AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಶಾಲೆಗಳಿಗೆ ಬಾಂಬ್​ ಬೆದರಿಕೆ: ನಕಲಿ ​ಐಡಿ ಬಳಸಿ ಇ-ಮೇಲ್ ಸಂದೇಶ ರವಾನೆ, ತನಿಖೆಗೆ ವಿಶೇಷ ತಂಡ ರಚನೆ

ಶುಕ್ರವಾರ ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್​ ಸಂದೇಶ ಬಂದಿತ್ತು. ಈ ಬಾಂಬ್​ ಬೆದರಿಕೆ ಸಂದೇಶದಲ್ಲಿ ಉಗ್ರವಾದ ಪದ ಬಳಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ ದಯಾನಂದ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ.

ಬೆಂಗಳೂರಿನ ಶಾಲೆಗಳಿಗೆ ಬಾಂಬ್​ ಬೆದರಿಕೆ: ನಕಲಿ ​ಐಡಿ ಬಳಸಿ ಇ-ಮೇಲ್ ಸಂದೇಶ ರವಾನೆ, ತನಿಖೆಗೆ ವಿಶೇಷ ತಂಡ ರಚನೆ
ಬೆಂಗಳೂರು ಪೊಲೀಸ್​
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on:Dec 02, 2023 | 12:44 PM

Share

ಬೆಂಗಳೂರು ಡಿ.02: ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ (School) ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ (Bomb Threat) ಕರೆ ಪ್ರಕರಣ ಬೆಂಗಳೂರು ನಗರ ಪೊಲೀಸ್ (Police) ಆಯುಕ್ತ ಬಿ.ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಬಳಸಲಾದ ಇ-ಮೇಲ್​ ಐಡಿ ನಕಲು ಎಂಬುದು ಪತ್ತೆಯಾಗಿದೆ. ಕೃತ್ಯ ಎಸಗಲೆಂದೆ ಆರೋಪಿಗಳು ನಕಲಿ ಐಡಿ ಸೃಷ್ಟಿಸಿದ್ದಾರೆ.

ದುಷ್ಕರ್ಮಿ ವರ್ಚ್ಯುಯಲ್ ಪ್ರವೇಟ್ ನೆಟ್ವರ್ಕ್ (ವಿಪಿಎನ್) ಬಳಸಿ ಇ-ಮೇಲ್ ಸಂದೇಶಗಳನ್ನು ಕಳುಹಿಸಿದ್ದಾರೆ. ಹೀಗಾಗಿ ಪೊಲೀಸರು ದುಷ್ಕರ್ಮಿಗಳು ಬಳಸಿದ ಕಂಪ್ಯೂಟರ್, ಸೈಬರ್ ಕೆಫೆ ಅಥವಾ ಲ್ಯಾಪ್ ಟಾಪ್ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕಿಡಿಗೇಡಿ ದೂರದ ದೇಶದ ನೆಟ್ವರ್ಕ್ ಬಳಸಿ ಕೃತ್ಯ ಎಸಗಿದ್ದಾನೆ.

ಇದನ್ನೂ ಓದಿ: ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: 48 ಎಫ್ಐಆರ್ ದಾಖಲು

ಪೊಲೀಸ್ ಮೂಲಗಳ ಪ್ರಕಾರ ಕಿಡಿಗೇಡಿ ವಿದೇಶದ ಖಾಸಗಿ ಕಂಪನಿಯ ವಿಪಿಎನ್ ಬಳಸಿ ಇ-ಮೇಲ್​ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಂಪನಿಯ ಯಾವ ಸರ್ವರ್ ಬಳಸಲಾಗಿದೆ ? ಬಳಸಿದ ಐಡಿ, ಐಪಿ ಯಾವುದು ? ಈ ಬಗ್ಗೆ ಮಾಹಿತಿ ನೀಡುವಂತೆ ವಿದೇಶದ Cyrtus ಎಂಬ ಕಂಪನಿಗೆ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಪ್ರಕರಣ ಬೇಧಿಸಲು ಸಿದ್ಧವಾದ ಪೊಲೀಸರಿಗೆ ವಿದೇಶಿ ಒಪ್ಪಂದದ ಆತಂಕ ಶುರುವಾಗಿದೆ. ಕೃತ್ಯ ಎಸಗಲು ಬಳಸಿದ ವಿದೇಶಿ ಸರ್ವರ್​ನಿಂದ ಮಾಹಿತಿ ಪಡೆಯುವ ಸವಾಲು ಪೊಲೀಸರ ಮುಂದೆ ಇದೆ. ಈ ರೀತಿ ಮಾಹಿತಿ ಹಂಚಿಕೊಳ್ಳವ ಒಪ್ಪಂದ ಕೆಲವೇ ದೇಶಗಳ ಜೊತೆ ಇದೆ. ಸದ್ಯ 39 ದೇಶಗಳ ಜೊತೆ ಒಪ್ಪಂದವಿದ್ದು, ಮೂರು ದೇಶಗಳ ಜೊತೆ ಸಹಿ ಪ್ರಕ್ರಿಯೆ ಬಾಕಿ ಇದೆ.

ಹೀಗಾಗಿ ನುರಿತ ಸೈಬರ್ ಪೊಲೀಸ್ ಅಧಿಕಾರಿಗಳು ಹಾಗೂ ಸೈಬರ್ ತಜ್ಞರು, ಈ ಹಿಂದೆ ಬಂದಿದ್ದ ಹುಸಿ ಬಾಂಬ್ ಇ-ಮೇಲ್​ಗಳನ್ನೂ ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ಪದೇ ಪದೇ ನಡೆಯುತ್ತಿರುವ ಈ ಕೃತ್ಯದ ಹಿಂದಿರುವ ದುಷ್ಕರ್ಮಿಗಳ್ಯಾರು ? ಕೃತ್ಯದ ಹಿಂದಿನ ಅಸಲಿ ಕಾರಣವೇನು ? ಶಾಲೆಗಳನ್ನೇ ಟಾರ್ಗೆಟ್ ಮಾಡಿ ಇ-ಮೇಲ್ ಕಳುಹಿಸುತ್ತಿರುವ ಹಿಂದಿನ ಉದ್ದೇಶವೇನು ? ಈ ಕೃತ್ಯಕ್ಕೆ ಇ-ಮೇಲ್ ಬಳಸುತ್ತಿರುವ ಆ ದುಷ್ಕರ್ಮಿ ಯಾರು ಎಂದು ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:19 am, Sat, 2 December 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ