AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಶಾಲೆಗಳಿಗೆ ಬಾಂಬ್​ ಬೆದರಿಕೆ: ನಕಲಿ ​ಐಡಿ ಬಳಸಿ ಇ-ಮೇಲ್ ಸಂದೇಶ ರವಾನೆ, ತನಿಖೆಗೆ ವಿಶೇಷ ತಂಡ ರಚನೆ

ಶುಕ್ರವಾರ ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್​ ಸಂದೇಶ ಬಂದಿತ್ತು. ಈ ಬಾಂಬ್​ ಬೆದರಿಕೆ ಸಂದೇಶದಲ್ಲಿ ಉಗ್ರವಾದ ಪದ ಬಳಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ ದಯಾನಂದ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ.

ಬೆಂಗಳೂರಿನ ಶಾಲೆಗಳಿಗೆ ಬಾಂಬ್​ ಬೆದರಿಕೆ: ನಕಲಿ ​ಐಡಿ ಬಳಸಿ ಇ-ಮೇಲ್ ಸಂದೇಶ ರವಾನೆ, ತನಿಖೆಗೆ ವಿಶೇಷ ತಂಡ ರಚನೆ
ಬೆಂಗಳೂರು ಪೊಲೀಸ್​
Jagadisha B
| Edited By: |

Updated on:Dec 02, 2023 | 12:44 PM

Share

ಬೆಂಗಳೂರು ಡಿ.02: ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ (School) ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ (Bomb Threat) ಕರೆ ಪ್ರಕರಣ ಬೆಂಗಳೂರು ನಗರ ಪೊಲೀಸ್ (Police) ಆಯುಕ್ತ ಬಿ.ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಬಳಸಲಾದ ಇ-ಮೇಲ್​ ಐಡಿ ನಕಲು ಎಂಬುದು ಪತ್ತೆಯಾಗಿದೆ. ಕೃತ್ಯ ಎಸಗಲೆಂದೆ ಆರೋಪಿಗಳು ನಕಲಿ ಐಡಿ ಸೃಷ್ಟಿಸಿದ್ದಾರೆ.

ದುಷ್ಕರ್ಮಿ ವರ್ಚ್ಯುಯಲ್ ಪ್ರವೇಟ್ ನೆಟ್ವರ್ಕ್ (ವಿಪಿಎನ್) ಬಳಸಿ ಇ-ಮೇಲ್ ಸಂದೇಶಗಳನ್ನು ಕಳುಹಿಸಿದ್ದಾರೆ. ಹೀಗಾಗಿ ಪೊಲೀಸರು ದುಷ್ಕರ್ಮಿಗಳು ಬಳಸಿದ ಕಂಪ್ಯೂಟರ್, ಸೈಬರ್ ಕೆಫೆ ಅಥವಾ ಲ್ಯಾಪ್ ಟಾಪ್ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕಿಡಿಗೇಡಿ ದೂರದ ದೇಶದ ನೆಟ್ವರ್ಕ್ ಬಳಸಿ ಕೃತ್ಯ ಎಸಗಿದ್ದಾನೆ.

ಇದನ್ನೂ ಓದಿ: ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: 48 ಎಫ್ಐಆರ್ ದಾಖಲು

ಪೊಲೀಸ್ ಮೂಲಗಳ ಪ್ರಕಾರ ಕಿಡಿಗೇಡಿ ವಿದೇಶದ ಖಾಸಗಿ ಕಂಪನಿಯ ವಿಪಿಎನ್ ಬಳಸಿ ಇ-ಮೇಲ್​ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಂಪನಿಯ ಯಾವ ಸರ್ವರ್ ಬಳಸಲಾಗಿದೆ ? ಬಳಸಿದ ಐಡಿ, ಐಪಿ ಯಾವುದು ? ಈ ಬಗ್ಗೆ ಮಾಹಿತಿ ನೀಡುವಂತೆ ವಿದೇಶದ Cyrtus ಎಂಬ ಕಂಪನಿಗೆ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಪ್ರಕರಣ ಬೇಧಿಸಲು ಸಿದ್ಧವಾದ ಪೊಲೀಸರಿಗೆ ವಿದೇಶಿ ಒಪ್ಪಂದದ ಆತಂಕ ಶುರುವಾಗಿದೆ. ಕೃತ್ಯ ಎಸಗಲು ಬಳಸಿದ ವಿದೇಶಿ ಸರ್ವರ್​ನಿಂದ ಮಾಹಿತಿ ಪಡೆಯುವ ಸವಾಲು ಪೊಲೀಸರ ಮುಂದೆ ಇದೆ. ಈ ರೀತಿ ಮಾಹಿತಿ ಹಂಚಿಕೊಳ್ಳವ ಒಪ್ಪಂದ ಕೆಲವೇ ದೇಶಗಳ ಜೊತೆ ಇದೆ. ಸದ್ಯ 39 ದೇಶಗಳ ಜೊತೆ ಒಪ್ಪಂದವಿದ್ದು, ಮೂರು ದೇಶಗಳ ಜೊತೆ ಸಹಿ ಪ್ರಕ್ರಿಯೆ ಬಾಕಿ ಇದೆ.

ಹೀಗಾಗಿ ನುರಿತ ಸೈಬರ್ ಪೊಲೀಸ್ ಅಧಿಕಾರಿಗಳು ಹಾಗೂ ಸೈಬರ್ ತಜ್ಞರು, ಈ ಹಿಂದೆ ಬಂದಿದ್ದ ಹುಸಿ ಬಾಂಬ್ ಇ-ಮೇಲ್​ಗಳನ್ನೂ ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ಪದೇ ಪದೇ ನಡೆಯುತ್ತಿರುವ ಈ ಕೃತ್ಯದ ಹಿಂದಿರುವ ದುಷ್ಕರ್ಮಿಗಳ್ಯಾರು ? ಕೃತ್ಯದ ಹಿಂದಿನ ಅಸಲಿ ಕಾರಣವೇನು ? ಶಾಲೆಗಳನ್ನೇ ಟಾರ್ಗೆಟ್ ಮಾಡಿ ಇ-ಮೇಲ್ ಕಳುಹಿಸುತ್ತಿರುವ ಹಿಂದಿನ ಉದ್ದೇಶವೇನು ? ಈ ಕೃತ್ಯಕ್ಕೆ ಇ-ಮೇಲ್ ಬಳಸುತ್ತಿರುವ ಆ ದುಷ್ಕರ್ಮಿ ಯಾರು ಎಂದು ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:19 am, Sat, 2 December 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್