AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ರಾಜ್ಯದಲ್ಲೇ ಅತ್ಯುತ್ತಮ ಆರ್​ಆರ್​ಆರ್​ ನಗರವಾಗಿ ಆಯ್ಕೆ

ಪೌರಾಡಳಿತ ನಿರ್ದೇಶನಾಲಯ ನಡೆಸಿದ ಮೈ ಲೈಫ್ ಮೈ ಸಿಟಿ ಬೆಂಗಳೂರು ರಾಜ್ಯದಲ್ಲೇ ಅತ್ಯುತ್ತಮ ಆರ್​ಆರ್​ಆರ್ ನಗರವಾಗಿ ಆಯ್ಕೆಯಾಗಿದೆ.

ಬೆಂಗಳೂರು ರಾಜ್ಯದಲ್ಲೇ ಅತ್ಯುತ್ತಮ ಆರ್​ಆರ್​ಆರ್​ ನಗರವಾಗಿ ಆಯ್ಕೆ
ಬಿಬಿಎಂಪಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jul 28, 2023 | 3:44 PM

Share

ಬೆಂಗಳೂರು: ಪೌರಾಡಳಿತ ನಿರ್ದೇಶನಾಲಯ ನಡೆಸಿದ ನನ್ನ ಜೀವನ ನನ್ನ ನಗರ (My Life My City) ಅಭಿಯಾನದಲ್ಲಿ ಬೆಂಗಳೂರು (Bengaluru) ರಾಜ್ಯದಲ್ಲೇ ಅತ್ಯುತ್ತಮ ಆರ್​ಆರ್​ಆರ್ (RRR)​ (ರೆಡ್ಯೂಸ್​, ರಿಯೂಸ್​​ ಹಾಗೂ ರಿಸೈಕಲ್​) ನಗರವಾಗಿ ಆಯ್ಕೆಯಾಗಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನನ್ನ ಜೀವನ, ನನ್ನ ಸ್ವಚ್ಛ ನಗರ ಎಂಬ ದ್ಯೇಯೆಯೊಂದಿಗೆ ಮೇ 15 ರಿಂದ ಪರಿಸರ ದಿನವಾದ ಜೂನ್ 5 ರವರೆಗೆ ದೊಡ್ಡ ಪ್ರಮಾಣದ ಮತ್ತು ಉನ್ನತ-ಪ್ರಭಾವದ ರಾಷ್ಟ್ರೀಯ ಅಭಿಯಾನವನ್ನು ಪ್ರಾರಂಭಿಸಿತು. ಈ ಸಂಬಂಧ ಪೌರಾಡಳಿತ ನಿರ್ದೇಶನಾಲಯವು ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೈ ಲೈಫ್ ಮೈ ಸಿಟಿ ಎಂಬ ಧ್ಯೇಯದೊಂಗಿದೆ ರೆಡ್ಯೂಸ್​, ರಿಯೂಸ್​ ಹಾಗೂ ರಿಸೈಕಲ್​-ಆರ್​.ಆರ್​.ಆರ್​ ಕೇಂದ್ರಗಳನ್ನು ಸ್ಥಾಪಿಸಲು ಸೂಚಿಸಿತ್ತು.

ಈ ಅಭಿಯಾನದಡಿ ಬಿಬಿಎಂಪಿ 49 ವಾರ್ಡ್‌ಗಳಲ್ಲಿ ಆರ್.ಆರ್.ಆರ್ ಕೇಂದ್ರಗಳನ್ನು ತೆರೆದಿದೆ. ಈ ಕೇಂದ್ರಗಳು ಮನೆಗಳಲ್ಲಿ ಬಳಕೆಯಾಗದ ಪುಸ್ತಕಗಳು, ಆಟಿಕೆಗಳು, ಕಬ್ಬಿಣದ ಉತ್ಪನ್ನ ಹಾಗೂ ಪ್ಲಾಸ್ಟಿಕ್ ಉತ್ಪನ್ನಗಳನ್ನು ಪಡೆದು ಪುನರ್ ಬಳಕೆ ಮಾಡುವ ಜತೆಗೆ ನಗರವನ್ನು ಸ್ವಚ್ಛ ನಗರವನ್ನಾಗಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

ಇದನ್ನೂ ಓದಿ: ಬೆಂಗಳೂರು: ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬೇಡಿ: ಬಿಬಿಎಂಪಿಗೆ ಶಾಲಾ ಶಿಕ್ಷಣ ಇಲಾಖೆ ಆಗ್ರಹ

ಗುರುವಾರ ಬೆಂಗಳೂರಿನ ದಿ ಚಾನ್ಸೆರಿ ಪೆವಿಲಿಯನ್ ಹೋಟೆಲ್‌ನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕುರಿತು ಪೌರಾಡಳಿತ ನಿರ್ದೇಶನಾಲಯ ನಡೆಸಿದ ಕಾರ್ಯಾಗಾರದಲ್ಲಿ ಪೌರಾಡಳಿತ ಸಚಿವ ರಹೀಮ್ ಖಾನ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಗೆ ಅತ್ಯುತ್ತಮ ಆರ್​ಆರ್​ಆರ್​ ಪ್ರಶಸ್ತಿ ನೀಡಿ ಗೌರವಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Fri, 28 July 23

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು