ಬಂದಿ, ಸಂಸ್ಪೆಡ್ ಸಾಧ್ಯತೆ?

ಇತ್ತೀಚೆಗೆ ಸುಪ್ರೀಂಕೋರ್ಟ್ ಜೈಲು ರಾಜಾತಿಥ್ಯಕ್ಕೆ ದರ್ಶನ್ ಕೇಸ್​​ನಲ್ಲೇ ಖಡಕ್ ವಾರ್ನಿಂಗ್ ನೀಡಿತ್ತು. ಅಷ್ಟಾದರೂ ಪರಪ್ಪನ ಅಗ್ರಹಾರ ಅಧಿಕಾರಿಗಳು ಮತ್ತು ಸಿಬ್ಬಂದಿ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಜೈಲಿನಲ್ಲೇ ರೌಡಿಶೀಟರ್ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಸದ್ಯ ಆಂತರಿಕ ತನಿಖೆಗೆ ಆದೇಶಸಲಾಗಿದ್ದು, ಅಧಿಕಾರಿಗಳಿಗೆ ಢವಢವ ಶುರುವಾಗಿದೆ.

ಪರಪ್ಪನ ಅಗ್ರಹಾರದಲ್ಲಿ ರೌಡಿಶೀಟರ್ ಬರ್ತ್​ಡೇ ಸೆಲೆಬ್ರೇಷನ್: ಸುಪ್ರೀಂ ಚಾಟಿ ಬಳಿಕವೂ ಬುದ್ದಿ ಕಲಿಯದ ಸಿಬ್ಬಂದಿ, ಸಂಸ್ಪೆಡ್ ಸಾಧ್ಯತೆ?
Parappana Agrahara
ಶಿವಪ್ರಸಾದ್​ ಬಿ.
| Edited By: |

Updated on:Oct 05, 2025 | 8:46 PM

Share

ಬೆಂಗಳೂರು, ಅಕ್ಟೋಬರ್​ 05: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಎಲ್ಲವೂ ಖುಲ್ಲಂ ಖುಲ್ಲ ಎನ್ನುವಂತಾಗಿದೆ. ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಇದ್ದ ವೇಳೆ ಸಿಕ್ಕ ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಕಟುವಾಗಿ ಟೀಕಿಸಿದ್ದ ಪ್ರಕರಣದ ಬೆನ್ನಲ್ಲೇ ಇದೀಗ ರೌಡಿಶೀಟರ್ (rowdy sheeter) ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೋ ವೈರಲ್ ಆಗಿದ್ದು, ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ.

ದರ್ಶನ್​​ಗೆ ರಾಜಾತಿಥ್ಯ ಪ್ರಕರಣ ಬೆನ್ನಲ್ಲೇ ಸುಪ್ರೀಂಕೋರ್ಟ್ ಚಾಟಿ ಬೀಸಿದ ಬಳಿಕವೂ ಪರಪ್ಪನ ಅಗ್ರಹಾರ ಸಿಬ್ಬಂದಿ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಏಕೆಂದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆ ಮಾಡಿರುವುದು ಅಧಿಕಾರಿ, ಸಿಬ್ಬಂದಿಗಳಿಗೆ ಸಂಕಷ್ಟ ತಂದೊಡ್ಡಿದೆ.

ಇದನ್ನೂ ಓದಿ: ಜೈಲಿನಲ್ಲೇ ಹಫ್ತಾ ವಸೂಲಿ! ಸಹ ಕೈದಿಗೆ ಹಲ್ಲೆ: ನಾಲ್ವರು ಆರೋಪಿಗಳ ವಿರುದ್ದ ಕೋಕಾ ಕಾಯ್ದೆಯಡಿ ಎಫ್​ಐಆರ್

ಘಟನೆ ಗಂಭೀರವಾಗಿ ಪರಿಗಣಿಸಿರುವ ಜೈಲಿನ‌ ಡಿಜಿಪಿ ಬಿ.ದಯಾನಂದ, ವಿಡಿಯೋ ಹೊರಗಡೆ ಬಂದಿದ್ದೇ ತಡ ಜೈಲಾಧಿಕಾರಿ ಹಾಗೂ‌ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಳೆದ ಒಂದು ವಾರದ ಹಿಂದೆಯೇ ಆಂತರಿಕ ತನಿಖೆಗೆ ಆದೇಶಿಸಿದ್ದಾರೆ. ತನಿಖೆ ನಡೆಸಿ ವರದಿಯನ್ನು ನೀಡುವಂತೆ ಜೈಲರ್​ಗೆ ಸೂಚನೆ ನೀಡಿದ್ದಾರೆ.

ಯಾವೆಲ್ಲಾ ಮಾಹಿತಿಯನ್ನು ನೀಡಲು ದಯಾನಂದ ಹೇಳಿದ್ದಾರೆ ಎಂದು ನೋಡುವುದಾದರೆ, ಜೈಲಿನ ಒಳಗಡೆ ಅಷ್ಟು ದೊಡ್ಡ ಬರ್ತಡೇ ಕೇಕ್ ಹೇಗೆ ಬಂತು? ಜೈಲಿನ ಬೇಕರಿಯಲ್ಲೇ ಕೇಕ್ ತಯಾರು ಮಾಡಲಾಯ್ತಾ ಅಥವಾ ಹೊರಗಿನ ತರಿಸಲಾಗಿದೆಯಾ? ಒಂದು ವೇಳೆ ಜೈಲಿನ ಬೇಕರಿಯಲ್ಲೇ ತಯಾರು ಆಗಿದ್ರೆ ಮಾಡಿದವರು ಯಾರು? ಹೊರಗಡೆಯಿಂದ ಅಷ್ಟು ದೊಡ್ಡ ಕೇಕ್ ತಂದಿದರೆ ಒಳಗಡೆ ಬಿಟ್ಟವರು ಯಾರು? ಇನ್ನು ಬರ್ತಡೇ ವೇಳೆ ಸೆಲ್​​ನಲ್ಲಿ ನೆರೆದಿದ್ದ ಖೈದಿಗಳ ಮಾಹಿತಿ, ಬೇರೆ ಬ್ಯಾರಕ್​ನಿಂದ ಹೇಗೆ ಖೈದಿಗಳು ಆ ಬ್ಯಾರಕ್​​ಗೆ ಬಂದ್ದರು? ಬರ್ತಡೇ ಆಚರಣೆ ದಿನ ಸಂಭ್ರಮಾಚಣೆ ಮಾಡಿದ ಬ್ಯಾರಕ್ ಬಳಿ ಭದ್ರತೆಗೆ ಇದ್ದ ಸಿಬ್ಬಂದಿ ಯಾರು? ಅಂದು ರೌಂಡ್ಸ್​​ನಲ್ಲಿ ಇದ್ದ ಅಧಿಕಾರಿಗಳು ಯಾರು? ಜೊತೆಗೆ ಜೈಲಿನ ಒಳಗಡೆಯಿಂದ ವಿಡಿಯೋ ಅಪ್ ಲೋಡ್ ಆಗಿದೆ. ಹಾಗಿದರೆ ಇಷ್ಟೆಲ್ಲಾ ಭದ್ರತೆ ಇದ್ದರೂ ಹೇಗೆ ಮೊಬೈಲ್ ಖೈದಿಗಳ ಕೈಗೆ ಸಿಕ್ತು? ಹೀಗೆ ಹಲವು ಪ್ರಶ್ನೆಗಳಿಗೆ ಕೂಡಲೇ ದಾಖಲೆ ಸಮೇತ ಉತ್ತರ ನೀಡುವಂತೆ ಸೂಚನೆ ನೀಡಿದ್ದಾರೆ.

ಡಿಜಿಪಿ ಬಿ.ದಯಾನಂದ ಹೇಳಿದ್ದಿಷ್ಟು

ಈ ಕುರಿತಾಗಿ ಡಿಜಿಪಿ ಬಿ.ದಯಾನಂದ ಪ್ರತಿಕ್ರಿಯಿಸಿದ್ದು, ಪರಪ್ಪನ ಅಗ್ರಹಾರ ಜೈಲಿನ ಒಳಗೆ ಘಟನೆ ಬರ್ತ್ ಡೇ ಸೆಲೆಬ್ರೇಷನ್ ವಿಡಿಯೋ ಬಗ್ಗೆ ಮಾಹಿತಿ ಪಡೆಯಲಾಗಿದೆ. ಪ್ರಕರಣದ ಕುರಿತು ಆಂತರಿಕ ತನಿಖೆಗೆ ಆದೇಶಿಸಿದ್ದು, ವರದಿ ಬಳಿಕ ತಪ್ಪಿತಸ್ಥರ ವಿರುದ್ದ ಸೂಕ್ರ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ರಾಜಾತಿಥ್ಯ ಪ್ರಕರಣ: ತನಿಖೆ ವೇಳೆ ಬಯಲಾಯ್ತು ಜೈಲೊಳಗಿನ ಮತ್ತಷ್ಟು ರಹಸ್ಯ, ಶೀಘ್ರದಲ್ಲೇ ಚಾರ್ಜ್​​ಶೀಟ್ ಸಲ್ಲಿಕೆ

ಆಂತರಿಕ ತನಿಖೆ ಬೆನ್ನಲ್ಲೇ ಸುಸ್ತಾದ ಅಧಿಕಾರಿ ಹಾಗೂ ಸಿಬ್ಬಂದಿ, ರೌಡಿಶೀಟರ್ ಬರ್ತ್ ಡೇ ಸೆಲೆಬ್ರೇಷನ್ ಕೇಸ್ ಯಾರಿಗೆಲ್ಲಾ ಸುತ್ತಿಕೊಳ್ಳುತ್ತೆ ಅನ್ನೋ ಆತಂಕ ಎದುರಾಗಿದೆ. ಜೈಲಿನ ಅಧಿಕಾರಿಗಳಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದ್ದು, ತನಿಖಾ ವರದಿ ಬಳಿಕ ತಪ್ಪಿತಸ್ಥ ಅಧಿಕಾರಿ, ಸಿಬ್ಬಂದಿ ಸಸ್ಪೆಂಡ್ ಆಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:45 pm, Sun, 5 October 25

Follow Us
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್