AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಎಂ ಕೃಷ್ಣ ಭೇಟಿಯಾದ ಡಿಕೆ ಸುರೇಶ್; ಕುತೂಹಲ ಮೂಡಿಸಿದ ಬಿಜೆಪಿ-ಕಾಂಗ್ರೆಸ್ ನಾಯಕರ ಭೇಟಿ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿಕೆ ಸುರೇಶ್ ಅವರು ಸಹೋದರ ಡಿಕೆ ಶಿವಕುಮಾರ್ ಸೇರಿದಂತೆ ಹಿರಿಯರ ಆಶೀರ್ವಾದ ಪಡೆದು ರೋಡ್​ ಶೋ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ಬಿಜೆಪಿಯ ಹಿರಿಯ ನಾಯಕ ಎಸ್​ಎಂ ಕೃಷ್ಣ ಅವರನ್ನು ಡಿಕೆ ಸುರೇಶ್ ಭೇಟಿಯಾಗಿದ್ದಾರೆ.

ಎಸ್​ಎಂ ಕೃಷ್ಣ ಭೇಟಿಯಾದ ಡಿಕೆ ಸುರೇಶ್; ಕುತೂಹಲ ಮೂಡಿಸಿದ ಬಿಜೆಪಿ-ಕಾಂಗ್ರೆಸ್ ನಾಯಕರ ಭೇಟಿ
ಬಿಜೆಪಿ ನಾಯಕ ಎಸ್ ಎಂ ಕೃಷ್ಣ ಅವರನ್ನು ಭೇಟಿಯಾದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್
ಪ್ರಸನ್ನ ಗಾಂವ್ಕರ್​
| Edited By: Rakesh Nayak Manchi|

Updated on: Mar 29, 2024 | 2:35 PM

Share

ಬೆಂಗಳೂರು, ಮಾ.29: ಗ್ರಾಮಾಂತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿಕೆ ಸುರೇಶ್ (D.K. Suresh) ಅವರು ಸಹೋದರ ಡಿಕೆ ಶಿವಕುಮಾರ್ ಸೇರಿದಂತೆ ಹಿರಿಯರ ಆಶೀರ್ವಾದ ಪಡೆದು ರೋಡ್​ ಶೋ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ಬಿಜೆಪಿಯ ಹಿರಿಯ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ (S.M. Krishna) ಅವರನ್ನು ಡಿಕೆ ಸುರೇಶ್ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಕೃಷ್ಣ ಅವರೊಂದಿಗೆ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ಭೇಟಿ ಬಗ್ಗೆ ಎಕ್ಸ್ ಪೋಸ್ಟ್ ಮಾಡಿದ ಡಿಕೆ ಸುರೇಶ್, ಇಂದು ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿಗಳಾದ ಎಸ್‌.ಎಂ.ಕೃಷ್ಣ ದಂಪತಿಗಳ ಆಶೀರ್ವಾದ ಪಡೆದೆ. ಈ ವೇಳೆ ಅವರ ಸುದೀರ್ಘವಾದ ರಾಜಕೀಯ ಅನುಭವ ಮತ್ತು ಹಂಚಿಕೊಂಡ ಸಲಹೆಗಳು ಮತ್ತಷ್ಟು ನನಗೆ ಸ್ಫೂರ್ತಿಯನ್ನು ನೀಡಿವೆ ಎಂದಿದ್ದಾರೆ.

ಇದನ್ನೂ ಓದಿ: ನಾಮಪತ್ರ ಸಲ್ಲಿಸಿದ ಡಿಕೆ ಸುರೇಶ್‌ 593.04 ಕೋಟಿ ರೂ. ಒಡೆಯ, ಆದ್ರೂ ಒಂದು ಸ್ವಂತ ಕಾರು ಇಲ್ಲ!

ಬೆಂಗಳೂರು ಗ್ರಾಮಾಂತರ ಲೋಕಸಭಾ ರಣಕಣ ರಂಗೇರಿದೆ. ಕ್ಷೇತ್ರದ ಹಾಲಿ ಸಂಸದ ಡಿಕೆ ಸುರೇಶ್ ಅವರು ಮತ್ತೊಮ್ಮೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದು, ನಿನ್ನೆ (ಮಾರ್ಚ್ 28) ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮೀನಶನ್​ಗೂ ಮುನ್ನಾ ಟೆಂಪಲ್ ರನ್​ ಮಾಡಿದ್ದ ಅವರು, ಮನೆದೇವತೆ ಕೆಂಕೇರಮ್ಮ, ಕಬ್ಬಾಳಮ್ಮ‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

ಡಿಕೆ ಸುರೇಶ್ ಎಕ್ಸ್ ಪೋಸ್ಟ್

ಬಳಿಕ ಉಪಮುಖ್ಯಮಂತ್ರಿಯೂ ಆಗಿರುವ ಸಹೋದರ ಡಿಕೆ ಶಿವಕುಮಾರ್ ಸೇರಿದಂತೆ ಕುಟುಂಬದ ಹಿರಿಯರ ಆಶೀರ್ವಾದ ಪಡೆದ ಡಿಕೆ ಸುರೇಶ್, ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಬೃಹತ್ ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡಿದರು.

ಇದನ್ನೂ ಓದಿ: ಬಿಜೆಪಿಗೆ ಆಘಾತ: ಬೆಂಗಳೂರು ಗ್ರಾಮಾಂತರದಲ್ಲಿ ಮಂಜುನಾಥ್​ ಹೆಸರಿನ ಮತ್ತೋರ್ವ ವ್ಯಕ್ತಿ ಸ್ಪರ್ಧೆ

ಇನ್ನೊಂದೆಡೆ, ಡಿಕೆ ಸುರೇಶ್ ಅವರ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಕಣದಲ್ಲಿದ್ದಾರೆ. ವೈದ್ಯಕೀಯ ವೃತ್ತಿಯಲ್ಲಿ ಮಾಡಿದ ಸಮಾಜ ಸೇವೆಯೇ ಮಂಜುನಾಥ್ ಅವರಿಗೆ ಶ್ರೀರಕ್ಷೆಯಾಗಿದೆ. ಹೀಗಾಗಿ ಈ ಬಾರಿ ಬೆಂಗಳೂರು ಗ್ರಾಮಾಂತರವು ಹೈವೋಲ್ಟೇಜ್​ ಲೋಕಸಭಾ ಕ್ಷೇತ್ರವಾಗಿ ಹೊರಹೊಮ್ಮಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ