AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಳಿನ್​ ಕುಮಾರ್​ ಕಟೀಲ್​ ಅಧ್ಯಕ್ಷನಾಗಲು ಲಾಯಕ್ಕಿಲ್ಲ; ಸಿದ್ದರಾಮಯ್ಯ

ನಳಿನ್​ ಕುಮಾರ್​ ಕಟೀಲ್​ ಅಧ್ಯಕ್ಷನಾಗಲು ಲಾಯಕ್ಕಿಲ್ಲ, ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ, ಎಂದು ಬೆಂಗಳೂರಿನಲ್ಲಿ ನಳಿನ್​ ಕುಮಾರ್​ ಕಟೀಲ್ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ನಳಿನ್​ ಕುಮಾರ್​ ಕಟೀಲ್​ ಅಧ್ಯಕ್ಷನಾಗಲು ಲಾಯಕ್ಕಿಲ್ಲ; ಸಿದ್ದರಾಮಯ್ಯ
ನಳಿನ್​ ಕುಮಾರ್​ ಕಟೀಲ್​ ಅಧ್ಯಕ್ಷನಾಗಲು ಲಾಯಕ್ಕಿಲ್ಲ ಎಂದ ಸಿದ್ದರಾಮಯ್ಯ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 20, 2023 | 11:27 AM

Share

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸ್​ಮರ ಜೋರಾಗಿದೆ. ಅಭಿವೃದ್ಧಿ ಚರ್ಚೆ ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತಾಡಿ ಅಂತಾನೆ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದು, ಅವನು ಅಧ್ಯಕ್ಷನಾಗಲು ಲಾಯಕ್ಕಿಲ್ಲ, ರಾಜಕೀಯ ಮಾಡುವುದಕ್ಕೆ ನಾಲಾಯಕ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್(Nalin Kumar Kateel)​ ವಿರುದ್ದ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಅಮಿತ್ ಶಾ ಟಿಪ್ಪು ವರ್ಸಸ್ ರಾಣಿ ಅಬ್ಬಕ್ಕ ಅಂತಾ ಹೇಳಿದ್ದಾರೆ. ಬಿಜೆಪಿ ನಾಯಕರು ಸಮಾಜದ ಸಾಮರಸ್ಯವನ್ನು ಕೆಡಿಸುತ್ತಿದ್ದಾರೆ. ಬಿಜೆಪಿಯವರಂತೆ ಒಳಗೊಂದು ಹೊರಗೊಂದು ನಾವು ಹೇಳೋದಿಲ್ಲ. ಬಿಜೆಪಿಯವರು ದ್ವೇಷದ ರಾಜಕಾರಣ ಮಾಡ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್​ಗೆ ಒಳ್ಳೆಯ ವಾತಾವರಣ ಇದೆ. ಹಾಗಾಗಿ ಹಲವರು ಕಾಂಗ್ರೆಸ್ ಕಡೆ ಮುಖ ಮಾಡುತ್ತಿದ್ದಾರೆ. ಬೇರೆ ಪಕ್ಷಗಳ ಬಹಳ ಶಾಸಕರ ಜೊತೆಗೆ ಮಂತ್ರಿಯಾಗಿದ್ದ ಕೆಲವರು ಕಾಂಗ್ರೆಸ್​ ಪಕ್ಷ ಸೇರುವ ಸಂಭವ ಇದೆ ಎಂದು ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ವಿರುದ್ದ ಮಾಜಿ ಡಿಸಿಎಂ ಜಿ.ಪರಮೇಶ್ವರ್ ವಾಗ್ದಾಳಿ

ಸಮಾಜದ ಶಾಂತಿ ಕದಡಲಾಗುತ್ತಿದೆ. ಮೊದಲಿನಿಂದಲೂ ಬಿಜೆಪಿ ಧರ್ಮಗಳ ನಡುವೆ ಒಡಕು ಮೂಡಿಸುವ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದೆ. ಅವರು ಎಲ್ಲಾ ವರ್ಗಗಳ ವಿರೋಧಿಗಳು, ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರಲಿದೆ. ನಮ್ಮ ನಾಯಕರು ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದಾರೆ. ಅಲ್ಲಿ ನಿರೀಕ್ಷೆಮೀರಿ ಜನರಿಂದ ಪ್ರತಿಕ್ರಿಯೆ ಸಿಗುತ್ತಿದೆ ಎಂದು ಬಿಜೆಪಿ ವಿರುದ್ಧ ಜಿ.ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?