ಬೆಂಗಳೂರು: ಎಸ್​ಎಂವಿಟಿ ರೈಲು ನಿಲ್ದಾಣದಲ್ಲಿ ಹೊಸ ನಿಯಮ ಜಾರಿ, ಪ್ರಯಾಣಿಕರಿಗೆ ಸಂಕಷ್ಟ

ಜನರು ರೈಲಿನಲ್ಲಿ ಪ್ರಯಾಣ ಮಾಡುವುದು ಟಿಕೆಟ್ ದರ ಕಡಿಮೆ ಇರುತ್ತದೆ, ಆರಾಮವಾಗಿ ಗಮ್ಯ ತಲುಪಬಹುದು ಎಂದು. ಆದರೆ ಇದೀಗ ರೈಲ್ವೆ ಇಲಾಖೆ ಬೆಂಗಳೂರಿನ ಎಸ್ಎಂವಿಟಿ ರೈಲ್ವೆ ಸ್ಟೇಷನ್​ಗೆ ಬಂದು ಹೋಗುವ ವಾಹನಗಳಿಗೆ ಪಾರ್ಕಿಂಗ್ ಚಾರ್ಜ್ ವಿಧಿಸಲು ಮುಂದಾಗಿದೆ. ಇದಕ್ಕೆ ವಾಹನ ಸವಾರರು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು: ಎಸ್​ಎಂವಿಟಿ ರೈಲು ನಿಲ್ದಾಣದಲ್ಲಿ ಹೊಸ ನಿಯಮ ಜಾರಿ, ಪ್ರಯಾಣಿಕರಿಗೆ ಸಂಕಷ್ಟ
ಎಸ್​ಎಂವಿಟಿ ರೈಲು ನಿಲ್ದಾಣ
Follow us
| Updated By: ಗಣಪತಿ ಶರ್ಮ

Updated on: Sep 10, 2024 | 6:58 AM

ಬೆಂಗಳೂರು, ಸೆಪ್ಟೆಂಬರ್ 10: ಬೆಂಗಳೂರಿನ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣಕ್ಕೆ ಪ್ರಯಾಣಿಕರನ್ನು ಇಳಿಸಲು ಮತ್ತು ಕರೆದುಕೊಂಡು ಹೋಗಲು ಬರುವ ವಾಹನಗಳು ಸೋಮವಾರದಿಂದ ಪಾರ್ಕಿಂಗ್ ಶುಲ್ಕ ಕಟ್ಟಲೇಬೇಕಾಗಿದೆ. ಸರ್​​​ಎಂ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣದಲ್ಲಿ ಇದೀಗ ಹೊಸ ನಿಯಮ ಜಾರಿಯಾಗಿದೆ. ನಿಲ್ದಾಣದ ಆವರಣದಲ್ಲಿ ಹತ್ತು ನಿಮಿಷಕ್ಕಿಂತ ಹೆಚ್ಚು ಕಾಲ ವಾಹನಗಳು ಇದ್ದರೆ ಪಾರ್ಕಿಂಗ್ ಹಣ ನೀಡಬೇಕು. ಹತ್ತು ನಿಮಿಷಗಳ ಒಳಗೆ ಪಿಕ್ ಅಪ್, ಡ್ರಾಪ್ ಮಾಡಿ ಹೋದರೆ ಯಾವುದೇ ಶುಲ್ಕವಿಲ್ಲ. ಹನ್ನೊಂದು ನಿಮಿಷ ಆದರೂ ಹಣ ಪಾವತಿ ಮಾಡಲೇಬೇಕು.

ಒಂದು ವೇಳೆ ಸ್ಟೇಷನ್ ಒಳಗೆ ಬಂದು ಹತ್ತು ನಿಮಿಷಕ್ಕಿಂತ ಹೆಚ್ಚಿನ ಸಮಯ ಆಗುತ್ತದೆ ಎಂದಾದರೆ, ಅಂತಹ ವಾಹನ ಮಾಲೀಕರು ಸ್ಟೇಷನ್​ನಲ್ಲಿರುವ ಪಾರ್ಕಿಂಗ್ ಸ್ಟ್ಯಾಂಡ್​​ನಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಬಹುದು.

ರೈಲ್ವೆ ಸಚಿವ ಸೋಮಣ್ಣ ಏನಂತಾರೆ?

ಈ ಹೊಸ ನಿಯಮದ ಬಗ್ಗೆ ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಪ್ರಶ್ನಿಸಿದಾಗ, ರೈಲ್ವೆ ಅಧಿಕಾರಿಗಳ ಜೊತೆಗೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಎಸ್​​ಎಂವಿಟಿಯಲ್ಲಿ ಪಾರ್ಕಿಂಗ್ ಶುಲ್ಕ ಎಷ್ಟು?

  • ಹತ್ತು ನಿಮಿಷದಿಂದ ಇಪ್ಪತ್ತು ನಿಮಿಷಗಳ ವರೆಗೆ ದ್ವಿಚಕ್ರ ವಾಹನಗಳಿಗೆ ಒಂದು ವಾಹನಕ್ಕೆ 40 ರೂಪಾಯಿ. ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳಿಗೆ 50 ರೂಪಾಯಿ ನಿಗದಿಪಡಿಸಲಾಗಿದೆ.
  • 20 ರಿಂದ 30 ನಿಮಿಷಕ್ಕೆ ದ್ವಿಚಕ್ರ ವಾಹನಗಳಿಗೆ ಒಂದು ವಾಹನಕ್ಕೆ 100 ರೂಪಾಯಿ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳಿಗೆ 200 ರೂಪಾಯಿ ಶುಲ್ಕವಿದೆ.
  • 30 ನಿಮಿಷಗಳ ನಂತರ ದ್ವಿಚಕ್ರ ವಾಹನಗಳಿಗೆ ಒಂದು ವಾಹನಕ್ಕೆ 250 ರೂಪಾಯಿ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳಿಗೆ 500 ರೂಪಾಯಿ ಶುಲ್ಕವಿದೆ.

ದುಬಾರಿ ಪಾರ್ಕಿಂಗ್ ಶುಲ್ಕ

ರೈಲ್ವೆ ಇಲಾಖೆಯ ಹೊಸ ನಿಯಮಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರಿಯಾದ ಸಮಯಕ್ಕೆ ರೈಲುಗಳು ಬರುವುದಿಲ್ಲ. ಆ ಸಮಯದಲ್ಲಿ ತಂದೆ, ತಾಯಿಯನ್ನು ಕುಟುಂಬಸ್ಥರನ್ನು ಪಿಕ್ ಅಪ್ ಮಾಡಲು ಬಂದಿರುತ್ತೇವೆ. ಅದಕ್ಕೆ ಹಣ ಪಾವತಿ ಮಾಡಬೇಕು ಅಂದರೆ ಹೇಗೆ? ಅದೂ ಕೂಡ ಇಷ್ಟೊಂದು ದುಬಾರಿ ಶುಲ್ಕ ವಿಧಿಸಿದರೆ ಹೇಗೆ? ಇಲ್ಲಿ ದುಡಿದ ದುಡ್ಡನ್ನೆಲ್ಲ ಇವರಿಗೆ ನೀಡಿದರೆ ನಾವು ಜೀವನ ಮಾಡುವುದು ಹೇಗೆ ಎಂದು ಆಟೋ ಚಾಲಕರು ಮತ್ತು ಬೈಕ್ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Bengaluru SMVT Railway station Introduced high Parking Fees, waiting time is more than ten minutes, the fee is to be paid

ರೈಲ್ವೆ ಅಧಿಕಾರಿಗಳು ಹೇಳುವುದೇನು?

ವಾಹನ ಸವಾರರು ಪ್ರಯಾಣಿಕರನ್ನು, ತಮ್ಮವರನ್ನು ಪಿಕ್ ಅಪ್, ಡ್ರಾಪ್ ಮಾಡಲು ಬರುವ ವೇಳೆ ರೈಲ್ವೆ ಸ್ಟೇಷನ್​ನಲ್ಲಿ ಬೇಕಾಬಿಟ್ಟಿ ವಾಹನಗಳನ್ನು ಪಾರ್ಕ್ ಮಾಡಿ ಹೋಗಿ ಬಿಡುತ್ತಾರೆ. ಇದರಿಂದ ಪ್ರಯಾಣಿಕರಿಗೆ ತೊಂದರೆ ಆಗುತ್ತದೆ. ಅದಕ್ಕೆ ಈ ನಿಯಮ ‌ಜಾರಿಗೆ ತರಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಕಂಟೋನ್ಮೆಂಟ್​ ರೈಲು ನಿಲ್ದಾಣದ 2 ಪ್ಲಾಟ್​ಫಾರ್ಮ್ 92 ದಿನ ಬಂದ್: 44 ರೈಲುಗಳಿಗಿಲ್ಲ ನಿಲುಗಡೆ, ಇಲ್ಲಿದೆ ವಿವರ

ವಾಹನ ಸವಾರರು ಮಾತ್ರ ಈ ರೀತಿಯ ನಿಯಮ ಸರಿಯಲ್ಲ. ಇದರಿಂದ ತೊಂದರೆ ಆಗುತ್ತದೆ. ಹಣ ಪಾವತಿ ‌ಮಾಡಲು ಆಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ