AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ 3 ದಿನ ಬೆಂಗಳೂರಿನಲ್ಲಿ ಸ್ಪೇಸ್​ ಎಕ್ಸ್​​ಪೋ 2024 ಸಮ್ಮೇಳನ

ಎಂಟನೇ ಆವೃತ್ತಿಯ ಅಂತರಾಷ್ಟ್ರೀಯ ಬೆಂಗಳೂರು ಸ್ಪೇಸ್​ ಎಕ್ಸ್​​ಪೋ 2024 ಸಮ್ಮೇಳನ ಇಂದಿನಿಂದ ಆರಂಭವಾಗಿದೆ. ಸಮ್ಮೇಳನ ಸೆಪ್ಟೆಂಬರ್​ 18 ರಿಂದ 20ರವರೆಗೆ ನಡೆಯಲಿದೆ. ಮೂರು ದಿನಗಳ ಈ ಸಮ್ಮೇಳನದಲ್ಲಿ ವಿವಿಧ ದೇಶಗಳ 250ಕ್ಕೂ ಅಧಿಕ ಗಣ್ಯರು ಮತ್ತು ಕಂಪನಿಗಳು ಭಾಗಿಯಾಗಲಿವೆ.

ಇಂದಿನಿಂದ 3 ದಿನ ಬೆಂಗಳೂರಿನಲ್ಲಿ ಸ್ಪೇಸ್​ ಎಕ್ಸ್​​ಪೋ 2024 ಸಮ್ಮೇಳನ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Sep 18, 2024 | 11:08 AM

Share

ಬೆಂಗಳೂರು, ಸೆಪ್ಟೆಂಬರ್​ 18: ಎಂಟನೇ ಆವೃತ್ತಿಯ ಅಂತರಾಷ್ಟ್ರೀಯ ಬೆಂಗಳೂರು ಸ್ಪೇಸ್​ ಎಕ್ಸ್​​ಪೋ 2024 (Bengaluru Space Expo -2024) ಸಮ್ಮೇಳನ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದೆ. ಈ ಸಮ್ಮೇಳನದಲ್ಲಿ ವಿವಿಧ ದೇಶಗಳ 250ಕ್ಕೂ ಅಧಿಕ ಗಣ್ಯರು ಮತ್ತು ಕಂಪನಿಗಳು ಭಾಗಿಯಾಗಲಿವೆ. ಈ ಅಂತರಾಷ್ಟ್ರೀಯ ಸಮ್ಮೇಳನವನ್ನು ಭಾರತೀಯ ಕೈಗಾರಿಕೆಗಳ ಒಕ್ಕೂಟ (CII) ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಆಯೋಜಿಸಿದೆ.

ಬಾಹ್ಯಾಕಾಶ ತಂತ್ರಜ್ಞಾನದ ವಿಚಾರವಾಗಿ ಚರ್ಚಿಸಲು ಮತ್ತು ಹೊಸದನ್ನು ಅನ್ವೇಷಿಸಲು ಸಂಶೋಧಕರಿಗೆ, ಉದ್ಯಮಿಗಳಿಗೆ ಸಮ್ಮೇಳನ ವೇದಿಕೆ ಕಲ್ಪಿಸಿದೆ. ಸಮ್ಮೇಳನದಲ್ಲಿ ಬಾಹ್ಯಾಕಾಶ ತಂತ್ರಜ್ಞಾನಕ್ಕೆ ಸಂಬಂಧಿಸಿದ ಹೊಸ ಅನ್ವೇಷಣೆಗಳು ಅನಾವರಣಗೊಳ್ಳಲಿವೆ.

ಬೆಂಗಳೂರು ಬಾಹ್ಯಾಕಾಶ ಸ್ಪೇಸ್​ ಎಕ್ಸಪೋ 2024 ಇಂದು (ಸೆ.18) ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಿದೆ. ಉದ್ಯಮಿಗಳು ಸಮ್ಮೇಳನಕ್ಕೆ ಯಾವುದೇ ದಿನ ಮತ್ತು ನಿಗದಿತ ಸಮಯದಲ್ಲಿ ಭೇಟಿ ನೀಡಬಹುದಾಗಿದೆ. ಇನ್ನು, ಸಾಮಾನ್ಯ ಜನರು ಮತ್ತು ವಿದ್ಯಾರ್ಥಿಗಳು ಕೊನೆಯ ದಿನ ಸಮ್ಮೇಳನಕ್ಕೆ ಭೇಟಿ ನೀಡಬಹುದಾಗಿದೆ.

ಈ ಸಮ್ಮೇಳನದಲ್ಲಿ ಡಿಟಿಹೆಚ್​ ಪೂರೈಕೆದಾರರು, ಎಲೆಕ್ಟ್ರಾನಿಕ್ಸ್​​ ಮತ್ತು ಆಪ್ಟಿಕ್ಸ್​, ಜಿಪಿಎಸ್​ ನ್ಯಾವಿಗೇಷನ್​, ಐಟಿ ಮತ್ತು ಬಾಹ್ಯಾಕಾಶಕ್ಕೆ ಸಂಬಂಧಿಸಿದ ಆಟೋಬೈಲ್​​, ಉಡಾವಣಗೆ ಬೇಕಾದ ಸೌಲಭ್ಯಗಳನ್ನು ಒದಗಿಸುವ, ಸಂಶೋಧನಾ ಸಂಸ್ಥೆಗಳು ಸೇರಿದಂತೆ ಹಲವಾರು ಕಂಪನಿಗಳು ಭಾಗಿಯಾಗಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:04 am, Wed, 18 September 24

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್