AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ 10 ವರ್ಷಗಳಲ್ಲಿ ಅಕ್ಟೋಬರ್​​ನಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ತಂಪು ತಂಪು ಕೂಲ್ ಕೂಲ್

ಮಳೆಯಾಗದೆ ಬೆಂಗಳೂರಿನ ಹವಾಮಾನದಲ್ಲಿ ವೈಪರೀತ್ಯ ಕಂಡುಬಂದಿದೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಂಗಳವಾರ ಕನಿಷ್ಠ ತಾಪಮಾನ 17.2 ಡಿಗ್ರಿ ಸೆಲ್ಸಿಯಸ್​​, ಹೆಚ್‌ಎಎಲ್ ವಿಮಾನ ನಿಲ್ದಾಣದ ಬಳಿ 17 ಡಿಗ್ರಿ ಸೆಲ್ಸಿಯಸ್​​ ತಾಪಮಾನ ದಾಖಲಾಗಿದೆ.

ಕಳೆದ 10 ವರ್ಷಗಳಲ್ಲಿ ಅಕ್ಟೋಬರ್​​ನಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ತಂಪು ತಂಪು ಕೂಲ್ ಕೂಲ್
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Oct 25, 2023 | 10:58 AM

Share

ಬೆಂಗಳೂರು ಅ.25: ಕಳೆದ 10 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮಂಗಳವಾರ ಕನಿಷ್ಠ 17.1 ಡಿಗ್ರಿ ಸೆಲ್ಸಿಯಸ್​ ತಾಪಮಾನ (Temperature) ದಾಖಲಾಗಿದೆ. 2014ರ ಅಕ್ಟೋಬರ್ 31 ರಂದು ತಾಪಮಾನವು 17.5 ಡಿಗ್ರಿ ಸೆಲ್ಸಿಯಸ್​​ಗೆ ಇಳಿದಿತ್ತು. ಇದಾದ ಬಳಿಕ 2023ರ ಅಕ್ಟೋಬರ್​ 24 ರಂದು 17.1 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ತಿಳಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಕನಿಷ್ಠ ತಾಪಮಾನ 17.2 ಡಿಗ್ರಿ ಸೆಲ್ಸಿಯಸ್​​, ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 17 ಡಿಗ್ರಿ ಸೆಲ್ಸಿಯಸ್​​ ತಾಪಮಾನ ದಾಖಲಾಗಿದೆ.

‘ರೇಡಿಯೇಶನ್ ಕೂಲಿಂಗ್’

ತಾಪಮಾನದಲ್ಲಿನ ಕುಸಿತವು “ರೇಡಿಯೇಶನ್ ಕೂಲಿಂಗ್” ಎಂಬ ವಿದ್ಯಮಾನಕ್ಕೆ ಕಾರಣವೆಂದು ಹೇಳಬಹುದು. ಶಾಖವು ರಾತ್ರಿಯ ಸಮಯದಲ್ಲಿ ಭೂಮಿಯಿಂದ ಹೊರಸೂಸಲ್ಪಡುತ್ತದೆ. ಮಳೆಯಾಗದೆ ತಾಪಮಾನದಲ್ಲಿ ಕುಸಿತವುಂಟಾಗಿದ್ದು, ಇದನ್ನು ವಿಕಿರಣ ತಂಪಾಗಿಸುವಿಕೆ ಎಂದು ಕರೆಯಲಾಗುತ್ತದೆ. ಕೊನೆಪಕ್ಷ ಮಳೆ ಮೋಡ ಕವಿದರೆ ತಾಪಮಾನ ಕಡಿಮೆಯಾಗುವುದಿಲ್ಲ. ಕಳೆದ ವರ್ಷ ಇದೇ ಅವಧಿಯಲ್ಲಿ ಮಳೆಯಾಗಿದ್ದರಿಂದ ತಾಪಮಾನ ಈ ರೀತಿ ಕಡಿಮೆಯಾಗಿಲ್ಲ ಎಂದು ಬೆಂಗಳೂರಿನ ಐಎಂಡಿ ವಿಜ್ಞಾನಿ ಎ.ಪ್ರಸಾದ್ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:52 am, Wed, 25 October 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು