AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Peenya flyover: ಪೀಣ್ಯ ಫ್ಲೈಓವರ್ ಮೇಲೆ ಸ್ಪೀಡ್ ಬ್ರೇಕ್, ಅತಿ ವೇಗವಾಗಿ ವಾಹನ ಸಂಚರಿಸಿದರೆ ದಂಡ

ಪೀಣ್ಯ ಮೇಲ್ಸೇತುವೆ ಮೇಲೆ ಭಾರೀ ವಾಹನಗಳ ಓಡಾಟ ಯಾವಾಗ ಎಂದು ಎದುರು ನೋಡುತ್ತಿದ್ದವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಬೆಂಗಳೂರು ಸಂಚಾರಿ ಪೊಲೀಸರು ಸಿಹಿ ಸುದ್ದಿ ನೀಡಿದ್ದಾರೆ. ಜುಲೈ 29ರಿಂದ ಪ್ಲೈಓವರ್ ಮೇಲೆ ಎಲ್ಲಾ ರೀತಿಯ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲು ಸಿದ್ಧತೆ ಮಾಡಲಾಗಿದೆ. ಆದರೆ, ವಾಹನ ಸವಾರರ ಸ್ಪೀಡ್‌ಗೆ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದ್ದಾರೆ.

Peenya flyover: ಪೀಣ್ಯ ಫ್ಲೈಓವರ್ ಮೇಲೆ ಸ್ಪೀಡ್ ಬ್ರೇಕ್, ಅತಿ ವೇಗವಾಗಿ ವಾಹನ ಸಂಚರಿಸಿದರೆ ದಂಡ
ಪೀಣ್ಯ ಫ್ಲೈಓವರ್
Vinay Kashappanavar
| Updated By: Ganapathi Sharma|

Updated on: Jul 26, 2024 | 7:22 AM

Share

ಬೆಂಗಳೂರು, ಜುಲೈ 26: ಪೀಣ್ಯ ಮೇಲ್ಸೇತುವೆ ಮೇಲೆ ಭಾರೀ ವಾಹನಗಳ ಓಡಾಟಕ್ಕೆ ಯಾವಾಗ ಅವಕಾಶ ಸಿಗಬಹುದು ಎಂಬ ಕಾತರ ಬೆಂಗಳೂರಿಗರಲ್ಲಿತ್ತು. ಇದೀಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಜುಲೈ 29 ರಿಂದ ಪೀಣ್ಯ ಪ್ಲೈಓವರ್ ಮೇಲೆ ಎಲ್ಲಾ ಮಾದರಿಯ ವಾಹನಗಳು ಓಡಾಡಲು ಅವಕಾಶ ಕ್ಪಿಸಿದೆ. ಐಐಎಸ್​​ಸಿ ಅಧ್ಯಯನದ ನಂತರ ಘನ ವಾಹನಗಳ ಓಡಾಕ್ಕೆ ಗ್ರೀನ್​ ಸಿಗ್ನಲ್ ಸಿಕ್ಕ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಬೆಂಗಳೂರು ಸಂಚಾರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಆದರೆ, ವಾಹನ ಸವಾರರಿಗೆ ಕೆಲವೊಂದು ಅನುಸರಿಸಲೇ ಬೇಕಾದ ಷರತ್ತುಗಳನ್ನೂ ವಿಧಿಸಿದ್ದಾರೆ.

ಪೀಣ್ಯ ಮೇಲ್ಸೇತುವೆಯ ಎರಡು ಪಿಲ್ಲರ್​​ಗಳಿಗೆ ಈಗಾಗಲೇ ಕೇಬಲ್​​ಗಳನ್ನ ಅಳವಡಿಕೆ ಮಾಡಲಾಗಿದೆ. ‌ಅದಕ್ಕೆ ಸಿಮೆಂಟ್ ಕಾರ್ಯ ಕೂಡ ಮಾಡಬೇಕಿದೆ. ಮತ್ತಷ್ಟು ಕೇಬಲ್ ಅಳವಡಿಕೆ ಕೂಡ ಮಾಡಬೇಕಿದೆ. ಹೀಗಾಗಿ ವಿಶೇಷ ಕಾಮಗಾರಿ ಅವಶ್ಯಕತೆ ಇರುವ ಹಿನ್ನೆಲೆ ಇಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅನುಮತಿ ಕೊಟ್ಟರೂ ವಾಹನಗಳ ಓಡಾಟದ ಸ್ಪೀಡ್‌ಗೆ ಬ್ರೇಕ್ ಹಾಕಿದೆ.

ಪೀಣ್ಯ ಫ್ಲೈಓವರ್ ವೇಗದ ಮಿತಿ ಎಷ್ಟು?

ಪೀಣ್ಯ ಫ್ಲೈಓವರ್‌ ಮೇಲೆ ಸಂಚಾರ ಮಾಡುವ ವಾಹನಗಳು ಗಂಟೆಗೆ 40-50 ಕಿಮೀ ವೇಗದಲ್ಲಿ ಮಾತ್ರ ಸಂಚಾರ ಮಾಡಬೇಕೆಂದು ಐಐಎಸ್‌ಸಿ ತಜ್ಞರು ಹೇಳಿದ್ದಾರೆ. ಸಿಮೆಂಟ್‌ ಕಾರ್ಯ ಮಾಡಬೇಕಾದಾಗ ಹೆಚ್ಚು ಸ್ಪೀಡ್‌ನಲ್ಲಿ ವಾಹನಗಳ ಓಡಾಟ ನಡೆಸಿದರೆ, ವೈಬ್ರೆಷನ್ ಉಂಟಾಗಿ ಅದರಿಂದ ಕಾಮಗಾರಿಗೆ ಅಡಚಣೆಯಾಗಲಿದೆ. ಈ ಹಿನ್ನೆಲೆ ಸ್ಪೀಡ್‌ ಲಿಮಿಟ್ ಅಳವಡಿಸಲಾಗಿದೆ.

ಒಂದು ದಿನ ಘನ ವಾಹನ ಸಂಚಾರಕ್ಕಿಲ್ಲ ಅನುಮತಿ

ಪ್ರತಿ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೂ ಘನ ವಾಹನಗಳ ಓಡಾಟ ಬಂದ್ ಇರಲಿದೆ. ವಾಹನ ಸವಾರರು ಬೆಂಗಳೂರಿಗೆ ಬರಲು ಬದಲಿ ಮಾರ್ಗ ಅನುಸರಿಬೇಕಾಗುತ್ತದೆ. ಪ್ಲೈ ಓವರ್ ಎಡಪಥದಲ್ಲಿ ಗಂಟೆಗೆ 40 ಕಿಮೀ ವೇಗದಲ್ಲಿ ಸಂಚರಿಸಲು ಟ್ರಾಫಿಕ್ ಪೊಲೀಸರು ಸೂಚಿಸಿದ್ದಾರೆ.

ಇದನ್ನೂ ಓದಿ: ಪೀಣ್ಯ ಮೇಲ್ಸೇತುವೆ ಜುಲೈ ಕೊನೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಮುಕ್ತ

ಪೀಣ್ಯ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಓಡಾಟಕ್ಕೆ ಅವಕಾಶ ಇಲ್ಲದ ಕಾರಣ ಗೊರಗುಂಟೆ‌ಪಾಳ್ಯ, ಜಾಲಹಳ್ಳಿ, ದಾಸರಹಳ್ಳಿ, ಎಂಟನೇಮೈಲಿ ಭಾಗದಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗುತ್ತಾ ಇತ್ತು. ವಾಹನ ಸಂಚಾರಕ್ಕೆ ಅವಕಾಶ ಕೊಟ್ಟ ಕಾರಣ ಟ್ರಾಫಿಕ್ ಸಮಸ್ಯೆ ಕಡಿಮೆ ಆಗುವ ನಿರೀಕ್ಷೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ