ಬೆಂಗಳೂರಿನಲ್ಲಿ ಶಾಲಾ ಬಸ್​ ಹರಿದು ಮಕ್ಕಳಿಬ್ಬರು ಸಾವು: ಹಾಲು ತರಲು ಹೊರಟ್ಟಿದ್ದವರು ದುರಂತ ಅಂತ್ಯ

ಬೆಂಗಳೂರಿನ ಥಣಿಸಂದ್ರ ಬಳಿ ನಡೆದ ಭೀಕರ ಶಾಲಾ ಬಸ್ ಅಪಘಾತದಲ್ಲಿ ಇಬ್ಬರು ಮಕ್ಕಳು ದುರ್ಮರಣಕ್ಕೀಡಾಗಿದ್ದಾರೆ. ಪೊಲೀಸ್ ಕಾನ್ಸ್‌ಟೇಬಲ್ ತಮ್ಮ ಬೈಕ್‌ನಲ್ಲಿ ಹಾಲು ತರಲು ತೆರಳುವಾಗ ಶಾಲಾ ಬಸ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಸದ್ಯ ಹೆಣ್ಣೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಬೆಂಗಳೂರಿನಲ್ಲಿ ಶಾಲಾ ಬಸ್​ ಹರಿದು ಮಕ್ಕಳಿಬ್ಬರು ಸಾವು: ಹಾಲು ತರಲು ಹೊರಟ್ಟಿದ್ದವರು ದುರಂತ ಅಂತ್ಯ
ಶಾಲಾ ಬಸ್​ ಡಿಕ್ಕಿ
Image Credit source: tv9 kannada
Edited By:

Updated on: Feb 11, 2026 | 3:26 PM

ಬೆಂಗಳೂರು, ಫೆಬ್ರವರಿ 11: ಶಾಲಾ ಬಸ್​ ಹರಿದು (School Bus Accident) ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಗರದ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್​​ ಬಳಿ ನಡೆದಿದೆ. ವರ್ಷಾ(2) ಹಾಗೂ ಭಾನು(4) ಮೃತ ಮಕ್ಕಳು. ಖಾಸಗಿ ಶಾಲೆಗೆ ಸೇರಿದ ಬಸ್ ಬೈಕ್​​ಗೆ​ ಡಿಕ್ಕಿ ಹೊಡೆದು ಮಕ್ಕಳು ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಡಿಸಿಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೆಣ್ಣೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಯಾದಗಿರಿ ಮೂಲದ ನಾಗನಗೌಡ ಅವರು ಸಿಎಆರ್​ನಲ್ಲಿ ಕಾನ್ಸ್​ಟೇಬಲ್​​ ಆಗಿದ್ದಾರೆ. ತಮ್ಮ ಮಗಳು ವರ್ಷ ಮತ್ತು ಅಣ್ಣನ ಮಗಳಾದ ಭಾನು ಅನ್ನು ಬೈಕ್​ನಲ್ಲಿ ಕೂರಿಸಿಕೊಂಡು ಹಾಲು ತರಲು ಹೋಗುತ್ತಿದ್ದರು. ಇದೇ ವೇಳೆ ಸ್ಕೂಲ್ ಟೈಮ್​​ ಆಗಿದ್ದರಿಂದ ಬಸ್ ಮಕ್ಕಳ ಪಿಕಪ್​ಗೆ ತೆರಳುತ್ತಿತ್ತು. ಬಸ್​ ಬರುವುದನ್ನು ಕಂಡು ನಾಗನಗೌಡ ಅವರು ಬೈಕ್ ನಿಲ್ಲಿಸಿದ್ದರು.

ಇದನ್ನೂ ಓದಿ: ಬೊಲೆರೋಗೆ ಹಿಂದಿನಿಂದ ಡಿಕ್ಕಿ ಹೊಡೆದು ಅರ್ಧ ಕಿಲೋಮೀಟರ್ ತಳ್ಳಿಕೊಂಡು ಹೋಗಿ ಉರುಳಿಬಿದ್ದ ಕಂಟೇನರ್!

ಹೆಣ್ಣೂರು ಸಂಚಾರಿ ಠಾಣೆ ವ್ಯಾಪ್ತಿಯ ಥಣಿಸಂದ್ರ ಬಳಿ ಶಾಲಾ ಬಸ್​ ಯೂಟರ್ನ್ ತೆಗೆದುಕೊಳ್ಳುವಾಗ ಬೈಕ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್​ನಿಂದ ಕೆಳಗೆ ಬಿದ್ದ ಇಬ್ಬರು ಮಕ್ಕಳ ಮೇಲೆ ಬಸ್ ಹಿಂಬದಿ ಚಕ್ರ ಹರಿದಿದೆ. ಕೂಡಲೇ ಮಕ್ಕಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕಾನ್ಸ್​ಟೇಬಲ್ ನಾಗನಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಶಾಲಾ ಬಸ್ ಚಾಲಕ ವಶಕ್ಕೆ 

ಇನ್ನು ಇಬ್ಬರು ಮಕ್ಕಳ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆ ಬಳಿ ಕುಟುಂಬಸ್ಥರು ಜಮಾಯಿಸಿದ್ದು, ಮಕ್ಕಳನ್ನ‌ ಕಳೆದುಕೊಂಡ ಹಿನ್ನಲೆ  ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಹೆಣ್ಣೂರು ಸಂಚಾರ ಪೊಲೀಸರು ಶಾಲಾ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಅಂಡರ್​ಪಾಸ್​ಗೆ KSRTC ಬಸ್​ ಡಿಕ್ಕಿ: 19 ಪ್ರಯಾಣಿಕರಿಗೆ ಗಾಯ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೋಡಿಹಳ್ಳಿ ಬಳಿ ಅಂಡರ್​ಪಾಸ್​ಗೆ ಕೆಎಸ್​​ಆರ್​ಟಿಸಿ ಬಸ್ ಡಿಕ್ಕಿಯಾಗಿ 19 ಪ್ರಯಾಣಿಕರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಬೆಂಗಳೂರಿನಿಂದ ವಿರಾಜಪೇಟೆಗೆ ಕೆಎಸ್​ಆರ್​ಟಿಸಿ ಬಸ್ ಹೊರಟಿತ್ತು. ಗಾಯಾಳುಗಳಿಗೆ ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.