AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಿಎಂಡಬ್ಲ್ಯು ಬೈಕ್​ನ ವೇಗ ತೋರಿಸಲು ಹೋಗಿ ಅಪಘಾತ, ವ್ಯಕ್ತಿ ಸಾವು

ನಾಸಿರ್ ಮತ್ತು ಮುದಾಸಿರ್ ಇಬ್ಬರೂ ಬೈಕ್ ಡೀಲರ್ ಆಗಿದ್ದರು. ಮುದಾಸಿರ್ ತನ್ನ ಗ್ರಾಹಕರೊಬ್ಬರಿಗೆ ಅತ್ಯಾಧುನಿಕ ಬೈಕ್‌ಗಾಗಿ ಹುಡುಕುತ್ತಿದ್ದರು. ಮುದಾಸಿರ್‌ಗೆ ತೋರಿಸಲು ನಾಸಿರ್‌ ಬಿಎಂಡಬ್ಲ್ಯು ಬೈಕ್‌ ಪಡೆದಿದ್ದರು. ಇವರಿಬ್ಬರು ಬೈಕ್​ನಲ್ಲಿ ತೆರಳುತ್ತಿದ್ದಾಗ ಅಶೋಕ ಪಿಲ್ಲರ್ ಬಳಿ ಬೈಕ್ ಕಾರಿಗೆ ಡಿಕ್ಕಿ ಹೊಡೆದಿದೆ.

ಬೆಂಗಳೂರು: ಬಿಎಂಡಬ್ಲ್ಯು ಬೈಕ್​ನ ವೇಗ ತೋರಿಸಲು ಹೋಗಿ ಅಪಘಾತ, ವ್ಯಕ್ತಿ ಸಾವು
ಬೆಂಗಳೂರು: ಬಿಎಂಡಬ್ಲ್ಯು ಬೈಕ್​ನ ವೇಗ ತೋರಿಸಲು ಹೋಗಿ ಅಪಘಾತ, ವ್ಯಕ್ತಿ ಸಾವು
TV9 Web
| Edited By: |

Updated on: Dec 21, 2023 | 10:03 AM

Share

ಬೆಂಗಳೂರು, ಡಿಸೆಂಬರ್ 21: ಬೆಂಗಳೂರಿನ ಅಶೋಕ ಪಿಲ್ಲರ್ ಬಳಿ ಅತ್ಯಾಧುನಿಕ ಬಿಎಂಡಬ್ಲ್ಯು ಬೈಕ್ (BMW Bike) ಕಾರಿಗೆ ಡಿಕ್ಕಿ (Accident) ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಇಬ್ಬರು ಬೈಕ್ ಡೀಲರ್‌ಗಳು ಬಿಎಂಡಬ್ಲ್ಯು 1000 ಸಿಸಿ ಬೈಕ್‌ನ ವೇಗದ ಬಗ್ಗೆ ಮಾಹಿತಿ ನೀಡಲು ಅದನ್ನು ವೇಗವಾಗಿ ಓಡಿಸಿ ತೋರಿಸಿದಾಗ ಘಟನೆ ಸಂಭವಿಸಿದೆ. ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರನ್ನು ಶೇಖ್ ನಾಸಿರ್ (32) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಸೈಯದ್ ಮುದಾಸಿರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾಸಿರ್ ಮತ್ತು ಮುದಾಸಿರ್ ಇಬ್ಬರೂ ಬೈಕ್ ಡೀಲರ್ ಆಗಿದ್ದರು. ಮುದಾಸಿರ್ ತನ್ನ ಗ್ರಾಹಕರೊಬ್ಬರಿಗೆ ಅತ್ಯಾಧುನಿಕ ಬೈಕ್‌ಗಾಗಿ ಹುಡುಕುತ್ತಿದ್ದರು. ಮುದಾಸಿರ್‌ಗೆ ತೋರಿಸಲು ನಾಸಿರ್‌ ಬಿಎಂಡಬ್ಲ್ಯು ಬೈಕ್‌ ಪಡೆದಿದ್ದರು.

ಇವರಿಬ್ಬರು ಬೈಕ್​ನಲ್ಲಿ ತೆರಳುತ್ತಿದ್ದಾಗ ಅಶೋಕ ಪಿಲ್ಲರ್ ಬಳಿ ಬೈಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮುದಾಸಿರ್ ದೂರ ಎಸೆಯಲ್ಪಟ್ಟರು. ಗಾಯಾಳುಗಳಿಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ನಾಸಿರ್ ಮೃತಪಟ್ಟಿದ್ದಾರೆ. ಮುದಾಸಿರ್ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೈಕ್ ಮಾಧವ್ ಪಾರ್ಕ್‌ನಿಂದ ಅಶೋಕ ಪಿಲ್ಲರ್‌ಗೆ ತೆರಳುತ್ತಿದ್ದು, ಕಾರು ಕನಪಾಳ್ಯದಿಂದ ಬರುತ್ತಿತ್ತು. ಕಾರು ಯು-ಟರ್ನ್ ತೆಗೆದುಕೊಳ್ಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಅತಿವೇಗದಲ್ಲಿ ಸಂಚರಿಸಿದ್ದು, ಸಮಯಕ್ಕೆ ಸರಿಯಾಗಿ ಬೈಕ್ ನಿಯಂತ್ರಿಸಲು ಸಾಧ್ಯವಾಗದಿರುವುದು ದುರ್ಘಟನೆಗೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಇದನ್ನೂ ಓದಿ: ಅಫಜಲಪುರ-ಕಲಬುರಗಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಮಾಲೀಕರನ್ನು ಪತ್ತೆಹಚ್ಚಲು ಪೊಲೀಸರು ಬೈಕ್‌ನ ನೋಂದಣಿ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ. ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಯಶವಂತಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಎಂಡಬ್ಲ್ಯು ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ