AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ರಾಜ್ಯದಲ್ಲೇ ಅತ್ಯುತ್ತಮ ಆರ್​ಆರ್​ಆರ್​ ನಗರವಾಗಿ ಆಯ್ಕೆ

ಪೌರಾಡಳಿತ ನಿರ್ದೇಶನಾಲಯ ನಡೆಸಿದ ಮೈ ಲೈಫ್ ಮೈ ಸಿಟಿ ಬೆಂಗಳೂರು ರಾಜ್ಯದಲ್ಲೇ ಅತ್ಯುತ್ತಮ ಆರ್​ಆರ್​ಆರ್ ನಗರವಾಗಿ ಆಯ್ಕೆಯಾಗಿದೆ.

ಬೆಂಗಳೂರು ರಾಜ್ಯದಲ್ಲೇ ಅತ್ಯುತ್ತಮ ಆರ್​ಆರ್​ಆರ್​ ನಗರವಾಗಿ ಆಯ್ಕೆ
ಬಿಬಿಎಂಪಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jul 28, 2023 | 3:44 PM

Share

ಬೆಂಗಳೂರು: ಪೌರಾಡಳಿತ ನಿರ್ದೇಶನಾಲಯ ನಡೆಸಿದ ನನ್ನ ಜೀವನ ನನ್ನ ನಗರ (My Life My City) ಅಭಿಯಾನದಲ್ಲಿ ಬೆಂಗಳೂರು (Bengaluru) ರಾಜ್ಯದಲ್ಲೇ ಅತ್ಯುತ್ತಮ ಆರ್​ಆರ್​ಆರ್ (RRR)​ (ರೆಡ್ಯೂಸ್​, ರಿಯೂಸ್​​ ಹಾಗೂ ರಿಸೈಕಲ್​) ನಗರವಾಗಿ ಆಯ್ಕೆಯಾಗಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನನ್ನ ಜೀವನ, ನನ್ನ ಸ್ವಚ್ಛ ನಗರ ಎಂಬ ದ್ಯೇಯೆಯೊಂದಿಗೆ ಮೇ 15 ರಿಂದ ಪರಿಸರ ದಿನವಾದ ಜೂನ್ 5 ರವರೆಗೆ ದೊಡ್ಡ ಪ್ರಮಾಣದ ಮತ್ತು ಉನ್ನತ-ಪ್ರಭಾವದ ರಾಷ್ಟ್ರೀಯ ಅಭಿಯಾನವನ್ನು ಪ್ರಾರಂಭಿಸಿತು. ಈ ಸಂಬಂಧ ಪೌರಾಡಳಿತ ನಿರ್ದೇಶನಾಲಯವು ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೈ ಲೈಫ್ ಮೈ ಸಿಟಿ ಎಂಬ ಧ್ಯೇಯದೊಂಗಿದೆ ರೆಡ್ಯೂಸ್​, ರಿಯೂಸ್​ ಹಾಗೂ ರಿಸೈಕಲ್​-ಆರ್​.ಆರ್​.ಆರ್​ ಕೇಂದ್ರಗಳನ್ನು ಸ್ಥಾಪಿಸಲು ಸೂಚಿಸಿತ್ತು.

ಈ ಅಭಿಯಾನದಡಿ ಬಿಬಿಎಂಪಿ 49 ವಾರ್ಡ್‌ಗಳಲ್ಲಿ ಆರ್.ಆರ್.ಆರ್ ಕೇಂದ್ರಗಳನ್ನು ತೆರೆದಿದೆ. ಈ ಕೇಂದ್ರಗಳು ಮನೆಗಳಲ್ಲಿ ಬಳಕೆಯಾಗದ ಪುಸ್ತಕಗಳು, ಆಟಿಕೆಗಳು, ಕಬ್ಬಿಣದ ಉತ್ಪನ್ನ ಹಾಗೂ ಪ್ಲಾಸ್ಟಿಕ್ ಉತ್ಪನ್ನಗಳನ್ನು ಪಡೆದು ಪುನರ್ ಬಳಕೆ ಮಾಡುವ ಜತೆಗೆ ನಗರವನ್ನು ಸ್ವಚ್ಛ ನಗರವನ್ನಾಗಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

ಇದನ್ನೂ ಓದಿ: ಬೆಂಗಳೂರು: ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬೇಡಿ: ಬಿಬಿಎಂಪಿಗೆ ಶಾಲಾ ಶಿಕ್ಷಣ ಇಲಾಖೆ ಆಗ್ರಹ

ಗುರುವಾರ ಬೆಂಗಳೂರಿನ ದಿ ಚಾನ್ಸೆರಿ ಪೆವಿಲಿಯನ್ ಹೋಟೆಲ್‌ನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕುರಿತು ಪೌರಾಡಳಿತ ನಿರ್ದೇಶನಾಲಯ ನಡೆಸಿದ ಕಾರ್ಯಾಗಾರದಲ್ಲಿ ಪೌರಾಡಳಿತ ಸಚಿವ ರಹೀಮ್ ಖಾನ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಗೆ ಅತ್ಯುತ್ತಮ ಆರ್​ಆರ್​ಆರ್​ ಪ್ರಶಸ್ತಿ ನೀಡಿ ಗೌರವಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Fri, 28 July 23

Follow Us
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!