AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹೊರ ರಾಜ್ಯದ 250ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಸೀಜ್, 5 ಕೋಟಿ ರೂ. ದಂಡ ವಸೂಲಿ

ಸಾರಿಗೆ ಇಲಾಖೆಯ ನಿಯಮಗಳ ಪ್ರಕಾರ ಬೇರೆ ರಾಜ್ಯಗಳಲ್ಲಿ ಕಾರು ಖರೀದಿ ಮಾಡಿ ಇಲ್ಲಿ ಅದನ್ನು ಬಳಕೆ ಮಾಡುವಂತಿಲ್ಲ. ಆದರೆ, ಕೆಲ ಕಿಲಾಡಿ ಕಾರು ಮಾಲೀಕರು ತೆರಿಗೆ ಉಳಿಸಲು ಬೇರೆ ರಾಜ್ಯದಲ್ಲಿ ಕಾರು ಖರೀದಿ ಮಾಡಿ, ಬೆಂಗಳೂರಿನಲ್ಲಿ ಐಷಾರಾಮಿ ‌ಕಾರುಗಳಲ್ಲಿ ಪೋಸ್ ಕೊಡುತ್ತಿದ್ದರು. ಅಂತಹವರಿಗೆ ಸಾರಿಗೆ ಇಲಾಖೆ ಸರಿಯಾಗಿ ಬಿಸಿ ಮುಟ್ಟಿಸಿದೆ.

ಬೆಂಗಳೂರು: ಹೊರ ರಾಜ್ಯದ 250ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಸೀಜ್, 5 ಕೋಟಿ ರೂ. ದಂಡ ವಸೂಲಿ
ಬೆಂಗಳೂರು: ಹೊರ ರಾಜ್ಯದ 250ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಸೀಜ್, 5 ಕೋಟಿ ರೂ. ದಂಡ ವಸೂಲಿ
ಕಿರಣ್​ ಸೂರ್ಯ
| Edited By: |

Updated on:Mar 20, 2025 | 10:02 AM

Share

ಬೆಂಗಳೂರು, ಮಾರ್ಚ್ 20: ಬೇರೆಬೇರೆ ರಾಜ್ಯಗಳಲ್ಲಿ ತೆರಿಗೆ ಕಡಿಮೆ ಎಂದು ಬೆಂಗಳೂರಿನ (Bengaluru) ಶ್ರೀಮಂತರು, ಕೋಟಿ ಕುಳಗಳು ಪಾಂಡಿಚೇರಿ, ಮಹಾರಾಷ್ಟ್ರ, ಬಿಹಾರ, ದೆಹಲಿ ಸೇರಿದಂತೆ ಸಾಕಷ್ಟು ರಾಜ್ಯಗಳಲ್ಲಿ ಕೋಟಿ ಕೋಟಿ ರೂ. ಬೆಲೆಬಾಳುವ ಐಷಾರಾಮಿ ಕಾರುಗಳನ್ನು ಖರೀದಿ ಮಾಡಿ ಇಲ್ಲಿ ತರುತ್ತಿದ್ದರು. ಬೇರೆ ರಾಜ್ಯಗಳಲ್ಲಿ ಐಷಾರಾಮಿ ಕಾರುಗಳನ್ನು (Luxury cars) ಖರೀದಿಸಿ ಇಲ್ಲಿ ತಂದು ಬೆಂಗಳೂರಿನಲ್ಲಿ ಸಂಚಾರ ಮಾಡುತ್ತಿದ್ದ ಕೋಟಿ ಕುಳಗಳಿಗೆ ರಾಜ್ಯ ಸಾರಿಗೆ ಇಲಾಖೆಯ ಅಧಿಕಾರಿಗಳು ಬುಧವಾರ ಸರಿಯಾಗಿ ಬಿಸಿ ಮುಟ್ಟಿಸಿದ್ದಾರೆ. ಹತ್ತು ತಂಡಗಳಲ್ಲಿ ಕಾರ್ಯಾಚರಣೆ ಮಾಡಿದ ಸಾರಿಗೆ ಇಲಾಖೆಯ ಅಧಿಕಾರಿಗಳು 250 ಕ್ಕೂ ಹೆಚ್ಚು ಕಾರುಗಳನ್ನು ಸೀಜ್ ಮಾಡಿ 400 ಕೇಸ್ ದಾಖಲಿಸಿದ್ದಾರೆ. ಸುಮಾರು 5 ಕೋಟಿ ರೂ. ದಂಡ ವಸೂಲಿ ಮಾಡಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯಗಳ ಕಾರುಗಳ ಸಂಖ್ಯೆ ಹೆಚ್ಚಾಗಿದೆ ಎಂದು ‘ಟಿವಿ9’ ಸುದ್ದಿ ಪ್ರಸಾರ ಮಾಡಿತ್ತು. ಈ ಹಿನ್ನೆಲೆ ಸಾರಿಗೆ ಇಲಾಖೆಯ ಆಯುಕ್ತರು ತೆರಿಗೆ ಕಟ್ಟದೆ ಬೇರೆ ರಾಜ್ಯಗಳಿಂದ ತಂದ ಕಾರುಗಳನ್ನು ಸೀಜ್ ಮಾಡಲು ಸೂಚನೆ ನೀಡಿದ್ದರು. ಹೀಗಾಗಿ ಬೆಂಗಳೂರಿನ ಹತ್ತು ಕಡೆಗಳಲ್ಲಿ ಆರ್​ಟಿಒ ಅಧಿಕಾರಿಗಳು ತಪಾಸಣೆ ನಡೆಸಿ, ಕಾರುಗಳನ್ನು ಸೀಜ್ ಮಾಡಿದ್ದಾರೆ.

ಈ ಕಾರ್ಯಾಚರಣೆಗಾಗಿ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಹ್ಯಾಟ್ಸ್ ಆಫ್ ಹೇಳಲೇಬೇಕು. ಹೊರ ರಾಜ್ಯಗಳಿಂದ ತಂದು ಇಲ್ಲಿ ಕಾರ್ಯಾಚರಿಸುವುದರಿಂದ ನಮ್ಮ ರಾಜ್ಯದ ಕಾರು ಮಾಲೀಕರಿಗೆ ತುಂಬಾ ಸಮಸ್ಯೆ ಆಗುತ್ತಿತ್ತು. ನಿರಂತರವಾಗಿ ಕಾರ್ಯಾಚರಣೆ ಮಾಡಿದರೆ ತೆರಿಗೆ ಪಾವತಿಸದ ಎಲ್ಲಾ ವಾಹನಗಳನ್ನು ಪತ್ತೆ ಹಚ್ಚಬಹುದು ಎಂದು ಈ ವೇಳೆ ಮಾತನಾಡಿದ ರಾಷ್ಟ್ರೀಯ ಚಾಲಕರ ಒಕ್ಕೂಟದ ಅಧ್ಯಕ್ಷ ಸದಾನಂದಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರು: ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರ ಬಂಧನ
Image
ಬೆಳಗಾವಿ: ಯುವಕನಿಂದ ದೇವಾಲಯದ ಮೇಲೆ ಕಲ್ಲು ತೂರಾಟ, ಪಾಂಗುಳ ಗಲ್ಲಿ ಉದ್ವಿಗ್ನ
Image
ಕರ್ನಾಟಕದಲ್ಲೊಂದು ಹಿರೋಶಿಮಾ-ನಾಗಸಾಕಿ ಪ್ರದೇಶ:ಹುಟ್ಟುವ ಮಕ್ಕಳು ಅಂಗವಿಕಲರು
Image
ಇಬ್ಬರು ಹೆಂಡರ ನೀಚ ಗಂಡ: ಬಾಬುನ ಕ್ರೌರ್ಯಕ್ಕೆ ನರಳಿ ನರಳಿ ಪ್ರಾಣಬಿಟ್ಟಳು!

ಇದನ್ನೂ ಓದಿ: ಬೆಂಗಳೂರು: ಬಿಇಎಲ್​ನಿಂದ​​​ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರ ಬಂಧನ

ಒಟ್ಟಿನಲ್ಲಿ ರಾಜ್ಯದ ಬೊಕ್ಕಸಕ್ಕೆ ನೂರಾರು ಕೋಟಿ ರೂಪಾಯಿ ವಂಚಿಸುತ್ತಿದ್ದ ಕಿಲಾಡಿ ಕಾರು ಮಾಲೀಕರಿಗೆ ಕೋಟಿ ಕೋಟಿ ರೂ. ದಂಡ ವಿಧಿಸುವ ಮೂಲಕ ಆರ್​ಟಿಒ ಅಧಿಕಾರಿಗಳು ಸರಿಯಾಗಿ ಬಿಸಿ ಮುಟ್ಟಿಸಿರುವುದಂತತೂ ಸುಳ್ಳಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:57 am, Thu, 20 March 25

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ