AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಯುವತಿ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮೇಲೆ ಎಫ್​ಐಆರ್ ದಾಖಲು

Bengaluru Sexual Assault Case: ಕೊರಮಂಗಲದಿಂದ ಹೆಚ್ಎಸ್​ಆರ್ ಲೇಔಟ್ ನ ಶೆಡ್ ಬಳಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಸದ್ಯ ಆಸ್ಪತ್ರೆ ಸೇರಿರುವ ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮೇಲೆ ಎಫ್​ಐಆರ್ ದಾಖಲಾಗಿದೆ. ಆಟೋ ಚಾಲಕ ನೀಡಿದ ದೂರಿನ ಮೇರೆಗೆ ಎಫ್​ಐಆರ್ ದಾಖಲಾಗಿದೆ. ಏಕೆ ಎಂಬ ಪ್ರಶ್ನೆಗೆ ಈ ಸುದ್ದಿ ಓದಿ.

ಬೆಂಗಳೂರು ಯುವತಿ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮೇಲೆ ಎಫ್​ಐಆರ್ ದಾಖಲು
ಆಡುಗೋಡಿ ಪೊಲೀಸ್ ಠಾಣೆ
Jagadisha B
| Edited By: ಆಯೇಷಾ ಬಾನು|

Updated on: Aug 20, 2024 | 7:23 AM

Share

ಬೆಂಗಳೂರು, ಆಗಸ್ಟ್​.20: ಹೆಚ್​ಎಸ್​ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿಗೆ ಈಗ ಸಂಕಷ್ಟ ಎದುರಾಗಿದೆ. ಸದ್ಯ ಅತ್ಯಾಚಾರ ವೇಳೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಹಾಗೂ ಆತನ ಸ್ನೇಹಿತನ ವಿರುದ್ಧ ಆಟೋ ಚಾಲಕ ದೂರು ನೀಡಿದ್ದು ದೂರಿನ ಮೇರೆಗೆ ಆಡುಗೋಡಿ ಸಂಚಾರಿ ಠಾಣೆಯಲ್ಲಿ (Adugodi Police Station) ಎಫ್​ಐಆರ್ ದಾಖಲಾಗಿದೆ.

ಸಂತ್ರಸ್ತೆ ವಿರುದ್ಧ ಪ್ರಕರಣ ದಾಖಲಾಗಿದ್ಯಾಕೆ?

ಡ್ರಾಪ್​ಗಾಗಿ ಸಂತ್ರಸ್ತೆ ಬೈಕ್​ನಲ್ಲಿ ತೆರಳುವ ಮುನ್ನ ಅಂದು ರಾತ್ರಿ (ಆಗಸ್ಟ್​.17) ಕೊರಮಂಗಲಕ್ಕೆ ಗೆಳೆಯನ ಜೊತೆ ಬಂದಿದ್ದಳು. ಊಟ ಮುಗಿಸಿಕೊಂಡು ಗೆಳೆಯನ ಜೊತೆ ಕಾರಿನಲ್ಲಿ ತೆರಳುವಾಗ ತಾನೇ ಕಾರು ಚಾಲನೆ ಮಾಡಿಕೊಂಡು ಹೋಗಿದ್ದಳು. ಈ ವೇಳೆ ಟಾನಿಕ್ ಬಳಿಯ ಮಂಗಳ ಜಂಕ್ಷನ್ ಬಳಿ ಕಾರು ಅಪಘಾತವಾಗಿದೆ. ಅಪಘಾತದಲ್ಲಿ ಒಂದಲ್ಲಾ ಎರಡಲ್ಲ‌ ಮೂರು ವಾಹನಗಳು ಜಖಂ ಆಗಿವೆ. ಎರಡು ಆಟೋ ಹಾಗೂ ಒಂದು ಬೈಕ್​ಗೆ ಡಿಕ್ಕಿ ಹೊಡೆದು ಕಾರನ್ನೂ ನಿಲ್ಲಿಸದೆ ಫೋರಂ ಮಾಲ್ ಕಡೆ ಚಲಾಯಿಸಿಕೊಂಡು ಹೋಗಿದ್ದಾಳೆ. ತಕ್ಷಣವೇ ಜಖಂ ಆಗಿದ್ದ ಎರಡು ಆಟೋಗಳು ಕಾರನ್ನು ಫಾಲೋ ಮಾಡಿ ಪ್ರಶ್ನಿಸಿದ್ದಾರೆ. ಆಗ ಕಾರಿನಿಂದ ಇಳಿದ ಸಂತ್ರಸ್ತೆ ಏಕಾಏಕಿ ಕಾರು ಅಲ್ಲೇ ಬಿಟ್ಟು ತೆರಳಿದ್ದಾಳೆ. ಆಗ ಆಕೆ ಸ್ನೇಹಿತ ಚಾಲಕರ ಜೊತೆ ವಾದ ಮಾಡಿ ಪರಿಸ್ಥಿತಿ ನಿಭಾಯಿಸಿ ಬಳಿಕ ಯುವತಿಗಾಗಿ ಹುಡುಕಾಡಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ನಗರದ ಹಲವೆಡೆ ಬಲಿಗಾಗಿ ಕಾಯುತ್ತಿವೆ ಬೃಹತ್ ಮರಗಳು, ಹದಿನೈದು ದಿನದಲ್ಲಿ ಏಳು ಜನರ ಮೇಲೆ ಬಿದ್ದ ಮರ

ಅಪರಿಚಿತ ವ್ಯಕ್ತಿಯಿಂದ ಡ್ರಾಪ್ ಪಡೆದ ಯುವತಿ

ಇನ್ನು ಯುವತಿಯನ್ನು ಹುಡುಕಾಡುವಾಗ ಯುವತಿ ರಸ್ತೆ ಬಳಿ ಹೋಗಿ ಡ್ರಾಪ್ ಕೇಳುತ್ತಿದ್ದದ್ದನ್ನು ನೋಡಿದ ಸ್ನೇಹಿತ ವಿಚಾರಿಸಿದಾಗ, ಯುವತಿ ತಾನು ಮೊಬೈಲ್ ಅನ್ನು ಪಬ್​ನಲ್ಲೇ ಬಿಟ್ಟು ಬಂದಿದ್ದೇನೆ ಎಂದು ತಿಳಿಸಿದ್ದಾಳೆ. ಈ ವೇಳೆ ಇಬ್ಬರೂ ಒಬ್ಬರಿಗೊಬ್ಬರು ತಪ್ಪಿಕೊಂಡು ಸಮಾಧಾನ ಮಾಡಿಕೊಂಡಿದ್ದಾರೆ. ನಂತರ ಅಪರಿಚಿತ ವ್ಯಕ್ತಿಯಿಂದ ಡ್ರಾಪ್ ಕೇಳಿ ಯುವತಿ ಅಲ್ಲಿಂದ ಹೊರಟಿದ್ದಾಳೆ. ಈ ವೇಳೆ ಯುವತಿಯ ಮೇಲೆ ಅತ್ಯಾಚಾರದ ಯತ್ನ ನಡೆದಿದೆ. ಸದ್ಯ ಯುವತಿ ಹಾಗೂ ಆಕೆಯ ಸ್ನೇಹಿತನ ವಿರುದ್ಧ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಜಾಗರೂಕತೆ ಮತ್ತು ಅತಿಯಾದ ಚಾಲನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಚೇತರಿಕೆಗೊಳ್ತಿದ್ದಂತೆಯೆ ಕೇಸ್ ಸಂಬಂಧ ವಿಚಾರಣೆ ನಡೆಸಲಾಗುವುದು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?