ಪ್ರತಿ ರಾಜ್ಯದ ಯುವಕರಿಗೆ ಕೂಡ ಈ ಮೇಳದಿಂದ ಲಾಭ ದೊರೆಯುತ್ತಿದೆ. ಸ್ವಯಂ ಧೃಡೀಕರಣ ಅವಕಾಶವಿರುವುದರಿಂದ ನೇಮಕಾತಿ ಪ್ರಕ್ರಿಯೆ ಸುಲಭವಾಗಿದ್ದು, ತಂತ್ರಜ್ಞಾನದ ಸಹಾಯದಿಂದ ಈ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಸಿ ಹಾಗೂ ಡಿ ವರ್ಗದ ಉದ್ಯೋಗಕ್ಕೆ ಅರ್ಹವಿರುವ ಅಭ್ಯರ್ಥಿಗಳಿಗೆ ಸಂದರ್ಶನವಿಲ್ಲದೆ, ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಧಾರ್ ಕಾರ್ಡ್ ಸೇರಿದಂತೆ ನೂತನ ತಂತ್ರಜ್ಞಾನಗಳನ್ನು ಅತ್ಯಂತ ಪ್ರಭಾವಶಾಲಿಯಾಗಿ ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರವು ಯಾವುದೇ ಹಂತದಲ್ಲಿಯೂ ಕೂಡ ನುಸುಳದಂತೆ ಕಾಳಜಿ ವಹಿಸಲಾಗಿದೆ ಎಂದು ಹೇಳಿದ ಅವರು, ಜನ್ ಧನ್ ಖಾತೆ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿ ಈಗಾಗಲೇ ಪಾರದರ್ಶಕತೆ ತರಲಾಗಿದೆ ಎಂದರು.
ರೋಜಗಾರ್ ಮೇಳದಿಂದ ಯುವಕರ ಸಶಕ್ತಿಕರಣ ಹಾಗೂ ದೇಶದ ವಿಕಾಸ ಎರಡು ಸಾಧ್ಯವಾಗಲಿದೆ. ಈಗಾಗಲೇ ಸಾವಿರಾರು ಉದ್ಯೋಗಿಗಳಿಗೆ ನೇಮಕಾತಿ ಪತ್ರ ನೀಡಲಾಗಿದ್ದು, ಬರುವ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಯುವಕರಿಗೆ ಸರ್ಕಾರಿ ನೌಕರಿಯ ಅವಕಾಶ ಒದಗಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ದಿಟ್ಟ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಕೇಂದ್ರ ಸಚಿವ ಜೋಶಿಯವರು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ