AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಶಾಲೆಗಳಿಗೆ ಬಾಂಬ್​ ಬೆದರಿಕೆ: ನಕಲಿ ​ಐಡಿ ಬಳಸಿ ಇ-ಮೇಲ್ ಸಂದೇಶ ರವಾನೆ, ತನಿಖೆಗೆ ವಿಶೇಷ ತಂಡ ರಚನೆ

ಶುಕ್ರವಾರ ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್​ ಸಂದೇಶ ಬಂದಿತ್ತು. ಈ ಬಾಂಬ್​ ಬೆದರಿಕೆ ಸಂದೇಶದಲ್ಲಿ ಉಗ್ರವಾದ ಪದ ಬಳಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ ದಯಾನಂದ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ.

ಬೆಂಗಳೂರಿನ ಶಾಲೆಗಳಿಗೆ ಬಾಂಬ್​ ಬೆದರಿಕೆ: ನಕಲಿ ​ಐಡಿ ಬಳಸಿ ಇ-ಮೇಲ್ ಸಂದೇಶ ರವಾನೆ, ತನಿಖೆಗೆ ವಿಶೇಷ ತಂಡ ರಚನೆ
ಬೆಂಗಳೂರು ಪೊಲೀಸ್​
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on:Dec 02, 2023 | 12:44 PM

Share

ಬೆಂಗಳೂರು ಡಿ.02: ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ (School) ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ (Bomb Threat) ಕರೆ ಪ್ರಕರಣ ಬೆಂಗಳೂರು ನಗರ ಪೊಲೀಸ್ (Police) ಆಯುಕ್ತ ಬಿ.ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಬಳಸಲಾದ ಇ-ಮೇಲ್​ ಐಡಿ ನಕಲು ಎಂಬುದು ಪತ್ತೆಯಾಗಿದೆ. ಕೃತ್ಯ ಎಸಗಲೆಂದೆ ಆರೋಪಿಗಳು ನಕಲಿ ಐಡಿ ಸೃಷ್ಟಿಸಿದ್ದಾರೆ.

ದುಷ್ಕರ್ಮಿ ವರ್ಚ್ಯುಯಲ್ ಪ್ರವೇಟ್ ನೆಟ್ವರ್ಕ್ (ವಿಪಿಎನ್) ಬಳಸಿ ಇ-ಮೇಲ್ ಸಂದೇಶಗಳನ್ನು ಕಳುಹಿಸಿದ್ದಾರೆ. ಹೀಗಾಗಿ ಪೊಲೀಸರು ದುಷ್ಕರ್ಮಿಗಳು ಬಳಸಿದ ಕಂಪ್ಯೂಟರ್, ಸೈಬರ್ ಕೆಫೆ ಅಥವಾ ಲ್ಯಾಪ್ ಟಾಪ್ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕಿಡಿಗೇಡಿ ದೂರದ ದೇಶದ ನೆಟ್ವರ್ಕ್ ಬಳಸಿ ಕೃತ್ಯ ಎಸಗಿದ್ದಾನೆ.

ಇದನ್ನೂ ಓದಿ: ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: 48 ಎಫ್ಐಆರ್ ದಾಖಲು

ಪೊಲೀಸ್ ಮೂಲಗಳ ಪ್ರಕಾರ ಕಿಡಿಗೇಡಿ ವಿದೇಶದ ಖಾಸಗಿ ಕಂಪನಿಯ ವಿಪಿಎನ್ ಬಳಸಿ ಇ-ಮೇಲ್​ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಂಪನಿಯ ಯಾವ ಸರ್ವರ್ ಬಳಸಲಾಗಿದೆ ? ಬಳಸಿದ ಐಡಿ, ಐಪಿ ಯಾವುದು ? ಈ ಬಗ್ಗೆ ಮಾಹಿತಿ ನೀಡುವಂತೆ ವಿದೇಶದ Cyrtus ಎಂಬ ಕಂಪನಿಗೆ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಪ್ರಕರಣ ಬೇಧಿಸಲು ಸಿದ್ಧವಾದ ಪೊಲೀಸರಿಗೆ ವಿದೇಶಿ ಒಪ್ಪಂದದ ಆತಂಕ ಶುರುವಾಗಿದೆ. ಕೃತ್ಯ ಎಸಗಲು ಬಳಸಿದ ವಿದೇಶಿ ಸರ್ವರ್​ನಿಂದ ಮಾಹಿತಿ ಪಡೆಯುವ ಸವಾಲು ಪೊಲೀಸರ ಮುಂದೆ ಇದೆ. ಈ ರೀತಿ ಮಾಹಿತಿ ಹಂಚಿಕೊಳ್ಳವ ಒಪ್ಪಂದ ಕೆಲವೇ ದೇಶಗಳ ಜೊತೆ ಇದೆ. ಸದ್ಯ 39 ದೇಶಗಳ ಜೊತೆ ಒಪ್ಪಂದವಿದ್ದು, ಮೂರು ದೇಶಗಳ ಜೊತೆ ಸಹಿ ಪ್ರಕ್ರಿಯೆ ಬಾಕಿ ಇದೆ.

ಹೀಗಾಗಿ ನುರಿತ ಸೈಬರ್ ಪೊಲೀಸ್ ಅಧಿಕಾರಿಗಳು ಹಾಗೂ ಸೈಬರ್ ತಜ್ಞರು, ಈ ಹಿಂದೆ ಬಂದಿದ್ದ ಹುಸಿ ಬಾಂಬ್ ಇ-ಮೇಲ್​ಗಳನ್ನೂ ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ಪದೇ ಪದೇ ನಡೆಯುತ್ತಿರುವ ಈ ಕೃತ್ಯದ ಹಿಂದಿರುವ ದುಷ್ಕರ್ಮಿಗಳ್ಯಾರು ? ಕೃತ್ಯದ ಹಿಂದಿನ ಅಸಲಿ ಕಾರಣವೇನು ? ಶಾಲೆಗಳನ್ನೇ ಟಾರ್ಗೆಟ್ ಮಾಡಿ ಇ-ಮೇಲ್ ಕಳುಹಿಸುತ್ತಿರುವ ಹಿಂದಿನ ಉದ್ದೇಶವೇನು ? ಈ ಕೃತ್ಯಕ್ಕೆ ಇ-ಮೇಲ್ ಬಳಸುತ್ತಿರುವ ಆ ದುಷ್ಕರ್ಮಿ ಯಾರು ಎಂದು ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:19 am, Sat, 2 December 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!