AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೆಂಗಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ತಿಪಂಜರ ಪತ್ತೆ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ತಿಪಂಜರ ಪತ್ತೆಯಾಗಿದೆ. ಕೊತ್ತನೂರು ಠಾಣಾ ವ್ಯಾಪ್ತಿಯ ಕಟ್ಟಡದಲ್ಲಿ ಪತ್ತೆಯಾಗಿದ್ದು, ಇದು 7-8 ತಿಂಗಳ ಹಿಂದೆ ಸಾವನ್ನಪ್ಪಿರುವ ವ್ಯಕ್ತಿಯದ್ದು ಎಂದು ಹೇಳಲಾಗಿದೆ. ಕಟ್ಟಡದ ಪ್ರಕರಣ ಕೋರ್ಟ್​ನಲ್ಲಿ ಇದ್ದ ಕಾರಣ ಹತ್ತು ವರ್ಷಗಳಿಂದ ಕಟ್ಟಡ ನಿರ್ಮಾಣ ನಿಲ್ಲಿಸಲಾಗಿತ್ತು. ಇದೀಗ ಈ ಕಟ್ಟಡದಲ್ಲಿ ಮತ್ತೆ ಕೆಲಸ ಶುರು ಮಾಡಬೇಕು ಎಂದು ಮಾಲೀಕ ಸೇರಿದಂತೆ ಕಾರ್ಮಿಕರು ಸ್ವಚ್ಛ ಮಾಡಲು ಬಂದಿರುವಾಗ ಈ ಅಸ್ತಿಪಂಜರ ಪತ್ತೆಯಾಗಿದೆ.

ಬೆಂಗಳೂರು: ಬೆಂಗಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ತಿಪಂಜರ ಪತ್ತೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Oct 04, 2025 | 2:27 PM

Share

ಬೆಂಗಳೂರು, ಅ.4: ಬೆಂಗಳೂರಿನಲ್ಲಿ (Bengaluru skeleton) ಅಚ್ಚರಿಯ ಘಟನೆಯೊಂದು ನಡೆದಿದೆ. ನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ತಿಪಂಜರಯೊಂದು ಪತ್ತೆಯಾಗಿದೆ. ಇದೀಗ ಈ ಘಟನೆ ನಗರದಲ್ಲಿ ಆತಂಕ ಸೃಷ್ಟಿಸಿದೆ. ಕೊತ್ತನೂರು ಬಳಿಯಲ್ಲಿರುವ ಅಪಾರ್ಟ್ಮೆಂಟ್​​ನಲ್ಲಿ ಈ ಅಸ್ತಿಪಂಜರ ಪತ್ತೆಯಾಗಿದ್ದು, ಈ ಅಸ್ತಿಪಂಜರ 7-8 ತಿಂಗಳ ಹಿಂದೆ ಸಾವನ್ನಪ್ಪಿರುವ ವ್ಯಕ್ತಿಯದ್ದು ಎಂದು ಹೇಳಲಾಗಿದೆ. ಕಟ್ಟಡಕ್ಕೆ ಸಂಬಂಧಿಸಿದ ಪ್ರಕರಣವೊಂದು ಕೋರ್ಟ್​​​ನಲ್ಲಿದ್ದ ಕಾರಣ ಕಳೆದ 10ವರ್ಷದಿಂದ ಇಲ್ಲಿ ಯಾವುದೇ ರೀತಿಯ ನಿರ್ಮಾಣ ಕೆಲಸಗಳು ನಡೆದಿರಲಿಲ್ಲ. ಹಾಗಾಗಿ ಈ ಕಟ್ಟಡ ಪಾಳು ಬಿದ್ದಿತ್ತು. ಇಲ್ಲಿ ಅನೇಕ ಅಕ್ರಮ ಚಟುವಟಿಕೆಗಳು ಕೂಡ ನಡೆಯುತ್ತಿತ್ತು ಎಂದು ಹೇಳಲಾಗಿದೆ.

ಹತ್ತು ವರ್ಷಗಳಿಂದ ಕಟ್ಟಡ ನಿರ್ಮಾಣ ಸ್ಥಗಿತಗೊಂಡಿತ್ತು. ಇದೀಗ ನೆನ್ನೆ ಶುಕ್ರವಾರ (ಅ.3)ದಂದು ಮತ್ತೆ ಕೆಲಸ ಶುರು ಮಾಡಬೇಕೆಂದು ಕಟ್ಟಡ ಬಳಿ ಬಂದು ಸ್ವಚ್ಛ ಮಾಡಬೇಕು ಮಾಲೀಕರು ಬಂದಿದ್ದಾರೆ. ಈ ವೇಳೆ ಈ ಅಸ್ತಿಪಂಜರ ಸಿಕ್ಕಿದೆ. ಮಾಲೀಕ ಸೇರಿದಂತೆ ಕಾರ್ಮಿಕರುಈ ಸ್ಥಳಕ್ಕೆ ಬಂದು ಸ್ಛಚ್ಛ ಮಾಡುತ್ತಿರುವಾಗ ಈ ಅಸ್ತಿಪಂಜರ ಸಿಕ್ಕಿದೆ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ. ಇನ್ನು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಜತೆಗೆ ಸೋಕೋ ಟೀಂ ಕೂಡ ಅಸ್ತಿಪಂಜರ ಇರುವ ಸ್ಥಳಕ್ಕೆ ಬಂದಿದೆ. ಇದೀಗ ಪೊಲೀಸರು  ಈ ಬಗ್ಗೆ ತನಿಖೆಯನ್ನು ನಡೆಸಿದ್ದಾರೆ.

ಇದನ್ನೂ ಓದಿ: ಜಾತಿಗಣತಿ ಹೆಸರಿನಲ್ಲಿ ಬಂದು ಮಹಿಳೆ ಮೇಲೆ ಹಲ್ಲೆ: ದರೋಡೆಗೆ ಯತ್ನ?

ಸೋಕೋ ಟೀಂ ಅಸ್ತಿಪಂಜರ ಪರಿಶೀಲನೆ ನಡೆಸಿ FSLಗೆ ಕಳುಹಿಸಿದೆ. ಇದನ್ನು ಕೊತ್ತನೂರು ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊತ್ತನೂರು ಬಳಿಯ ಅಪಾರ್ಟ್​​ಮೆಂಟ್​ನ ನಾಲ್ಕನೇ ಮಹಡಿಯಲ್ಲಿ ಪತ್ತೆಯಾಗಿರುವ ಈ ಅಸ್ತಿಪಂಜರವನ್ನು ಇದು ಸುಮಾರು 35 ರಿಂದ 40 ವರ್ಷ ವಯಸ್ಸಿನ ಗಂಡಸಿನದ್ದು ಎಂದು ಹೇಳಲಾಗಿದೆ. ಪ್ಯಾಂಟ್ ಹಾಗೂ ಶರ್ಟ್ ಧರಿಸಿ ಮಲಗಿದ್ದ ಸ್ಥಿತಿಯಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು, ಈ ಸಾವಿಗೆ ಹಾಗೂ ಇದು ಯಾರ ಅಸ್ತಿಪಂಜರ ಎಂದು ಪತ್ತೆ ಮಾಡಬೇಕಿದೆ. ಈ ಬಗ್ಗೆ ಕೊತ್ತನೂರು ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುವುದಾಗಿ ಹೇಳಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Sat, 4 October 25

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ