AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರು ವರ್ಷ ಪ್ರೀತಿಸಿ ಬ್ರೇಕಪ್ ಎಂದ ಯುವತಿ; ಮನನೊಂದ ಯುವಕ ಆತ್ಮಹತ್ಯೆ

ಪ್ರೀತಿಸಿ ಆರು ವರ್ಷದ ನಂತರ ಯುವತಿ ಕೈಕೊಟ್ಟಳೆಂದು ಮನನೊಂದು ಯುವಕನೊಬ್ಬ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ಬೆಂಗಳೂರಿನ ಉಲ್ಲಾಳ ಉಪನಗರದಲ್ಲಿ ನಡೆದಿದೆ.

ಆರು ವರ್ಷ ಪ್ರೀತಿಸಿ ಬ್ರೇಕಪ್ ಎಂದ ಯುವತಿ; ಮನನೊಂದ ಯುವಕ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ರೋಹಿತ್
TV9 Web
| Edited By: |

Updated on:Jan 19, 2023 | 7:54 PM

Share

ಬೆಂಗಳೂರು: ಇವರಿಬ್ಬರು ನಾನು ನಿನ್ನಗಾಗಿ, ನೀನು ನನಗಾಗಿ ಎಂದು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಇವರಿಬ್ಬರ ನಡುವೆ ಜಗಳ ನಡೆದಿದ್ದು, ಆರು ವರ್ಷಗಳ ಪ್ರೀತಿಗೆ ಯುವತಿ ಎಳ್ಳು ನೀರು ಬಿಟ್ಟಿದ್ದಾಳೆ (Love Breakup). ಇದರಿಂದ ಮನನೊಂದ ಪ್ರಿಯತಮ, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ. ಈ ಘಟನೆ ಬೆಂಗಳೂರು ನಗರದ ಉಲ್ಲಾಳ ಉಪನಗರದಲ್ಲಿ ನಡೆದಿದೆ. ಕೊರಿಯರ್ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ರೋಹಿತ್(25) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಲ್ಲಾಳ ಉಪನಗರದ ನಿವಾಸಿ ರೋಹಿತ್ ಮತ್ತು ಕಾಲೇಜು ವ್ಯಾಸಾಂಗ ಮಾಡುತ್ತಿದ್ದ ಯುವತಿಯೋರ್ವಳು ಕಳೆದ ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಜೋಡಿ ಹಕ್ಕಿಗಳಂತೆ ಇದ್ದರು. ಆದರೆ ಇತ್ತೀಚೆಗೆ ಭೇಟಿ ಮಾಡಿದಾಗ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಆರು ವರ್ಷಗಳ ಪ್ರೀತಿಗೆ ಎಳ್ಳು ನೀರು ಬಿಡಲು ನಿರ್ಧರಿಸಿದ ಯುವತಿ, ನಾವು ಬ್ರೇಕಪ್ ಮಾಡಿಕೊಳ್ಳೋಣ ಎಂದಿದ್ದಾಳೆ. ಆದರೆ ನಿತ್ಯ ಜಿಮ್ ಮಾಡಿಕೊಂಡು ದಷ್ಟಪುಷ್ಟವಾಗಿದ್ದ ರೋಹಿತ್, ಆಕೆಯನ್ನು ಬಿಟ್ಟಿರಲಾಗದೆ ಕೊರಗುತ್ತಿದ್ದನು.

ಇದನ್ನೂ ಓದಿ: ಪಾಂಡವಪುರಕ್ಕೂ ಕಾಲಿಟ್ಟ ಸೈಬರ್ ಚೋರರು: ಕಾರು ಗಿಫ್ಟ್ ಬಂದಿರುವುದಾಗಿ ಬಡ ರೈತನಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ!

ಯುವತಿ ಬ್ರೇಕಪ್ ಮಾಡಿಕೊಂಡ ನಂತರ ಆಕೆ ರೋಹಿತ್​ ಜೊತೆ ಮಾತನಾಡುವುದನ್ನು ನಿಲ್ಲಿಸಿದ್ದಳು. ಹೀಗಾಗಿ ಆಕೆಯ ಮನವೋಲಿಸುವ ನಿಟ್ಟಿನಲ್ಲಿ ರೋಹಿತ್ ಆಕೆ ವ್ಯಾಸಾಂಗ ಮಾಡುತ್ತಿದ್ದ ಕಾಲೇಜು ಬಳಿಯೂ ಹೋಗಿದ್ದನು. ಅಲ್ಲಿ ಆಕೆಯನ್ನು ಮಾತನಾಡಿಸಲು ಯತ್ನಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಮನನೊಂದ ರೋಹಿತ್ ಇಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮನೆಮಗನನ್ನು ನೋಡಿದ ಪೋಷಕರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಜ್ಞಾನಭಾರತಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Thu, 19 January 23

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ