AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ರಾಜ್ಯದಲ್ಲೇ ಅತ್ಯುತ್ತಮ ಆರ್​ಆರ್​ಆರ್​ ನಗರವಾಗಿ ಆಯ್ಕೆ

ಪೌರಾಡಳಿತ ನಿರ್ದೇಶನಾಲಯ ನಡೆಸಿದ ಮೈ ಲೈಫ್ ಮೈ ಸಿಟಿ ಬೆಂಗಳೂರು ರಾಜ್ಯದಲ್ಲೇ ಅತ್ಯುತ್ತಮ ಆರ್​ಆರ್​ಆರ್ ನಗರವಾಗಿ ಆಯ್ಕೆಯಾಗಿದೆ.

ಬೆಂಗಳೂರು ರಾಜ್ಯದಲ್ಲೇ ಅತ್ಯುತ್ತಮ ಆರ್​ಆರ್​ಆರ್​ ನಗರವಾಗಿ ಆಯ್ಕೆ
ಬಿಬಿಎಂಪಿ
Follow us
ವಿವೇಕ ಬಿರಾದಾರ
|

Updated on:Jul 28, 2023 | 3:44 PM

ಬೆಂಗಳೂರು: ಪೌರಾಡಳಿತ ನಿರ್ದೇಶನಾಲಯ ನಡೆಸಿದ ನನ್ನ ಜೀವನ ನನ್ನ ನಗರ (My Life My City) ಅಭಿಯಾನದಲ್ಲಿ ಬೆಂಗಳೂರು (Bengaluru) ರಾಜ್ಯದಲ್ಲೇ ಅತ್ಯುತ್ತಮ ಆರ್​ಆರ್​ಆರ್ (RRR)​ (ರೆಡ್ಯೂಸ್​, ರಿಯೂಸ್​​ ಹಾಗೂ ರಿಸೈಕಲ್​) ನಗರವಾಗಿ ಆಯ್ಕೆಯಾಗಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನನ್ನ ಜೀವನ, ನನ್ನ ಸ್ವಚ್ಛ ನಗರ ಎಂಬ ದ್ಯೇಯೆಯೊಂದಿಗೆ ಮೇ 15 ರಿಂದ ಪರಿಸರ ದಿನವಾದ ಜೂನ್ 5 ರವರೆಗೆ ದೊಡ್ಡ ಪ್ರಮಾಣದ ಮತ್ತು ಉನ್ನತ-ಪ್ರಭಾವದ ರಾಷ್ಟ್ರೀಯ ಅಭಿಯಾನವನ್ನು ಪ್ರಾರಂಭಿಸಿತು. ಈ ಸಂಬಂಧ ಪೌರಾಡಳಿತ ನಿರ್ದೇಶನಾಲಯವು ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೈ ಲೈಫ್ ಮೈ ಸಿಟಿ ಎಂಬ ಧ್ಯೇಯದೊಂಗಿದೆ ರೆಡ್ಯೂಸ್​, ರಿಯೂಸ್​ ಹಾಗೂ ರಿಸೈಕಲ್​-ಆರ್​.ಆರ್​.ಆರ್​ ಕೇಂದ್ರಗಳನ್ನು ಸ್ಥಾಪಿಸಲು ಸೂಚಿಸಿತ್ತು.

ಈ ಅಭಿಯಾನದಡಿ ಬಿಬಿಎಂಪಿ 49 ವಾರ್ಡ್‌ಗಳಲ್ಲಿ ಆರ್.ಆರ್.ಆರ್ ಕೇಂದ್ರಗಳನ್ನು ತೆರೆದಿದೆ. ಈ ಕೇಂದ್ರಗಳು ಮನೆಗಳಲ್ಲಿ ಬಳಕೆಯಾಗದ ಪುಸ್ತಕಗಳು, ಆಟಿಕೆಗಳು, ಕಬ್ಬಿಣದ ಉತ್ಪನ್ನ ಹಾಗೂ ಪ್ಲಾಸ್ಟಿಕ್ ಉತ್ಪನ್ನಗಳನ್ನು ಪಡೆದು ಪುನರ್ ಬಳಕೆ ಮಾಡುವ ಜತೆಗೆ ನಗರವನ್ನು ಸ್ವಚ್ಛ ನಗರವನ್ನಾಗಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

ಇದನ್ನೂ ಓದಿ: ಬೆಂಗಳೂರು: ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬೇಡಿ: ಬಿಬಿಎಂಪಿಗೆ ಶಾಲಾ ಶಿಕ್ಷಣ ಇಲಾಖೆ ಆಗ್ರಹ

ಗುರುವಾರ ಬೆಂಗಳೂರಿನ ದಿ ಚಾನ್ಸೆರಿ ಪೆವಿಲಿಯನ್ ಹೋಟೆಲ್‌ನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕುರಿತು ಪೌರಾಡಳಿತ ನಿರ್ದೇಶನಾಲಯ ನಡೆಸಿದ ಕಾರ್ಯಾಗಾರದಲ್ಲಿ ಪೌರಾಡಳಿತ ಸಚಿವ ರಹೀಮ್ ಖಾನ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಗೆ ಅತ್ಯುತ್ತಮ ಆರ್​ಆರ್​ಆರ್​ ಪ್ರಶಸ್ತಿ ನೀಡಿ ಗೌರವಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Fri, 28 July 23

ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು