AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ 3 ದಿನ ಬೆಂಗಳೂರಿನಲ್ಲಿ ಸ್ಪೇಸ್​ ಎಕ್ಸ್​​ಪೋ 2024 ಸಮ್ಮೇಳನ

ಎಂಟನೇ ಆವೃತ್ತಿಯ ಅಂತರಾಷ್ಟ್ರೀಯ ಬೆಂಗಳೂರು ಸ್ಪೇಸ್​ ಎಕ್ಸ್​​ಪೋ 2024 ಸಮ್ಮೇಳನ ಇಂದಿನಿಂದ ಆರಂಭವಾಗಿದೆ. ಸಮ್ಮೇಳನ ಸೆಪ್ಟೆಂಬರ್​ 18 ರಿಂದ 20ರವರೆಗೆ ನಡೆಯಲಿದೆ. ಮೂರು ದಿನಗಳ ಈ ಸಮ್ಮೇಳನದಲ್ಲಿ ವಿವಿಧ ದೇಶಗಳ 250ಕ್ಕೂ ಅಧಿಕ ಗಣ್ಯರು ಮತ್ತು ಕಂಪನಿಗಳು ಭಾಗಿಯಾಗಲಿವೆ.

ಇಂದಿನಿಂದ 3 ದಿನ ಬೆಂಗಳೂರಿನಲ್ಲಿ ಸ್ಪೇಸ್​ ಎಕ್ಸ್​​ಪೋ 2024 ಸಮ್ಮೇಳನ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Sep 18, 2024 | 11:08 AM

Share

ಬೆಂಗಳೂರು, ಸೆಪ್ಟೆಂಬರ್​ 18: ಎಂಟನೇ ಆವೃತ್ತಿಯ ಅಂತರಾಷ್ಟ್ರೀಯ ಬೆಂಗಳೂರು ಸ್ಪೇಸ್​ ಎಕ್ಸ್​​ಪೋ 2024 (Bengaluru Space Expo -2024) ಸಮ್ಮೇಳನ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದೆ. ಈ ಸಮ್ಮೇಳನದಲ್ಲಿ ವಿವಿಧ ದೇಶಗಳ 250ಕ್ಕೂ ಅಧಿಕ ಗಣ್ಯರು ಮತ್ತು ಕಂಪನಿಗಳು ಭಾಗಿಯಾಗಲಿವೆ. ಈ ಅಂತರಾಷ್ಟ್ರೀಯ ಸಮ್ಮೇಳನವನ್ನು ಭಾರತೀಯ ಕೈಗಾರಿಕೆಗಳ ಒಕ್ಕೂಟ (CII) ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಆಯೋಜಿಸಿದೆ.

ಬಾಹ್ಯಾಕಾಶ ತಂತ್ರಜ್ಞಾನದ ವಿಚಾರವಾಗಿ ಚರ್ಚಿಸಲು ಮತ್ತು ಹೊಸದನ್ನು ಅನ್ವೇಷಿಸಲು ಸಂಶೋಧಕರಿಗೆ, ಉದ್ಯಮಿಗಳಿಗೆ ಸಮ್ಮೇಳನ ವೇದಿಕೆ ಕಲ್ಪಿಸಿದೆ. ಸಮ್ಮೇಳನದಲ್ಲಿ ಬಾಹ್ಯಾಕಾಶ ತಂತ್ರಜ್ಞಾನಕ್ಕೆ ಸಂಬಂಧಿಸಿದ ಹೊಸ ಅನ್ವೇಷಣೆಗಳು ಅನಾವರಣಗೊಳ್ಳಲಿವೆ.

ಬೆಂಗಳೂರು ಬಾಹ್ಯಾಕಾಶ ಸ್ಪೇಸ್​ ಎಕ್ಸಪೋ 2024 ಇಂದು (ಸೆ.18) ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಿದೆ. ಉದ್ಯಮಿಗಳು ಸಮ್ಮೇಳನಕ್ಕೆ ಯಾವುದೇ ದಿನ ಮತ್ತು ನಿಗದಿತ ಸಮಯದಲ್ಲಿ ಭೇಟಿ ನೀಡಬಹುದಾಗಿದೆ. ಇನ್ನು, ಸಾಮಾನ್ಯ ಜನರು ಮತ್ತು ವಿದ್ಯಾರ್ಥಿಗಳು ಕೊನೆಯ ದಿನ ಸಮ್ಮೇಳನಕ್ಕೆ ಭೇಟಿ ನೀಡಬಹುದಾಗಿದೆ.

ಈ ಸಮ್ಮೇಳನದಲ್ಲಿ ಡಿಟಿಹೆಚ್​ ಪೂರೈಕೆದಾರರು, ಎಲೆಕ್ಟ್ರಾನಿಕ್ಸ್​​ ಮತ್ತು ಆಪ್ಟಿಕ್ಸ್​, ಜಿಪಿಎಸ್​ ನ್ಯಾವಿಗೇಷನ್​, ಐಟಿ ಮತ್ತು ಬಾಹ್ಯಾಕಾಶಕ್ಕೆ ಸಂಬಂಧಿಸಿದ ಆಟೋಬೈಲ್​​, ಉಡಾವಣಗೆ ಬೇಕಾದ ಸೌಲಭ್ಯಗಳನ್ನು ಒದಗಿಸುವ, ಸಂಶೋಧನಾ ಸಂಸ್ಥೆಗಳು ಸೇರಿದಂತೆ ಹಲವಾರು ಕಂಪನಿಗಳು ಭಾಗಿಯಾಗಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:04 am, Wed, 18 September 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು