AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸೌತ್ ವೆಸ್ಟರ್ನ್ ರೈಲು ವಿಭಾಗ ನವೆಂಬರ್ ತಿಂಗಳಲ್ಲಿ ಸಂಗ್ರಹಿಸಿದ ದಂಡದ ಮೊತ್ತ 2 ಕೋಟಿ ರೂ.! ಇಲ್ಲಿದೆ ವಿವರ

Indian Railway: ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 6,910 ಪ್ರಕರಣ ದಾಖಲಿಸಿದ್ದ ಇಲಾಖೆ 44,93,765 ರೂಪಾಯಿ ದಂಡ ಸಂಗ್ರಹಿಸಿತ್ತು. ಈ ಬಾರಿ, ಏಪ್ರೀಲ್ ಬಳಿಕ ನವೆಂಬರ್ ತಿಂಗಳ ವರೆಗೆ ಇಲಾಖೆ ಒಟ್ಟು 1,66,983 ಪ್ರಕರಣ ದಾಖಲು ಮಾಡಿ 9,33,42,980 ರೂಪಾಯಿ ದಂಡ ಸಂಗ್ರಹಿಸಿದೆ.

ಬೆಂಗಳೂರು ಸೌತ್ ವೆಸ್ಟರ್ನ್ ರೈಲು ವಿಭಾಗ ನವೆಂಬರ್ ತಿಂಗಳಲ್ಲಿ ಸಂಗ್ರಹಿಸಿದ ದಂಡದ ಮೊತ್ತ 2 ಕೋಟಿ ರೂ.! ಇಲ್ಲಿದೆ ವಿವರ
ಸಂಗ್ರಹ ಚಿತ್ರ
TV9 Web
| Edited By: |

Updated on: Dec 07, 2021 | 5:52 PM

Share

ಬೆಂಗಳೂರು: ಇಲ್ಲಿನ ಸೌತ್ ವೆಸ್ಟರ್ನ್ ರೈಲು ವಿಭಾಗ ಟಿಕೆಟ್ ರಹಿತ ಪ್ರಯಾಣಕ್ಕೆ ಸಂಬಂಧಿಸಿ ನವೆಂಬರ್ ತಿಂಗಳು ಒಂದರಲ್ಲೇ ಒಟ್ಟು 38,479 ಪ್ರಕರಣಗಳನ್ನು ದಾಖಲಿಸಿದೆ. ಹಾಗೂ ಆ ಮೂಲಕ, 2,18,73,555 ರೂಪಾಯಿ ಮೊತ್ತದ ದಂಡ ಸಂಗ್ರಹಿಸಿದೆ. ಈ ಬಾರಿಯ ಹಣಕಾಸು ವರ್ಷದಲ್ಲಿ ಇದು ಮೊದಲ ಬಾರಿಗೆ ಈ ರೈಲ್ವೇ ವಿಭಾಗ 2 ಕೋಟಿಗೂ ಅಧಿಕ ದಂಡ ಸಂಗ್ರಹಿಸಿರುವುದಾಗಿದೆ.

ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 6,910 ಪ್ರಕರಣ ದಾಖಲಿಸಿದ್ದ ಇಲಾಖೆ 44,93,765 ರೂಪಾಯಿ ದಂಡ ಸಂಗ್ರಹಿಸಿತ್ತು. ಈ ಬಾರಿ, ಏಪ್ರೀಲ್ ಬಳಿಕ ನವೆಂಬರ್ ತಿಂಗಳ ವರೆಗೆ ಇಲಾಖೆ ಒಟ್ಟು 1,66,983 ಪ್ರಕರಣ ದಾಖಲು ಮಾಡಿ 9,33,42,980 ರೂಪಾಯಿ ದಂಡ ಸಂಗ್ರಹಿಸಿದೆ.

ರೈಲ್ವೇ ಆಕ್ಟ್ 1989 ರ ಸೆಕ್ಷನ್ 138 ರ ಪ್ರಕಾರ, ಅಗತ್ಯ ಟಿಕೆಟ್ ಅಥವಾ ಪಾಸ್ ಇಲ್ಲದೆ ಯಾವುದೇ ಪ್ರಯಾಣಿಕ ರೈಲಿನಲ್ಲಿ ಪ್ರಯಾಣಿಸುತ್ತಿರುವುದು ಅಪರಾಧ ಆಗಿದೆ. ಅದಕ್ಕೆ ಸುಮಾರು 250 ರೂಪಾಯಿಗಳಂತೆ ದಂಡ ಹಾಕಲಾಗುತ್ತದೆ. ಜೊತೆಗೆ, ಈ ಬಾರಿ ಮಾಸ್ಕ್ ಧರಿಸದ ಕಾರಣ 214 ಪ್ರಕರಣ ದಾಖಲಿಸಿಕೊಂಡು 57,750 ರೂಪಾಯಿ, ರೈಲು ನಿಲ್ದಾಣದಲ್ಲಿ ಧೂಮಪಾನ ಮಾಡಿರುವುದಕ್ಕೆ 3 ಪ್ರಕರಣ ದಾಖಲಿಸಿ 600 ರೂಪಾಯಿ ದಂಡ ಸಂಗ್ರಹಿಸಲಾಗಿದೆ. ರೈಲು ನಿಲ್ದಾಣಗಳಲ್ಲಿ ಕಸ ಹಾಕಿರುವುದಕ್ಕೆ 35 ಪ್ರಕರಣ ದಾಖಲಿಸಿ 9,200 ರೂಪಾಯಿ ದಂಡ ಸಂಗ್ರಹಿಸಲಾಗಿದೆ.

Railway Fine Collection details

ದಂಡದ ವಿವರ ಇಲ್ಲಿದೆ

ಇದನ್ನೂ ಓದಿ: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಯ ಸಾಧಕ ಬಾಧಕ ಬಗ್ಗೆ ಮೌಲ್ಯಮಾಪನಕ್ಕೆ ಹೈಕೋರ್ಟ್ ಸೂಚನೆ

ಇದನ್ನೂ ಓದಿ: Cyclone Jawad: ಜವಾದ್ ಚಂಡಮಾರುತದ ಭೀತಿ; ಕರ್ನಾಟಕದ 12 ರೈಲುಗಳ ಸೇವೆ ಸ್ಥಗಿತ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್