AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸೌತ್ ವೆಸ್ಟರ್ನ್ ರೈಲು ವಿಭಾಗ ನವೆಂಬರ್ ತಿಂಗಳಲ್ಲಿ ಸಂಗ್ರಹಿಸಿದ ದಂಡದ ಮೊತ್ತ 2 ಕೋಟಿ ರೂ.! ಇಲ್ಲಿದೆ ವಿವರ

Indian Railway: ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 6,910 ಪ್ರಕರಣ ದಾಖಲಿಸಿದ್ದ ಇಲಾಖೆ 44,93,765 ರೂಪಾಯಿ ದಂಡ ಸಂಗ್ರಹಿಸಿತ್ತು. ಈ ಬಾರಿ, ಏಪ್ರೀಲ್ ಬಳಿಕ ನವೆಂಬರ್ ತಿಂಗಳ ವರೆಗೆ ಇಲಾಖೆ ಒಟ್ಟು 1,66,983 ಪ್ರಕರಣ ದಾಖಲು ಮಾಡಿ 9,33,42,980 ರೂಪಾಯಿ ದಂಡ ಸಂಗ್ರಹಿಸಿದೆ.

ಬೆಂಗಳೂರು ಸೌತ್ ವೆಸ್ಟರ್ನ್ ರೈಲು ವಿಭಾಗ ನವೆಂಬರ್ ತಿಂಗಳಲ್ಲಿ ಸಂಗ್ರಹಿಸಿದ ದಂಡದ ಮೊತ್ತ 2 ಕೋಟಿ ರೂ.! ಇಲ್ಲಿದೆ ವಿವರ
ಸಂಗ್ರಹ ಚಿತ್ರ
TV9 Web
| Edited By: |

Updated on: Dec 07, 2021 | 5:52 PM

Share

ಬೆಂಗಳೂರು: ಇಲ್ಲಿನ ಸೌತ್ ವೆಸ್ಟರ್ನ್ ರೈಲು ವಿಭಾಗ ಟಿಕೆಟ್ ರಹಿತ ಪ್ರಯಾಣಕ್ಕೆ ಸಂಬಂಧಿಸಿ ನವೆಂಬರ್ ತಿಂಗಳು ಒಂದರಲ್ಲೇ ಒಟ್ಟು 38,479 ಪ್ರಕರಣಗಳನ್ನು ದಾಖಲಿಸಿದೆ. ಹಾಗೂ ಆ ಮೂಲಕ, 2,18,73,555 ರೂಪಾಯಿ ಮೊತ್ತದ ದಂಡ ಸಂಗ್ರಹಿಸಿದೆ. ಈ ಬಾರಿಯ ಹಣಕಾಸು ವರ್ಷದಲ್ಲಿ ಇದು ಮೊದಲ ಬಾರಿಗೆ ಈ ರೈಲ್ವೇ ವಿಭಾಗ 2 ಕೋಟಿಗೂ ಅಧಿಕ ದಂಡ ಸಂಗ್ರಹಿಸಿರುವುದಾಗಿದೆ.

ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 6,910 ಪ್ರಕರಣ ದಾಖಲಿಸಿದ್ದ ಇಲಾಖೆ 44,93,765 ರೂಪಾಯಿ ದಂಡ ಸಂಗ್ರಹಿಸಿತ್ತು. ಈ ಬಾರಿ, ಏಪ್ರೀಲ್ ಬಳಿಕ ನವೆಂಬರ್ ತಿಂಗಳ ವರೆಗೆ ಇಲಾಖೆ ಒಟ್ಟು 1,66,983 ಪ್ರಕರಣ ದಾಖಲು ಮಾಡಿ 9,33,42,980 ರೂಪಾಯಿ ದಂಡ ಸಂಗ್ರಹಿಸಿದೆ.

ರೈಲ್ವೇ ಆಕ್ಟ್ 1989 ರ ಸೆಕ್ಷನ್ 138 ರ ಪ್ರಕಾರ, ಅಗತ್ಯ ಟಿಕೆಟ್ ಅಥವಾ ಪಾಸ್ ಇಲ್ಲದೆ ಯಾವುದೇ ಪ್ರಯಾಣಿಕ ರೈಲಿನಲ್ಲಿ ಪ್ರಯಾಣಿಸುತ್ತಿರುವುದು ಅಪರಾಧ ಆಗಿದೆ. ಅದಕ್ಕೆ ಸುಮಾರು 250 ರೂಪಾಯಿಗಳಂತೆ ದಂಡ ಹಾಕಲಾಗುತ್ತದೆ. ಜೊತೆಗೆ, ಈ ಬಾರಿ ಮಾಸ್ಕ್ ಧರಿಸದ ಕಾರಣ 214 ಪ್ರಕರಣ ದಾಖಲಿಸಿಕೊಂಡು 57,750 ರೂಪಾಯಿ, ರೈಲು ನಿಲ್ದಾಣದಲ್ಲಿ ಧೂಮಪಾನ ಮಾಡಿರುವುದಕ್ಕೆ 3 ಪ್ರಕರಣ ದಾಖಲಿಸಿ 600 ರೂಪಾಯಿ ದಂಡ ಸಂಗ್ರಹಿಸಲಾಗಿದೆ. ರೈಲು ನಿಲ್ದಾಣಗಳಲ್ಲಿ ಕಸ ಹಾಕಿರುವುದಕ್ಕೆ 35 ಪ್ರಕರಣ ದಾಖಲಿಸಿ 9,200 ರೂಪಾಯಿ ದಂಡ ಸಂಗ್ರಹಿಸಲಾಗಿದೆ.

Railway Fine Collection details

ದಂಡದ ವಿವರ ಇಲ್ಲಿದೆ

ಇದನ್ನೂ ಓದಿ: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಯ ಸಾಧಕ ಬಾಧಕ ಬಗ್ಗೆ ಮೌಲ್ಯಮಾಪನಕ್ಕೆ ಹೈಕೋರ್ಟ್ ಸೂಚನೆ

ಇದನ್ನೂ ಓದಿ: Cyclone Jawad: ಜವಾದ್ ಚಂಡಮಾರುತದ ಭೀತಿ; ಕರ್ನಾಟಕದ 12 ರೈಲುಗಳ ಸೇವೆ ಸ್ಥಗಿತ

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ