AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ!

ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಶಾಲಾ ಸಮಯವನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದು, ಪೋಷಕರು, ಸಂಚಾರ ಪೊಲೀಸ್ ಹಾಗೂ ಶಾಲಾ ಆಡಳಿತ ಮಂಡಳಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ!
ಬೆಂಗಳೂರಿನ ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ!
ಭಾವನಾ ಹೆಗಡೆ
|

Updated on: Sep 13, 2026 | 8:19 AM

Share

ಮುಖ್ಯಾಂಶಗಳು

  • ಬೆಂಗಳೂರಿನ ಟ್ರಾಫಿಕ್ ಕಡಿಮೆ ಮಾಡಲು ಶಾಲಾ ಸಮಯ ಬದಲಾವಣೆಗೆ ಚಿಂತನೆ.
  • ಶಾಲಾ ಇಲಾಖೆಯಿಂದ ಶೀಘ್ರದಲ್ಲೇ ಪೋಷಕರು ಮತ್ತು ಅಧಿಕಾರಿಗಳೊಂದಿಗೆ ಸಭೆ.
  • ಸಂಚಾರ ದಟ್ಟಣೆ ನಿಯಂತ್ರಿಸಲು ಹೈಕೋರ್ಟ್ ಸಲಹೆಯಂತೆ ಕ್ರಮಕ್ಕೆ ಚರ್ಚೆ.

ಬೆಂಗಳೂರು, ಸೆಪ್ಟೆಂಬರ್ 13: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತೀವ್ರ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ನಗರದ ಶಾಲೆಗಳ ವೇಳಾಪಟ್ಟಿಯನ್ನು ಬದಲಾಯಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಕುರಿತು ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಶಾಲಾ ಸಮಯವನ್ನು ಪರಿಷ್ಕರಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟ ಹಾಗೂ ಸಾರ್ವಜನಿಕರಿಂದ ಮನವಿಗಳು ಬಂದಿವೆ ಎಂದು ತಿಳಿಸಿದ್ದಾರೆ.

ಪೋಷಕರೊಂದಿಗೆ ಸುದೀರ್ಘ ಚರ್ಚೆ

ಶಾಲಾ ಸಮಯ ಬದಲಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯು ವಿವಿಧ ಇಲಾಖೆಗಳು, ಸಂಚಾರ ಪೊಲೀಸ್ ಅಧಿಕಾರಿಗಳು, ಖಾಸಗಿ ಶಾಲಾ ಆಡಳಿತ ಮಂಡಳಿಗಳು, ಶಾಲಾ ವಾಹನ ಚಾಲಕರ ಸಂಘ ಮತ್ತು ಪೋಷಕರೊಂದಿಗೆ ಸುದೀರ್ಘ ಚರ್ಚೆ ನಡೆಸಲಿದೆ. ಎಲ್ಲ ಭಾಗಿದಾರ ಅಭಿಪ್ರಾಯಗಳನ್ನು ಸಂಗ್ರಹಿಸಿದ ನಂತರವೇ ಸೂಕ್ತ ಹಾಗೂ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಶಾಲಾ ವೇಳಾಪಟ್ಟಿ ಬದಲಾವಣೆ

ರಾಷ್ಟ್ರ ರಾಜಧಾನಿಯಂತೆಯೇ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಬೆಳಗ್ಗೆ ಮತ್ತು ಸಂಜೆ ಶಾಲಾ ವಾಹನಗಳು ಹಾಗೂ ಕಚೇರಿ ವಾಹನಗಳು ಒಂದೇ ಸಮಯದಲ್ಲಿ ರಸ್ತೆಗೆ ಇಳಿಯುವುದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಈ ಹಿಂದೆ ಉಚ್ಚ ನ್ಯಾಯಾಲಯ ಕೂಡ ಸಂಚಾರ ನಿಯಂತ್ರಣಕ್ಕಾಗಿ ಶಾಲಾ ಮತ್ತು ಕಚೇರಿ ವೇಳಾಪಟ್ಟಿಯಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಸರ್ಕಾರಕ್ಕೆ ಸಲಹೆ ನೀಡಿತ್ತು. ಶಾಲಾ ಸಮಯವನ್ನು ಸುಮಾರು 30 ನಿಮಿಷದಿಂದ 1 ಗಂಟೆಗಳ ಕಾಲ ಮುಂಚಿತವಾಗಿ ಅಥವಾ ಬದಲಾಯಿಸಿ ನಿಗದಿಪಡಿಸುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ಹೆಚ್ಚುವುದರ ಜೊತೆಗೆ ರಸ್ತೆಗಳಲ್ಲಿ ವಾಹನಗಳ ಒತ್ತಡ ಕಡಿಮೆಯಾಗಲಿದೆ ಎಂಬುದು ಇಲಾಖೆಯ ಲೆಕ್ಕಾಚಾರವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್