AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ 10 ವರ್ಷಗಳಲ್ಲಿ ಅಕ್ಟೋಬರ್​​ನಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ತಂಪು ತಂಪು ಕೂಲ್ ಕೂಲ್

ಮಳೆಯಾಗದೆ ಬೆಂಗಳೂರಿನ ಹವಾಮಾನದಲ್ಲಿ ವೈಪರೀತ್ಯ ಕಂಡುಬಂದಿದೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಂಗಳವಾರ ಕನಿಷ್ಠ ತಾಪಮಾನ 17.2 ಡಿಗ್ರಿ ಸೆಲ್ಸಿಯಸ್​​, ಹೆಚ್‌ಎಎಲ್ ವಿಮಾನ ನಿಲ್ದಾಣದ ಬಳಿ 17 ಡಿಗ್ರಿ ಸೆಲ್ಸಿಯಸ್​​ ತಾಪಮಾನ ದಾಖಲಾಗಿದೆ.

ಕಳೆದ 10 ವರ್ಷಗಳಲ್ಲಿ ಅಕ್ಟೋಬರ್​​ನಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ತಂಪು ತಂಪು ಕೂಲ್ ಕೂಲ್
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Oct 25, 2023 | 10:58 AM

Share

ಬೆಂಗಳೂರು ಅ.25: ಕಳೆದ 10 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮಂಗಳವಾರ ಕನಿಷ್ಠ 17.1 ಡಿಗ್ರಿ ಸೆಲ್ಸಿಯಸ್​ ತಾಪಮಾನ (Temperature) ದಾಖಲಾಗಿದೆ. 2014ರ ಅಕ್ಟೋಬರ್ 31 ರಂದು ತಾಪಮಾನವು 17.5 ಡಿಗ್ರಿ ಸೆಲ್ಸಿಯಸ್​​ಗೆ ಇಳಿದಿತ್ತು. ಇದಾದ ಬಳಿಕ 2023ರ ಅಕ್ಟೋಬರ್​ 24 ರಂದು 17.1 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ತಿಳಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಕನಿಷ್ಠ ತಾಪಮಾನ 17.2 ಡಿಗ್ರಿ ಸೆಲ್ಸಿಯಸ್​​, ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 17 ಡಿಗ್ರಿ ಸೆಲ್ಸಿಯಸ್​​ ತಾಪಮಾನ ದಾಖಲಾಗಿದೆ.

‘ರೇಡಿಯೇಶನ್ ಕೂಲಿಂಗ್’

ತಾಪಮಾನದಲ್ಲಿನ ಕುಸಿತವು “ರೇಡಿಯೇಶನ್ ಕೂಲಿಂಗ್” ಎಂಬ ವಿದ್ಯಮಾನಕ್ಕೆ ಕಾರಣವೆಂದು ಹೇಳಬಹುದು. ಶಾಖವು ರಾತ್ರಿಯ ಸಮಯದಲ್ಲಿ ಭೂಮಿಯಿಂದ ಹೊರಸೂಸಲ್ಪಡುತ್ತದೆ. ಮಳೆಯಾಗದೆ ತಾಪಮಾನದಲ್ಲಿ ಕುಸಿತವುಂಟಾಗಿದ್ದು, ಇದನ್ನು ವಿಕಿರಣ ತಂಪಾಗಿಸುವಿಕೆ ಎಂದು ಕರೆಯಲಾಗುತ್ತದೆ. ಕೊನೆಪಕ್ಷ ಮಳೆ ಮೋಡ ಕವಿದರೆ ತಾಪಮಾನ ಕಡಿಮೆಯಾಗುವುದಿಲ್ಲ. ಕಳೆದ ವರ್ಷ ಇದೇ ಅವಧಿಯಲ್ಲಿ ಮಳೆಯಾಗಿದ್ದರಿಂದ ತಾಪಮಾನ ಈ ರೀತಿ ಕಡಿಮೆಯಾಗಿಲ್ಲ ಎಂದು ಬೆಂಗಳೂರಿನ ಐಎಂಡಿ ವಿಜ್ಞಾನಿ ಎ.ಪ್ರಸಾದ್ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:52 am, Wed, 25 October 23

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು