Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸೌತ್ ವೆಸ್ಟರ್ನ್ ರೈಲು ವಿಭಾಗ ನವೆಂಬರ್ ತಿಂಗಳಲ್ಲಿ ಸಂಗ್ರಹಿಸಿದ ದಂಡದ ಮೊತ್ತ 2 ಕೋಟಿ ರೂ.! ಇಲ್ಲಿದೆ ವಿವರ

Indian Railway: ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 6,910 ಪ್ರಕರಣ ದಾಖಲಿಸಿದ್ದ ಇಲಾಖೆ 44,93,765 ರೂಪಾಯಿ ದಂಡ ಸಂಗ್ರಹಿಸಿತ್ತು. ಈ ಬಾರಿ, ಏಪ್ರೀಲ್ ಬಳಿಕ ನವೆಂಬರ್ ತಿಂಗಳ ವರೆಗೆ ಇಲಾಖೆ ಒಟ್ಟು 1,66,983 ಪ್ರಕರಣ ದಾಖಲು ಮಾಡಿ 9,33,42,980 ರೂಪಾಯಿ ದಂಡ ಸಂಗ್ರಹಿಸಿದೆ.

ಬೆಂಗಳೂರು ಸೌತ್ ವೆಸ್ಟರ್ನ್ ರೈಲು ವಿಭಾಗ ನವೆಂಬರ್ ತಿಂಗಳಲ್ಲಿ ಸಂಗ್ರಹಿಸಿದ ದಂಡದ ಮೊತ್ತ 2 ಕೋಟಿ ರೂ.! ಇಲ್ಲಿದೆ ವಿವರ
ಸಂಗ್ರಹ ಚಿತ್ರ
Follow us
TV9 Web
| Updated By: ganapathi bhat

Updated on: Dec 07, 2021 | 5:52 PM

ಬೆಂಗಳೂರು: ಇಲ್ಲಿನ ಸೌತ್ ವೆಸ್ಟರ್ನ್ ರೈಲು ವಿಭಾಗ ಟಿಕೆಟ್ ರಹಿತ ಪ್ರಯಾಣಕ್ಕೆ ಸಂಬಂಧಿಸಿ ನವೆಂಬರ್ ತಿಂಗಳು ಒಂದರಲ್ಲೇ ಒಟ್ಟು 38,479 ಪ್ರಕರಣಗಳನ್ನು ದಾಖಲಿಸಿದೆ. ಹಾಗೂ ಆ ಮೂಲಕ, 2,18,73,555 ರೂಪಾಯಿ ಮೊತ್ತದ ದಂಡ ಸಂಗ್ರಹಿಸಿದೆ. ಈ ಬಾರಿಯ ಹಣಕಾಸು ವರ್ಷದಲ್ಲಿ ಇದು ಮೊದಲ ಬಾರಿಗೆ ಈ ರೈಲ್ವೇ ವಿಭಾಗ 2 ಕೋಟಿಗೂ ಅಧಿಕ ದಂಡ ಸಂಗ್ರಹಿಸಿರುವುದಾಗಿದೆ.

ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 6,910 ಪ್ರಕರಣ ದಾಖಲಿಸಿದ್ದ ಇಲಾಖೆ 44,93,765 ರೂಪಾಯಿ ದಂಡ ಸಂಗ್ರಹಿಸಿತ್ತು. ಈ ಬಾರಿ, ಏಪ್ರೀಲ್ ಬಳಿಕ ನವೆಂಬರ್ ತಿಂಗಳ ವರೆಗೆ ಇಲಾಖೆ ಒಟ್ಟು 1,66,983 ಪ್ರಕರಣ ದಾಖಲು ಮಾಡಿ 9,33,42,980 ರೂಪಾಯಿ ದಂಡ ಸಂಗ್ರಹಿಸಿದೆ.

ರೈಲ್ವೇ ಆಕ್ಟ್ 1989 ರ ಸೆಕ್ಷನ್ 138 ರ ಪ್ರಕಾರ, ಅಗತ್ಯ ಟಿಕೆಟ್ ಅಥವಾ ಪಾಸ್ ಇಲ್ಲದೆ ಯಾವುದೇ ಪ್ರಯಾಣಿಕ ರೈಲಿನಲ್ಲಿ ಪ್ರಯಾಣಿಸುತ್ತಿರುವುದು ಅಪರಾಧ ಆಗಿದೆ. ಅದಕ್ಕೆ ಸುಮಾರು 250 ರೂಪಾಯಿಗಳಂತೆ ದಂಡ ಹಾಕಲಾಗುತ್ತದೆ. ಜೊತೆಗೆ, ಈ ಬಾರಿ ಮಾಸ್ಕ್ ಧರಿಸದ ಕಾರಣ 214 ಪ್ರಕರಣ ದಾಖಲಿಸಿಕೊಂಡು 57,750 ರೂಪಾಯಿ, ರೈಲು ನಿಲ್ದಾಣದಲ್ಲಿ ಧೂಮಪಾನ ಮಾಡಿರುವುದಕ್ಕೆ 3 ಪ್ರಕರಣ ದಾಖಲಿಸಿ 600 ರೂಪಾಯಿ ದಂಡ ಸಂಗ್ರಹಿಸಲಾಗಿದೆ. ರೈಲು ನಿಲ್ದಾಣಗಳಲ್ಲಿ ಕಸ ಹಾಕಿರುವುದಕ್ಕೆ 35 ಪ್ರಕರಣ ದಾಖಲಿಸಿ 9,200 ರೂಪಾಯಿ ದಂಡ ಸಂಗ್ರಹಿಸಲಾಗಿದೆ.

Railway Fine Collection details

ದಂಡದ ವಿವರ ಇಲ್ಲಿದೆ

ಇದನ್ನೂ ಓದಿ: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಯ ಸಾಧಕ ಬಾಧಕ ಬಗ್ಗೆ ಮೌಲ್ಯಮಾಪನಕ್ಕೆ ಹೈಕೋರ್ಟ್ ಸೂಚನೆ

ಇದನ್ನೂ ಓದಿ: Cyclone Jawad: ಜವಾದ್ ಚಂಡಮಾರುತದ ಭೀತಿ; ಕರ್ನಾಟಕದ 12 ರೈಲುಗಳ ಸೇವೆ ಸ್ಥಗಿತ

ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್