AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬೆಂಕಿ ಅವಘಡ ಪ್ರಕರಣ: ಗಾಯಾಳುಗಳ ಚಿಕಿತ್ಸೆಗೆ ಚರ್ಮದ ಕೊರತೆ

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬೆಂಕಿ ಅವಘಡಗಳಿಂದ ಸುಟ್ಟಗಾಯಗಳ ಪ್ರಕರಣಗಳು ಹೆಚ್ಚಾಗಿವೆ. ವಿಕ್ಟೋರಿಯಾ ಆಸ್ಪತ್ರೆಯ ಚರ್ಮ ಬ್ಯಾಂಕ್‌ನಲ್ಲಿ ಚರ್ಮದ ತೀವ್ರ ಕೊರತೆ ಉಂಟಾಗಿದೆ. ಚರ್ಮದಾನದ ಅರಿವು ಹೆಚ್ಚಿಸುವುದು ಮತ್ತು ದಾನಿಗಳ ಸಂಖ್ಯೆಯನ್ನು ಹೆಚ್ಚಿಸುವುದು ಅಗತ್ಯವಾಗಿದೆ. ಬೇಸಿಗೆಯ ಆರಂಭದಲ್ಲೇ ಈ ಕೊರತೆ ಆತಂಕಕಾರಿಯಾಗಿದೆ. ಚರ್ಮದಾನದ ಮಹತ್ವವನ್ನು ಜನರಿಗೆ ತಿಳಿಸುವುದು ಮುಖ್ಯ.

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬೆಂಕಿ ಅವಘಡ ಪ್ರಕರಣ: ಗಾಯಾಳುಗಳ ಚಿಕಿತ್ಸೆಗೆ ಚರ್ಮದ ಕೊರತೆ
ವಿಕ್ಟೋರಿಯಾ ಆಸ್ಪತ್ರೆ
Vinay Kashappanavar
| Edited By: |

Updated on: Jan 19, 2025 | 8:03 AM

Share

ಬೆಂಗಳೂರು, ಜನವರಿ 19: ಬೆಂಗಳೂರಿನಲ್ಲಿ (Bengaluru) ಇತ್ತಿಚಿಗೆ ಬೆಂಕಿ (Fire) ಅವಘಡಗಳು ಪ್ರಕರಣಗಳು ಹೆಚ್ಚುತ್ತಿದ್ದು ಚರ್ಮ ಸುಟ್ಟ ಗಾಯಾಳುಗಳ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ, ಸ್ಕಿನ್ ಬ್ಯಾಂಕ್​ನಲ್ಲಿ (Skin Bank) ಚರ್ಮಕ್ಕೆ ಬೇಡಿಕೆ ಹೆಚ್ಚಾಗಿದೆ. ಕಳೆದ ಕೆಲ ದಿನಗಳಿಂದ ಅತಿ ಹೆಚ್ಚು ಬೆಂಕಿ ಅವಘಡಗಳ ಸಂಭವಿಸುತ್ತಿದ್ದು, ಗಾಯಾಳುಗಳ ಚಿಕಿತ್ಸೆಗೆ ಚರ್ಮ ಸಿಗುತ್ತಿಲ್ಲ. ಇದರಿಂದ, ಚರ್ಚಮಕ್ಕೆ ಹೆಚ್ಚಿನ ಬೇಡಿಕೆ ಬಂದಿದೆ.

ವಿಕ್ಟೋರಿಯಾ ಆಸ್ಪತ್ರೆಯ ಸ್ಕಿನ್ ಬ್ಯಾಂಕ್​ನಲ್ಲಿಯೂ ಚರ್ಮದ ಅಭಾವ ಎದುರಾಗಿದ್ದು, ರೋಗಿಗಳಿಗೆ ಚಿಕಿತ್ಸೆ ನೀಡಲು ಚರ್ಮ ಸಿಗದೆ ವೈದ್ಯರು ಪರದಾಡುತ್ತಿದ್ದಾರೆ. ವಿಕ್ಟೋರಿಯಾದ ಸ್ಕಿನ್ ಬ್ಯಾಂಕ್​ನಲ್ಲಿ ಶೆ. 40 ರಷ್ಟು ಚರ್ಮದ ಕೊರತೆ ಇದೆ. ಚರ್ಮ ಸುಟ್ಟರೆ, ಸಾವಿರದ ಎಂಎಂ ನಷ್ಟು ಚರ್ಮದ ಅಗತ್ಯವಿರುತ್ತದೆ. ಹೊಸ ಚರ್ಮ ಬರುವವರೆಗೂ ಚಿಕಿತ್ಸೆಯ ಅಗತ್ಯವಿರುತ್ತೆ. ಈ ವೇಳೆ ಸ್ಕಿನ್ ಬ್ಯಾಂಕ್​ನಲ್ಲಿ ಬೇಕಾದಷ್ಟು ಚರ್ಮ ಸಿಗುತ್ತಿಲ್ಲ. ಪ್ರತಿಯೊಂದು ಪ್ರಕರಣದ ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಇದರಿಂದ, ಸ್ಕಿನ್ ಕೊರತೆ ಎದುರಾಗಿದ್ದು, ಜನರಿಗೆ ಸರಿಯಾದ ವೇಳೆಗೆ ಚರ್ಮ ಸಿಗುತ್ತಿಲ್ಲ.

ರಾಜಧಾನಿ ಸೇರಿದ್ದಂತೆ ರಾಜ್ಯದಲ್ಲಿ ಅತಿಯಾದ ಸಿಲಿಂಡರ್ ಸ್ಟೋಟ, ಬೆಂಕಿ ಅವಘಡ ಪ್ರಕರಣದಿಂದ ರೋಗಿಗಳ ಚಿಕಿತ್ಸೆಗೆ ಸಮರ್ಪಕವಾಗಿ ಚರ್ಮ ಸಿಗದೆ ವೈದ್ಯರಿಗೆ ಆತಂಕ ತಂದಿದೆ. ಬೇಸಿಗೆ ಆರಂಭದಲ್ಲೇ ಚರ್ಮದ ಕೊರತೆ ಎದುರಾಗಿರುವುದು ಆತಂಕವನ್ನ ಮತ್ತಷ್ಟು ಹೆಚ್ಚಿಸಿದೆ. ಬೆಂಕಿ ಅವಘಡಗಳು, ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ನೀಡಲು ಚರ್ಮದ ಕೊರತೆ ಇದೆ ಅಂತ ಸ್ಕಿನ್ ಬ್ಯಾಂಕ್ ವೈದ್ಯರ ತಂಡ ಕಳವಳ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಬೆಂಗಳೂರು ಜನರಿಗೆ ಸಿಹಿ ಸುದ್ದಿ: 2 ಹೊಸ ರೈಲು ನಿಲ್ದಾಣ ನಿರ್ಮಾಣ!

2016ರಲ್ಲಿ ಆರಂಭವಾದ ರಾಜ್ಯದ ಪ್ರಪ್ರಥಮ ಚರ್ಮನಿಧಿ ಬ್ಯಾಂಕ್ ವಿಕ್ಟೋರಿಯಾದಲ್ಲಿ ಸ್ಥಾಪನೆ ಮಾಡಲಾಗಿದ್ದು, ಇದೀಗ ರೋಗಿಗಳಿಗೆ ಸಾಕಾಗುವಷ್ಟು ಚರ್ಮ ಸಂಗ್ರಹ ಇಲ್ಲದೆ ಇರುವುದು ವೈದ್ಯರಿಗೆ ಆತಂಕ ತಂದಿದೆ. ಇತ್ತ ಚರ್ಮದಾನಿಗಳ ಸಂಖ್ಯೆ ಕೂಡ ಇಳಿಕೆಯಾಗುತ್ತಿದ್ದು, ಸಂಗ್ರಹಿಸಿದ ಚರ್ಮವನ್ನ ಬಳಕೆಗೆ ಯೋಗ್ಯ ಮಾಡುವ ಪ್ರಕ್ರಿಯೆಗೆ ಸಮಯ ಹಿಡಿಯುತ್ತಿರುವುದು ಚರ್ಮದ ಕೊರತೆಗೆ ಕಾರಣವಾಗುತ್ತಿದೆ. ಇನ್ನು, ವ್ಯಕ್ತಿ ಸತ್ತ ಬಳಿಕ 6 ಗಂಟೆಯ ಒಳಗೆ ಚರ್ಮ ಸಂಗ್ರಹ ಮಾಡಬೇಕಿದ್ದು, ಈ ವೇಳೆ ಹಲವರಿಗೆ ಚರ್ಮದಾನದ ಬಗ್ಗೆ ಅರಿವು ಇಲ್ಲದೇ ಇರುವುದು ಕೂಡ ಚರ್ಮದ ಅಭಾವಕ್ಕೆ ಕಾರಣವಾಗಿದೆ.

ಯಾರೆಲ್ಲಾ ಚರ್ಮದಾನ ಮಾಡಬಹುದು?

  • 18 ವರ್ಷ ಮೇಲ್ಪಟ್ಟ ವ್ಯಕ್ತಿಗಳು ಸತ್ತ ಬಳಿಕ ಚರ್ಮ ದಾನ ಮಾಡಬಹುದು
  • HIV, HBSAG, ಚರ್ಮದ ಕ್ಯಾನ್ಸರ್ ಇಲ್ಲದವರು ನೀಡಬಹುದು
  • ಯಾವುದೇ ರೀತಿ ಚರ್ಮ ಕಾಯಿಲೆ ಇಲ್ಲದವರು ದಾನಿಯಾಗಬಹುದು

ಒಟ್ಟಿನಲ್ಲಿ ಜನರು ಜಾಗೃತರಾಗಬೇಕಿದೆ. ಸತ್ತು ಮಣ್ಣು ಸೇರುವ ದೇಹ, ಬದುಕಿರುವವರ ಬಾಳಿಗೆ ಬೆಳಕು ನೀಡಲಿ ಚರ್ಮ ದಾನ ಮಾಡುವ ಕಡೆ ಜನರು ಮನಸ್ಸು ಮಾಡಬೇಕಿದೆ ಎಂಬುವುದೇ ವೈದ್ಯರ ಆಶಯವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ