AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಯುವತಿ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮೇಲೆ ಎಫ್​ಐಆರ್ ದಾಖಲು

Bengaluru Sexual Assault Case: ಕೊರಮಂಗಲದಿಂದ ಹೆಚ್ಎಸ್​ಆರ್ ಲೇಔಟ್ ನ ಶೆಡ್ ಬಳಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಸದ್ಯ ಆಸ್ಪತ್ರೆ ಸೇರಿರುವ ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮೇಲೆ ಎಫ್​ಐಆರ್ ದಾಖಲಾಗಿದೆ. ಆಟೋ ಚಾಲಕ ನೀಡಿದ ದೂರಿನ ಮೇರೆಗೆ ಎಫ್​ಐಆರ್ ದಾಖಲಾಗಿದೆ. ಏಕೆ ಎಂಬ ಪ್ರಶ್ನೆಗೆ ಈ ಸುದ್ದಿ ಓದಿ.

ಬೆಂಗಳೂರು ಯುವತಿ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮೇಲೆ ಎಫ್​ಐಆರ್ ದಾಖಲು
ಆಡುಗೋಡಿ ಪೊಲೀಸ್ ಠಾಣೆ
Jagadisha B
| Edited By: ಆಯೇಷಾ ಬಾನು|

Updated on: Aug 20, 2024 | 7:23 AM

Share

ಬೆಂಗಳೂರು, ಆಗಸ್ಟ್​.20: ಹೆಚ್​ಎಸ್​ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿಗೆ ಈಗ ಸಂಕಷ್ಟ ಎದುರಾಗಿದೆ. ಸದ್ಯ ಅತ್ಯಾಚಾರ ವೇಳೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಹಾಗೂ ಆತನ ಸ್ನೇಹಿತನ ವಿರುದ್ಧ ಆಟೋ ಚಾಲಕ ದೂರು ನೀಡಿದ್ದು ದೂರಿನ ಮೇರೆಗೆ ಆಡುಗೋಡಿ ಸಂಚಾರಿ ಠಾಣೆಯಲ್ಲಿ (Adugodi Police Station) ಎಫ್​ಐಆರ್ ದಾಖಲಾಗಿದೆ.

ಸಂತ್ರಸ್ತೆ ವಿರುದ್ಧ ಪ್ರಕರಣ ದಾಖಲಾಗಿದ್ಯಾಕೆ?

ಡ್ರಾಪ್​ಗಾಗಿ ಸಂತ್ರಸ್ತೆ ಬೈಕ್​ನಲ್ಲಿ ತೆರಳುವ ಮುನ್ನ ಅಂದು ರಾತ್ರಿ (ಆಗಸ್ಟ್​.17) ಕೊರಮಂಗಲಕ್ಕೆ ಗೆಳೆಯನ ಜೊತೆ ಬಂದಿದ್ದಳು. ಊಟ ಮುಗಿಸಿಕೊಂಡು ಗೆಳೆಯನ ಜೊತೆ ಕಾರಿನಲ್ಲಿ ತೆರಳುವಾಗ ತಾನೇ ಕಾರು ಚಾಲನೆ ಮಾಡಿಕೊಂಡು ಹೋಗಿದ್ದಳು. ಈ ವೇಳೆ ಟಾನಿಕ್ ಬಳಿಯ ಮಂಗಳ ಜಂಕ್ಷನ್ ಬಳಿ ಕಾರು ಅಪಘಾತವಾಗಿದೆ. ಅಪಘಾತದಲ್ಲಿ ಒಂದಲ್ಲಾ ಎರಡಲ್ಲ‌ ಮೂರು ವಾಹನಗಳು ಜಖಂ ಆಗಿವೆ. ಎರಡು ಆಟೋ ಹಾಗೂ ಒಂದು ಬೈಕ್​ಗೆ ಡಿಕ್ಕಿ ಹೊಡೆದು ಕಾರನ್ನೂ ನಿಲ್ಲಿಸದೆ ಫೋರಂ ಮಾಲ್ ಕಡೆ ಚಲಾಯಿಸಿಕೊಂಡು ಹೋಗಿದ್ದಾಳೆ. ತಕ್ಷಣವೇ ಜಖಂ ಆಗಿದ್ದ ಎರಡು ಆಟೋಗಳು ಕಾರನ್ನು ಫಾಲೋ ಮಾಡಿ ಪ್ರಶ್ನಿಸಿದ್ದಾರೆ. ಆಗ ಕಾರಿನಿಂದ ಇಳಿದ ಸಂತ್ರಸ್ತೆ ಏಕಾಏಕಿ ಕಾರು ಅಲ್ಲೇ ಬಿಟ್ಟು ತೆರಳಿದ್ದಾಳೆ. ಆಗ ಆಕೆ ಸ್ನೇಹಿತ ಚಾಲಕರ ಜೊತೆ ವಾದ ಮಾಡಿ ಪರಿಸ್ಥಿತಿ ನಿಭಾಯಿಸಿ ಬಳಿಕ ಯುವತಿಗಾಗಿ ಹುಡುಕಾಡಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ನಗರದ ಹಲವೆಡೆ ಬಲಿಗಾಗಿ ಕಾಯುತ್ತಿವೆ ಬೃಹತ್ ಮರಗಳು, ಹದಿನೈದು ದಿನದಲ್ಲಿ ಏಳು ಜನರ ಮೇಲೆ ಬಿದ್ದ ಮರ

ಅಪರಿಚಿತ ವ್ಯಕ್ತಿಯಿಂದ ಡ್ರಾಪ್ ಪಡೆದ ಯುವತಿ

ಇನ್ನು ಯುವತಿಯನ್ನು ಹುಡುಕಾಡುವಾಗ ಯುವತಿ ರಸ್ತೆ ಬಳಿ ಹೋಗಿ ಡ್ರಾಪ್ ಕೇಳುತ್ತಿದ್ದದ್ದನ್ನು ನೋಡಿದ ಸ್ನೇಹಿತ ವಿಚಾರಿಸಿದಾಗ, ಯುವತಿ ತಾನು ಮೊಬೈಲ್ ಅನ್ನು ಪಬ್​ನಲ್ಲೇ ಬಿಟ್ಟು ಬಂದಿದ್ದೇನೆ ಎಂದು ತಿಳಿಸಿದ್ದಾಳೆ. ಈ ವೇಳೆ ಇಬ್ಬರೂ ಒಬ್ಬರಿಗೊಬ್ಬರು ತಪ್ಪಿಕೊಂಡು ಸಮಾಧಾನ ಮಾಡಿಕೊಂಡಿದ್ದಾರೆ. ನಂತರ ಅಪರಿಚಿತ ವ್ಯಕ್ತಿಯಿಂದ ಡ್ರಾಪ್ ಕೇಳಿ ಯುವತಿ ಅಲ್ಲಿಂದ ಹೊರಟಿದ್ದಾಳೆ. ಈ ವೇಳೆ ಯುವತಿಯ ಮೇಲೆ ಅತ್ಯಾಚಾರದ ಯತ್ನ ನಡೆದಿದೆ. ಸದ್ಯ ಯುವತಿ ಹಾಗೂ ಆಕೆಯ ಸ್ನೇಹಿತನ ವಿರುದ್ಧ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಜಾಗರೂಕತೆ ಮತ್ತು ಅತಿಯಾದ ಚಾಲನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಚೇತರಿಕೆಗೊಳ್ತಿದ್ದಂತೆಯೆ ಕೇಸ್ ಸಂಬಂಧ ವಿಚಾರಣೆ ನಡೆಸಲಾಗುವುದು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು